ರಾಜ್ಯ

BJP ಶಾಸಕ ಮುನಿರತ್ನ ವಿರುದ್ಧದ ಕೇಸ್‌ಗಳ ತನಿಖೆಗೆ ಎಸ್‌ಐಟಿ ರಚನೆ

ಬೆಂಗಳೂರು: ಇಲ್ಲಿನ ಆರ್.ಆರ್‌ ನಗರದ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಬಿ.ಕೆ ಸಿಂಗ್‌ ನೇತೃತ್ವದಲ್ಲಿ ಎಸ್‌ಐಟಿ ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಜಾತಿ ನಿಂದನೆ, ಜೀವ ಬೆದರಿಕೆ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾಗಿದ್ದ ಮುನಿರತ್ನ ಅವರನ್ನು ಮಹಿಳೆಯೊಬ್ಬರ ಮೇಲೆ ಅತ್ಯಾಚಾರ ನಡೆಸಿದ ಆರೋಪದಲ್ಲಿ ಪೊಲೀಸರು ಮತ್ತೆ ಬಂಧಿಸಿದ್ದರು.

ಸಿ.ಐ.ಡಿ. ಆರ್ಥಿಕ ಅಪರಾಧ ವಿಭಾಗದ ಅಪರ ಪೊಲೀಸ್‌ ಮಹಾ ನಿರ್ದೇಶಕ( ಎಡಿಜಿಪಿ)ಬಿ.ಕೆ‌.ಸಿಂಗ್ ನೇತೃತ್ವದಲ್ಲಿ ಎಸ್ ಐಟಿಯನ್ನು ಸರ್ಕಾರ ರಚಿಸಿದೆ. ಮುನಿರತ್ನ ವಿರುದ್ಧ ಬೆಂಗಳೂರಿನ ವೈಯ್ಯಾಲಿಕಾವಲ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎರಡು ಕ್ರಿಮಿನಲ್ ಪ್ರಕರಣ ಮತ್ತು ರಾಮನಗರ ಜಿಲ್ಲೆಯ ಕಗ್ಗಲೀಪುರದಲ್ಲಿ ದಾಖಲಾಗಿರುವ ಮೊಕದ್ದಮೆಗೆ ಸಂಬಂಧಿಸಿದಂತೆ ಸಿಐಡಿಯ ವಿಶೇಷ ಎಸ್ಐಟಿ ತಂಡಕ್ಕೆ ತನಿಖೆಯ ಜವಾಬ್ದಾರಿಯನ್ನು ವಹಿಸಲಾಗಿದೆ.

ಎಸ್ ಐ ಟಿ ತಂಡದ ಪಟ್ಟಿ ಹೀಗಿದೆ…
ಬಿಕೆ ಸಿಂಗ್ : ( ಅಪರ ಪೊಲೀಸ್ ಮಹಾ ನಿರ್ದೇಶಕರು, ಆರ್ಥಿಕ ಅಪರಾಧಗಳು ಸಿಐಡಿ) ಎಸ್ ಐ ಟಿ ಮುಖ್ಯಸ್ಥರು
ಲಭುರಾಮ್ : ಐಪಿಎಸ್ ( ಪೊಲೀಸ್ ಮಹಾ ನಿರ್ದೇಶಕರು ಕೆಂದ್ರ ವಲಯ) ಸದಸ್ಯರು

ಸೌಮ್ಯಲತಾ : ಐಪಿಎಸ್ ( ಪೊಲೀಸ್ ಅಧೀಕ್ಷಕರು ರೈಲ್ವೇಸ್) ಸದಸ್ಯರು

ಸಿ.ಎ ಸೈಮನ್ (ಪೊಲೀಸ್ ಅಧೀಕ್ಷಕರು )ಸದಸ್ಯರು

ಏನಿದು ಮುನಿರತ್ನ ಪ್ರಕರಣ? 
ಬಿಜೆಪಿ ಶಾಸಕ ಮುನಿರತ್ನ ವಿರುದ್ಧ ಜಾತಿ ನಿಂದನೆ, ಅತ್ಯಾಚಾರದಂತಹ ಗಂಭೀರ ಸ್ವರೂಪದ ಆರೋಪಗಳು ಕೇಳಿ ಬಂದಿವೆ. ಈ ಹಿನ್ನೆಲೆಯಲ್ಲಿ ಬಂಧನಕ್ಕೊಳಗಾಗಿದ್ದಾರೆ. ಈ ನಡುವೆ ಹನಿಟ್ರ್ಯಾಪ್ ಆರೋಪವೂ ಅವರ ವಿರುದ್ಧ ಕೇಳಿ ಬರುತ್ತಿದೆ. ಹನಿಟ್ರ್ಯಾಪ್ ಮಾಡಲು ಎಚ್‌ಐವಿ ಪೀಡಿತರನ್ನು ಬಳಕೆ ಮಾಡಿಕೊಳ್ಳುತ್ತಿದ್ದರು ಎಂಬ ಆರೋಪ ಇದೆ. ಹಲವು ಪೊಲೀಸ್ ಅಧಿಕಾರಿಗಳು ಮತ್ತು ರಾಜಕಾರಣಿಗಳನ್ನು ಈ ಮೂಲಕ ಖೆಡ್ಡಾಗೆ ಕೆಡವಿದ್ದರು ಎಂಬ ಆರೋಪ ಕೇಳಿ ಬಂದಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ರಾಜ್ಯದಲ್ಲಿ ವಸತಿ ರಹಿತರಿಗೆ 5 ಲಕ್ಷ ನಿವೇಶನ : ಸಿಎಂ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ 5 ಲಕ್ಷ ನಿವೇಶನ ಹಂಚಿಕೆಗೆ ತೀರ್ಮಾನ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ತಿಳಿಸಿದರು. ಸಿಎಂ ಡಿ.ಕೆ.ಶಿವಕುಮಾರ್‌ ನೇತೃತ್ವದ…

11 hours ago

ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ

ಮೈಸೂರು: ಚಿತ್ರದುರ್ಗದ  ರೇಣುಕಾಸ್ವಾಮಿ ಕೊಲೆ  ಪ್ರಕರಣದಲ್ಲಿ ಜೈಲು ಸೇರಿರುವ ಬೆನ್ನಲ್ಲೇ ನಟ ದರ್ಶನ್‌ಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಮೈಸೂರಿನ…

13 hours ago

ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್‌ ಒಡೆಯರ್‌

ಕೊಪ್ಪಳ: ಐತಿಹಾಸಿಕ ಅಂಜನಾದ್ರಿಗೆ ಸಂಸದ ಯದುವೀರ್  ಒಡೆಯರ್‌ ಭೇಟಿ ನೀಡಿ ದೇವರ ದರ್ಶನ ಪಡೆದರು. ಹನುಮ ಹುಟ್ಟಿದ ನಾಡು ಎಂದು…

15 hours ago

7 ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್‌ ಅವರು ಬರೋಬ್ಬರಿ 7 ವರ್ಷಗಳ ಬಳಿಕ ಭಾರತಕ್ಕೆ ಆಗಮಿಸಲಿದ್ದಾರೆ. ಸೆಪ್ಟೆಂಬರ್‌ 12ರಂದು ದೆಹಲಿಗೆ…

15 hours ago

ಓದುಗರ ಪತ್ರ: ಕುಕ್ಕರಹಳ್ಳಿಕೆರೆ ಅಂಗಳದಲ್ಲಿ ನಾಯಿಗಳ ಹಾವಳಿ ನಿಯಂತ್ರಿಸಿ

ಮೈಸೂರಿನ ಪ್ರಮುಖ ಜೀವವೈವಿಧ್ಯ ತಾಣ ಕುಕ್ಕರಹಳ್ಳಿ ಕೆರೆಗೆ ಪ್ರತಿದಿನ ನೂರಾರು ಸಂಖ್ಯೆಯಲ್ಲಿ ವಾಯುವಿಹಾರಿಗಳು, ಪ್ರವಾಸಿಗರು ಮತ್ತು ಸ್ಥಳೀಯರು ಭೇಟಿ ನೀಡುತ್ತಾರೆ.…

21 hours ago

ಓದುಗರ ಪತ್ರ: ಸಚಿವರುಗಳೇ ಮುಖ್ಯಮಂತ್ರಿಗಳ ಮಾತನ್ನು ಕಾರ್ಯರೂಪಕ್ಕೆ ತನ್ನಿ

ಬೆಂಗಳೂರಿನ ಯಶವಂತಪುರ ಎಪಿಎಂಸಿ ಮಾರುಕಟ್ಟೆಗೆ ದಿಢೀರ್ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಗಳ ಬಗ್ಗೆ ಪರಿಶೀಲಿಸುವ ವೇಳೆ ಅಪ್ರಾಪ್ತ ಮಕ್ಕಳಿಂದ ಕೆಲಸ…

21 hours ago