ಹಾಸನ: ಅತ್ಯಾಚಾರ, ಪೆನ್ಡ್ರೈವ್ ಪ್ರಕರಣದ ಆರೋಪಿ, ಹಾಸನ ಸಂಸದ ಪ್ರಜ್ವಲ್ ರೇವಣ್ಣನನ್ನು ಎಸ್ಐಟಿ (ವಿಶೇಷ ತನಿಖಾ ದಳ) ಸ್ಥಳ ಮಹಜರಿಗಾಗಿ ಹೋಳೆನರಸೀಪುರದ ಚೆನ್ನಾಂಬಿಕ ನಿವಾಸಕ್ಕೆ ಇಂದು (ಜೂನ್.8) ಮದ್ಯಾಹ್ನ ಕೆರೆತಂದಿದ್ದಾರೆ.
ಕ್ಯೂಆರ್ಟಿ ವಾಹನದಲ್ಲಿ ಪ್ರಜ್ವಲ್ನ್ನು ಯಾವುದೇ ಕ್ಯಾಮರಾಗಳಿಗೂ ಕಾಣದಂತೆ ಎಸ್ಐಟಿ ಅಧಿಕಾರಿಗಳು ಹೊಳೆ ನರಸೀಪುರಕ್ಕೆ ಕರೆತಂದಿದ್ದಾರೆ. ಮುಂಜಾಗ್ರತಾ ಕ್ರಮವಾಗಿ ಚೆನ್ನಾಂಬಿಕಾ ನಿವಾಸದ ಸುತ್ತಾ ಹಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿತ್ತು.
ಪ್ರಜ್ವಲ್ ಮೇಲಿನ ಪ್ರಕರಣಗಳಿಗೆ ಸಂಬಂಧಿಸಿದಂತೆ ಎಸ್ಐಟಿ ಅಧಿಕಾರಿಗಳು ಘಟನೆ ನಡೆದ ಸ್ಥಳಗಳ ಮಹಜರಿಗಾಗಿ ಅವರನ್ನು ಜಿಲ್ಲೆಗೆ ಕರೆತಂದಿದ್ದು, ಅವರ ಹೊಳೆ ನರಸೀಪುರ ನಿವಾಸದಲ್ಲಿ ಸ್ಥಳ ಮಹಜರು ನಡೆಸಿದ್ದಾರೆ. ಬಳಿಕ ಅವರನ್ನು ಹಾಸನಕ್ಕೆ ಕರೆದೊಯ್ಯಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…
ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…