ಬೆಂಗಳೂರು: ಇಲ್ಲಿನ ಆರ್.ಆರ್ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಬಿ.ಕೆ ಸಿಂಗ್ ನೇತೃತ್ವದಲ್ಲಿ ಎಸ್ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಾತಿ ನಿಂದನೆ, ಜೀವ ಬೆದರಿಕೆ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಮುನಿರತ್ನ ಅವರನ್ನು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು.
ಸಿ.ಐ.ಡಿ. ಆರ್ಥಿಕ ಅಪರಾಧ ವಿಭಾಗದ ಅಪರ ಪೊಲೀಸ್ ಮಹಾ ನಿರ್ದೇಶಕ( ಎಡಿಜಿಪಿ)ಬಿ.ಕೆ.ಸಿಂಗ್ ನೇತೃತ್ವದಲ್ಲಿ ಎಸ್ ಐಟಿಯನ್ನು ಸರ್ಕಾರ ರಚಿಸಿದೆ. ಮುನಿರತ್ನ ವಿರುದ್ಧ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಕ್ರಿಮಿನಲ್ ಪ್ರಕರಣ ಮತ್ತು ರಾಮನಗರ ಜಿಲ್ಲೆಯ ಕಗ್ಗಲೀಪುರದಲ್ಲಿ ದಾಖಲಾಗಿರುವ ಮೊಕದ್ದಮೆಗೆ ಸಂಬಂಧಿಸಿದಂತೆ ಸಿಐಡಿಯ ವಿಶೇಷ ಎಸ್ಐಟಿ ತಂಡಕ್ಕೆ ತನಿಖೆಯ ಜವಾಬ್ದಾರಿಯನ್ನು ವಹಿಸಲಾಗಿದೆ.
ಎಸ್ ಐ ಟಿ ತಂಡದ ಪಟ್ಟಿ ಹೀಗಿದೆ…
ಬಿಕೆ ಸಿಂಗ್ : ( ಅಪರ ಪೊಲೀಸ್ ಮಹಾ ನಿರ್ದೇಶಕರು, ಆರ್ಥಿಕ ಅಪರಾಧಗಳು ಸಿಐಡಿ) ಎಸ್ ಐ ಟಿ ಮುಖ್ಯಸ್ಥರು
ಲಭುರಾಮ್ : ಐಪಿಎಸ್ ( ಪೊಲೀಸ್ ಮಹಾ ನಿರ್ದೇಶಕರು ಕೆಂದ್ರ ವಲಯ) ಸದಸ್ಯರು
ಸೌಮ್ಯಲತಾ : ಐಪಿಎಸ್ ( ಪೊಲೀಸ್ ಅಧೀಕ್ಷಕರು ರೈಲ್ವೇಸ್) ಸದಸ್ಯರು
ಸಿ.ಎ ಸೈಮನ್ (ಪೊಲೀಸ್ ಅಧೀಕ್ಷಕರು )ಸದಸ್ಯರು
ಏನಿದು ಮುನಿರತ್ನ ಪ್ರಕರಣ?
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ, ಅತ್ಯಾಚಾರದಂತಹ ಗಂಭೀರ ಸ್ವರೂಪದ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದಾರೆ. ಈ ನಡುವೆ ಹನಿಟ್ರ್ಯಾಪ್ ಆರೋಪವೂ ಅವರ ವಿರುದ್ಧ ಕೇಳಿ ಬರುತ್ತಿದೆ. ಹನಿಟ್ರ್ಯಾಪ್ ಮಾಡಲು ಎಚ್ಐವಿ ಪೀಡಿತರನ್ನು ಬಳಕೆ ಮಾಡಿಕೊಳ್ಳುತ್ತಿದ್ದರು ಎಂಬ ಆರೋಪ ಇದೆ. ಹಲವು ಪೊಲೀಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಈ ಮೂಲಕ ಖೆಡ್ಡಾಗೆ ಕೆಡವಿದ್ದರು ಎಂಬ ಆರೋಪ ಕೇಳಿ ಬಂದಿದೆ.
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…