lakshmi hebbalkar
ಉಡುಪಿ: ಎಸ್ ಐಟಿ ತನಿಖೆಯಿಂದ ಧರ್ಮಸ್ಥಳ ಪ್ರಕರಣದ ಸತ್ಯಾಸತ್ಯತೆ ಹೊರಬರಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದ್ದಾರೆ.
ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಧರ್ಮಸ್ಥಳ ವಿಚಾರದಲ್ಲಿ ರಾಜಕೀಯ ಮಾಡುವುದು ಸಲ್ಲ. ತನಿಖೆಯಿಂದಷ್ಟೇ ಸತ್ಯಾಸತ್ಯತೆ ಹೊರ ಬರಬೇಕಿದೆ ಎಂದರು.
ಧರ್ಮಸ್ಥಳ ವಿಚಾರದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯನ್ನು ಗಮನಿಸಿದ್ದೇನೆ. ನಾವೆಲ್ಲರೂ ಧರ್ಮಸ್ಥಳ ಮಂಜುನಾಥನ ಭಕ್ತರು, ಈ ವಿಚಾರವಾಗಿ ಡಿಸಿಎಂ ಅವರ ಹೇಳಿಕೆಗೆ ನನ್ನ ಸಹಮತವಿದೆ. ಎಸ್ ಐ ಟಿ ತನಿಖೆ ಬಗ್ಗೆ ಅಧಿಕಾರಿಗಳು ಗೃಹಸಚಿವರಿಗೆ ಮಾಹಿತಿ ನೀಡುತ್ತಿದ್ದಾರೆ ಎಂದು ಹೇಳಿದರು.
ಸಾಮಾಜಿಕ ಜಾಲತಾಣದಲ್ಲಿ ಕ್ಷೇತ್ರ ಮತ್ತು ಧರ್ಮಾಧಿಕಾರಿಗಳನ್ನು ವಿರುದ್ಧ ಅವಹೇಳನ ಮಾಡಲಾಗುತ್ತಿದೆ. ಸೌಜನ್ಯಳಿಗೆ ಅನ್ಯಾಯ ಆಗಿದ್ದರೆ, ನ್ಯಾಯ ಸಿಗಬೇಕು ಮುಸಕುದಾರಿ ಬೇರೆ ಬೇರೆ ಸ್ಥಳವನ್ನು ಗುರುತು ಮಾಡುತ್ತಿದ್ದಾನೆ. ಇದಕ್ಕೆಲ್ಲಾ ಉತ್ತರ ಸಿಗಬೇಕು ಎಂದೆ ಎಸ್ ಐ ಟಿ ರಚನೆಯಾಗಿದೆ. ಆದಷ್ಟು ಬೇಗ ಉತ್ತರ ಸಿಗಲಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…