ಬೆಂಗಳೂರು: ಶ್ರಮ ಮತ್ತು ಬೆವರಿನ ಸಂಸ್ಕೃತಿಯನ್ನು ಎತ್ತಿ ಹಿಡಿಯುವ ಗಣಪ ನಿಜವಾದ ಪರಿಸರ ಪ್ರೇಮಿ. ಆದ್ದರಿಂದ ಪ್ರತೀ ಮನೆಯಲ್ಲೂ ಮಕ್ಕಳು ಪರಿಸರ ಸ್ನೇಹಿ ಗಣೇಶನನ್ನೇ ಕೂರಿಸಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಮಕ್ಕಳಿಗೆ ಕರೆ ನೀಡಿದರು.
ಜವಾಹರ ಬಾಲ ಭವನ ಹಮ್ಮಿಕೊಂಡಿದ್ದ, “ಮಕ್ಕಳಿಗೆ ಜೇಡಿ ಮಣ್ಣಿನ ಗಣಪ ಮಾಡುವ ಕಾರ್ಯಾಗಾರ”ವನ್ನು ಸೋಮವಾರ (ಆ.2) ಉದ್ಘಾಟಿಸಿ ಮಾತನಾಡಿದರು.
ತನ್ನ ಹೊಟ್ಟೆಗೆ ಹಾವನ್ನು ಸುತ್ತಿಕೊಂಡು, ಇಲಿಯನ್ನು ವಾಹನ ಮಾಡಿಕೊಂಡಿರುವ ಗಣೇಶ ಪರಿಸರ ಪ್ರೇಮಿ. ಹೀಗಾಗಿ ಗಣೇಶ ಹಬ್ಬ ಪರಿಸರ ಸ್ನೇಹಿಯಾಗಿರಬೇಕು. ರಸಾಯನಿಕ ಬೆರೆಸಿದ ಗಣೇಶ ಮೂರ್ತಿಗಳನ್ನು ಕೆರೆಗೆ, ನದಿಗೆ, ಸಮುದ್ರಕ್ಕೆ ವಿಸರ್ಜಿಸಿ ಸಂಭ್ರಮಿಸುವುದು ಗಣೇಶನಿಗೆ ಇಷ್ಟ ಆಗುವುದಿಲ್ಲ. ಹೀಗಾಗಿ ಮಣ್ಣಿನ ಗಣಪನನ್ನು ಮನೆಯಲ್ಲಿ ಕೂರಿಸಿ ಆಗ ಗಣೇಶ ಖುಷಿಯಾಗುತ್ತಾನೆ ಎಂದು ಮಕ್ಕಳಿಗೆ ಪರಿಸರ ಪಾಠ ಮಾಡಿ ಸಲಹೆ ನೀಡಿದರು.
ಮಕ್ಕಳಿಗೆ ಗಣೇಶನ ಸೃಷ್ಟಿಯ ಕತೆ ಹೇಳಿದ ಕೆ.ವಿ.ಪ್ರಭಾಕರ್ ಅವರು ಗಣೇಶ ಆಗಿದ್ದೇ ಬೆವರಿನಿಂದ. ಶ್ರಮ ಮತ್ತು ಬೆವರಿನ ಸಂಸ್ಕೃತಿಯ ಪ್ರತೀಕ ಗಣಪ. ತಂದೆ ತಾಯಿಯರಿಗಿಂತ ದೊಡ್ಡ ದೇವರು ಯಾವುದೂ ಇಲ್ಲ ಎಂದು ಗಣೇಶ ನಂಬಿದ್ದ. ಆದ್ದರಿಂದ ತಂದೆ, ತಾಯಿಯರನ್ನು ಹೆಚ್ಚು ಗೌರವಿಸಿ, ಅವರ ಮಾತು ಕೇಳಿ ಎಂದರು.
ಮಣ್ಣಿನ ಗಣಪ ಮಾಡುವ ಕಾರ್ಯಾಗಾರ ಅತ್ಯಂತ ಸೃಜನಶೀಲವಾದದು. ಮಕ್ಕಳ ಸುಪ್ತ ಪ್ರತಿಭೆಗಳನ್ನು ವ್ಯಕ್ತಪಡಿಸಲು ಉಪಯುಕ್ತವಾದದು. ಇಂಥಾ ವೇದಿಕೆ ಕಲ್ಪಿಸಿಕೊಟ್ಟ ಬಾಲ ಭವನದ ಅಧ್ಯಕ್ಷ ಬಿ.ಆರ್.ನಾಯ್ಡು ಅವರ ಕಾಳಜಿ ಮತ್ತು ಶ್ರಮ ಅಭಿನಂದನೀಯ ಎಂದರು.
ಮಕ್ಕಳ ಬೆರಳುಗಳಲ್ಲಿ ಮೂಡಿಬಂದ ಮಣ್ಣಿನ ಗಣಪಗಳು ಅದ್ಭುತವಾಗಿದ್ದವು ಎಂದು ಶ್ಲಾಘಿಸಿದ ಪ್ರಭಾಕರ್ ಅವರು ಕಾರ್ಯಾಗಾರದಲ್ಲಿ ಭಾಗವಹಿಸಿದ್ದ ಪ್ರತೀ ಮಕ್ಕಳಿಗೂ ಪ್ರಶಸ್ತಿ ಪತ್ರ ನೀಡಿ ಗೌರವಿಸಿದರು. ಇದಕ್ಕೆ ಪ್ರತಿಯಾಗಿ ಮಕ್ಕಳು ತಾವು ಮಾಡಿದ್ದ ಗಣಪನನ್ನು ಪ್ರಭಾಕರ್ ಅವರಿಗೆ ಕಾಣಿಕೆಯಾಗಿ ನೀಡಿದರು.
ಚಲನಚಿತ್ರ ನಟಿ ಪ್ರೇಮಾ ಅವರು ಮಕ್ಕಳಿಗೆ ಸ್ಫೂರ್ತಿದಾಯಕ ಮಾತುಗಳನ್ನಾಡಿದರು. ಬಾಲ ಭವನದ ಅಧ್ಯಕ್ಷರಾದ ಬಿ.ಆರ್.ನಾಯ್ಡು ಮತ್ತು ಅಧಿಕಾರಿಗಳು ವೇದಿಕೆಯಲ್ಲಿದ್ದರು.
ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…
ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…
ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…
ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್ ಸಹ ಕಳವಳ…
ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…
ಗಾಜಿಯಾಬಾದ್ : ಆನ್ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…