ರಾಜ್ಯ

ಧರ್ಮಸ್ಥಳ ಪ್ರಕರಣ: ಎಸ್ ಐಟಿ ತನಿಖೆಯಿಂದ ಸತ್ಯಾಸತ್ಯತೆ ಬೆಳಕಿಗೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

ಉಡುಪಿ: ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡುವುದು‌ ಸಲ್ಲ. ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು.

ಧರ್ಮಸ್ಥಳ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಈ ವಿಚಾರವಾಗಿ ಡಿಸಿಎಂ ಅವರ ಹೇಳಿಕೆಗೆ ನನ್ನ ಸಹಮತವಿದೆ. ಎಸ್ ಐ ಟಿ ತನಿಖೆ ಬಗ್ಗೆ ಅಧಿಕಾರಿಗಳು ಗೃಹಸಚಿವರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು. ‌

ಸಾಮಾಜಿಕ ಜಾಲತಾಣದಲ್ಲಿ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳನ್ನು ವಿರುದ್ಧ ಅವಹೇಳನ ಮಾಡಲಾಗುತ್ತಿದೆ. ಸೌಜನ್ಯಳಿಗೆ ಅನ್ಯಾಯ ಆಗಿದ್ದರೆ, ನ್ಯಾಯ ಸಿಗಬೇಕು ಮುಸಕುದಾರಿ ಬೇರೆ ಬೇರೆ ಸ್ಥಳವನ್ನು ಗುರುತು ಮಾಡುತ್ತಿದ್ದಾನೆ. ಇದಕ್ಕೆಲ್ಲಾ ಉತ್ತರ ಸಿಗಬೇಕು ಎಂದೆ ಎಸ್ ಐ ಟಿ ರಚನೆಯಾಗಿದೆ. ಆದಷ್ಟು ಬೇಗ ಉತ್ತರ ಸಿಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.

ಆಂದೋಲನ ಡೆಸ್ಕ್

Recent Posts

ಹಾಸನ: ಪಟ್ಲ ಬೆಟ್ಟದಲ್ಲಿ ಬೀಡುಬಿಟ್ಟಿರುವ ಕಾಡಾನೆಗಳು: ಸ್ಥಳೀಯರಲ್ಲಿ ಮನೆಮಾಡಿದ ಆತಂಕ

ಹಾಸನ: ಕಳೆದ ಎರಡು ದಿನಗಳಿಂದ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಕಡ್ರಳ್ಳಿ ಗ್ರಾಮದಲ್ಲಿರುವ ಪಟ್ಲ ಬೆಟ್ಟದಲ್ಲಿ ಕಾಡಾನೆಗಳ ಹಿಂಡು ಬೀಡುಬಿಟ್ಟಿರುವುದರಿಂದ ಮುಂಜಾಗ್ರತಾ…

3 mins ago

ಕರೂರು ಕಾಲ್ತುಳಿತ ಪ್ರಕರಣ: ಸಿಬಿಐ ವಿಚಾರಣೆಗೆ ಹಾಜರಾದ ದಳಪತಿ ವಿಜಯ್‌

ನವದೆಹಲಿ: ಕರೂರು ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿವಿಕೆ ಪಕ್ಷದ ಸಂಸ್ಥಾಪಕ ದಳಪತಿ ವಿಜಯ್‌ ಮೂರನೇ ಬಾರಿಗೆ ಸಿಬಿಐ ಕಚೇರಿಗೆ ಇಂದು…

17 mins ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ಬಿಕೋ ಎನ್ನುತ್ತಿರುವ ದುಬೈ

ದುಬೈ: ಈ ಅವಧಿಯಲ್ಲಿ ಪ್ರವಾಸಿಗರಿಂದ ತುಂಬಿ ತುಳುಕುತ್ತಿದ್ದ ದುಬೈನ್‌ ಮಾರುಕಟ್ಟೆಗಳು, ಸಮುದ್ರ ತೀರಗಳು ಹಾಗೂ ಐಷಾರಾಮಿ ಹೋಟೆಲ್‌ಗಳು ಈಗ ಜನರಿಲ್ಲದೇ…

22 mins ago

ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ: ಇಸ್ರೇಲ್‌ ಪ್ರಧಾನಿ ಕಚೇರಿ ಸ್ಪಷ್ಟನೆ

ಜೆರುಸೇಲಂ: ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಕ್ಷೇಮವಾಗಿದ್ದಾರೆ. ಅವರು ಸಾವನ್ನಪ್ಪಿದ್ದಾರೆ ಎಂಬ ವರದಿ ಸುಳ್ಳು ಎಂದು ಪ್ರಧಾನಿ ಕಚೇರಿ ಸ್ಪಷ್ಟನೆ…

54 mins ago

ಇಂದು ಸಂಜೆ ಕೇಂದ್ರ ಚುನಾವಣಾ ಆಯೋಗ ಸುದ್ದಿಗೋಷ್ಠಿ: ಐದು ರಾಜ್ಯಗಳ ವಿಧಾನಸಭಾ ಚುನಾವಣೆಗೆ ದಿನಾಂಕ ಪ್ರಕಟ ಸಾಧ್ಯತೆ

ನವದೆಹಲಿ: ಇಂದು ಸಂಜೆ ಐದು ರಾಜ್ಯಗಳ ವಿಧಾನಸಭೆ ಚುನಾವಣೆಗೆ ದಿನಾಂಕ ಪ್ರಕಟವಾಗುವ ಸಾಧ್ಯತೆಯಿದೆ. ಇಂದು ಸಂಜೆ ನಾಲ್ಕು ಗಂಟೆಗೆ ಕೇಂದ್ರ…

1 hour ago

ತಾಪಮಾನ ಏರಿಕೆ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಬಿಸಿಲ ಝಳ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 hour ago