ರಾಜ್ಯ

ಪರಿಸರ ಸ್ನೇಹಿ ಗಣಪನನ್ನೇ ಕೂರಿಸಿ: ಮಕ್ಕಳಿಗೆ ಕೆವಿಪಿ ಕರೆ

ಬೆಂಗಳೂರು: ಶ್ರಮ ಮತ್ತು ಬೆವರಿನ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಗಣಪ ನಿಜವಾದ ಪರಿಸರ ಪ್ರೇಮಿ. ಆದ್ದರಿಂದ ಪ್ರತೀ ಮನೆಯಲ್ಲೂ ಮಕ್ಕಳು ಪರಿಸರ ಸ್ನೇಹಿ ಗಣೇಶನನ್ನೇ ಕೂರಿಸಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮಕ್ಕಳಿಗೆ ಕರೆ ನೀಡಿದರು.

ಜವಾಹರ ಬಾಲ ಭವನ ಹಮ್ಮಿಕೊಂಡಿದ್ದ, “ಮಕ್ಕಳಿಗೆ ಜೇಡಿ ಮಣ್ಣಿನ ಗಣಪ ಮಾಡುವ ಕಾರ್ಯಾಗಾರ”ವನ್ನು ಸೋಮವಾರ (ಆ.2) ಉದ್ಘಾಟಿಸಿ ಮಾತನಾಡಿದರು.

ತನ್ನ ಹೊಟ್ಟೆಗೆ ಹಾವನ್ನು ಸುತ್ತಿಕೊಂಡು, ಇಲಿಯನ್ನು ವಾಹನ ಮಾಡಿಕೊಂಡಿರುವ ಗಣೇಶ ಪರಿಸರ ಪ್ರೇಮಿ. ಹೀಗಾಗಿ ಗಣೇಶ ಹಬ್ಬ ಪರಿಸರ ಸ್ನೇಹಿಯಾಗಿರಬೇಕು. ರಸಾಯನಿಕ ಬೆರೆಸಿದ ಗಣೇಶ ಮೂರ್ತಿಗಳನ್ನು ಕೆರೆಗೆ, ನದಿಗೆ, ಸಮುದ್ರಕ್ಕೆ ವಿಸರ್ಜಿಸಿ ಸಂಭ್ರಮಿಸುವುದು ಗಣೇಶನಿಗೆ ಇಷ್ಟ ಆಗುವುದಿಲ್ಲ. ಹೀಗಾಗಿ ಮಣ್ಣಿನ‌ ಗಣಪನನ್ನು ಮನೆಯಲ್ಲಿ ಕೂರಿಸಿ ಆಗ ಗಣೇಶ ಖುಷಿಯಾಗುತ್ತಾನೆ ಎಂದು ಮಕ್ಕಳಿಗೆ ಪರಿಸರ ಪಾಠ ಮಾಡಿ ಸಲಹೆ ನೀಡಿದರು.

ಮಕ್ಕಳಿಗೆ ಗಣೇಶನ ಸೃಷ್ಟಿಯ ಕತೆ ಹೇಳಿದ ಕೆ.ವಿ.ಪ್ರಭಾಕರ್ ಅವರು ಗಣೇಶ ಆಗಿದ್ದೇ ಬೆವರಿನಿಂದ. ಶ್ರಮ ಮತ್ತು ಬೆವರಿನ ಸಂಸ್ಕೃತಿಯ ಪ್ರತೀಕ ಗಣಪ. ತಂದೆ ತಾಯಿಯರಿಗಿಂತ ದೊಡ್ಡ ದೇವರು ಯಾವುದೂ ಇಲ್ಲ ಎಂದು ಗಣೇಶ ನಂಬಿದ್ದ. ಆದ್ದರಿಂದ ತಂದೆ, ತಾಯಿಯರನ್ನು ಹೆಚ್ಚು ಗೌರವಿಸಿ, ಅವರ ಮಾತು ಕೇಳಿ ಎಂದರು.

ಮಣ್ಣಿನ‌ ಗಣಪ ಮಾಡುವ ಕಾರ್ಯಾಗಾರ ಅತ್ಯಂತ ಸೃಜನಶೀಲವಾದದು.‌ ಮಕ್ಕಳ ಸುಪ್ತ ಪ್ರತಿಭೆಗಳನ್ನು ವ್ಯಕ್ತಪಡಿಸಲು ಉಪಯುಕ್ತವಾದದು. ಇಂಥಾ ವೇದಿಕೆ ಕಲ್ಪಿಸಿಕೊಟ್ಟ ಬಾಲ ಭವನದ ಅಧ್ಯಕ್ಷ ಬಿ.ಆರ್.ನಾಯ್ಡು ಅವರ ಕಾಳಜಿ ಮತ್ತು‌ ಶ್ರಮ ಅಭಿನಂದನೀಯ ಎಂದರು.

ಮಕ್ಕಳ ಬೆರಳುಗಳಲ್ಲಿ ಮೂಡಿಬಂದ ಮಣ್ಣಿನ ಗಣಪಗಳು ಅದ್ಭುತವಾಗಿದ್ದವು ಎಂದು ಶ್ಲಾಘಿಸಿದ ಪ್ರಭಾಕರ್ ಅವರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪ್ರತೀ ಮಕ್ಕಳಿಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಇದಕ್ಕೆ ಪ್ರತಿಯಾಗಿ ಮಕ್ಕಳು ತಾವು ಮಾಡಿದ್ದ ಗಣಪನನ್ನು ಪ್ರಭಾಕರ್ ಅವರಿಗೆ ಕಾಣಿಕೆಯಾಗಿ ನೀಡಿದರು.

ಚಲನಚಿತ್ರ ನಟಿ ಪ್ರೇಮಾ ಅವರು‌ ಮಕ್ಕಳಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ಬಾಲ ಭವನದ ಅಧ್ಯಕ್ಷರಾದ ಬಿ.ಆರ್.ನಾಯ್ಡು ಮತ್ತು ಅಧಿಕಾರಿಗಳು ವೇದಿಕೆಯಲ್ಲಿದ್ದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಕೋಲ್ಕತ್ತಾ: ಟೆನಿಸ್‌ ದಂತಕಥೆ ಲಿಯಾಂಡರ್‌ ಪೇಸ್‌ ಬಿಜೆಪಿ ಸೇರ್ಪಡೆ

ಕೋಲ್ಕತ್ತಾ: ಪಶ್ಚಿಮ ಬಂಗಾಳ ಚುನಾವಣೆಗೆ ದಿನಗಣನೆ ಆರಂಭವಾಗಿರುವ ಬೆನ್ನಲ್ಲೇ ಭಾರತೀಯ ಟೆನಿಸ್‌ ಐಕಾನ್‌ ಲಿಯಾಂಡರ್‌ ಪೇಸ್‌ ಇಂದು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.…

11 seconds ago

ಖಾಸಗಿ ಶಾಲೆಗಳಿಂದ ಶುಲ್ಕ ಏರಿಕೆ: ಮಧ್ಯಮ ವರ್ಗದ ಪೋಷಕರಿಗೆ ಸಂಕಷ್ಟ

ಬೆಂಗಳೂರು: ಖಾಸಗಿ ಶಾಲೆಗಳು ಪರೀಕ್ಷೆಗಳು ಮುಗಿಯುತ್ತಿದ್ದಂತೆಯೇ 2026-27ನೇ ಸಾಲಿನ ಶುಲ್ಕವನ್ನು 5-10%, ಮತ್ತೆ ಕೆಲವು 10-15% ವರೆಗೆ ಏರಿಕೆ ಮಾಡಿವೆ.…

56 seconds ago

ಬೂದಿಪಡಗ ಆನೆ ಶಿಬಿರದಿಂದ 63 ವರ್ಷದ ಗಜೇಂದ್ರ ಆನೆ ಮತ್ತಿಗೋಡು ಶಿಬಿರಕ್ಕೆ ಸ್ಥಳಾಂತರ

ಬೆಂಗಳೂರು: ಚಾಮರಾಜನಗರ ಜಿಲ್ಲೆ ಬೂದಿಪಡಗ ಆನೆ ಶಿಬಿರದಲ್ಲಿ ಒಂಟಿಯಾಗಿದ್ದ 63 ವರ್ಷದ ಗಜೇಂದ್ರ ಆನೆಯನ್ನು ಅರಣ್ಯ ಸಚಿವ ಈಶ್ವರ ಖಂಡ್ರೆ…

7 mins ago

ಡಿಜಿಟಲ್‌ ಪಾವತಿಗೆ ಹೊಸ ಮಾರ್ಗಸೂಚಿ ಪ್ರಕಟಿಸಿದ ಆರ್‌ಬಿಐ

ನವದೆಹಲಿ: ಡಿಜಿಟಲ್‌ ವಹಿವಾಟುಗಳನ್ನು ಹೆಚ್ಚು ಸುರಕ್ಷಿತಗೊಳಿಸಲು ಹಾಗೂ ವಂಚನೆಗಳನ್ನು ತಡೆಯುವ ಉದ್ದೇಸದಿಂದ ರಿಸರ್ವ್‌ ಬ್ಯಾಂಕ್‌ ಆಫ್‌ ಇಂಡಿಯಾ ಹೊಸ ಮಾರ್ಗಸೂಚಿ…

16 mins ago

ನಾಳೆ ಸಿದ್ಧಗಂಗಾ ಮಠಕ್ಕೆ ರಾಷ್ಟ್ರಪತಿ ದ್ರೌಪತಿ ಮುರ್ಮು ಭೇಟಿ

ತುಮಕೂರು: ನಾಳೆ(ಏಪ್ರಿಲ್.‌1ರಂದು) ತ್ರಿವಿಧ ದಾಸೋಹಿ, ಶತಾಯುಷಿ ಸಿದ್ಧಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 119ನೇ ಜನ್ಮದಿನೋತ್ಸವ ಅದ್ಧೂರಿಯಾಗಿ ನಡೆಯಲಿದೆ. ಈ…

42 mins ago

ಹಾಸನ: ಹೆತ್ತ ತಾಯಿ ಮೇಲೆ ಕಲ್ಲು ಎತ್ತಿಹಾಕಿ ಕೊಲೆಗೆ ಯತ್ನಿಸಿದ ಮಗ: ಕಾರಣ ಇಷ್ಟೇ

ಹಾಸನ: 40 ವರ್ಷವಾದರೂ ತನಗೆ ಮದುವೆ ಮಾಡಿಸಿಲ್ಲ ಎಂಬ ಕಾರಣಕ್ಕೆ ಹೆತ್ತ ತಾಯಿ ಮೇಲೆ ಕಲ್ಲು ಎತ್ತಿ ಹಾಕಿ ಮಗನೇ…

53 mins ago