ರಾಜ್ಯ

ಪ್ರಜ್ವಲ್‌ ಬಂಧನಕ್ಕೆ ಎಸ್‌ಐಟಿ ಸಿದ್ಧತೆ

ಬೆಂಗಳೂರು: ಲೈಂಗಿಕ ಪ್ರಕರಣ ಹಾಗೂ ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಸಂಸದ ಪ್ರಜ್ವಲ್‌ ರೇವಣ್ಣ ಇಂದು ಬೆಂಗಳೂರಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಎಸ್‌ಐಟಿ ತಂಡ ಬೀಡು ಬಿಟ್ಟಿದ್ದು, ಪ್ರಜ್ವಲ್‌ ವಿಮಾನ ಇಳಿಯುತ್ತಿದ್ದಂತೆ ಇಮಿಗ್ರೇಷನ್‌ ವೇಳೆ ಏರ್ಪೋಟ್‌ ಅಧಿಕಾರಿಗಳು ವಶಕ್ಕೆ ಪಡೆಯಲಿದ್ದಾರೆ.

ನಂತರ ವಿಮಾನ ನಿಲ್ದಾಣದ ಪೊಲೀಸರಿಗೆ ಒಪ್ಪಿಸಲಿದ್ದು, ಬಳಿಕ ಏರ್‌ಪೋರ್ಟ್‌ ಪೊಲೀಸರ ಮೂಲಕ ಎಸ್‌ಐಟಿ ವಶಕ್ಕೆ ಪಡೆಯಲಿದೆ.

ಪ್ರಜ್ವಲ್‌ ವಿಮಾನ ನಿಲ್ದಾಣಕ್ಕೆ ಬಂದಿಳಿದಾಗ, ಅಲ್ಲಿನ ರೀತಿ ರಿವಾಜು ಮುಗಿಯುವುದಕ್ಕೆ ೩೦ ನಿಮಿಷಕ್ಕಿಂತ ಹೆಚ್ಚು ಸಮಯ ಹಿಡಿಯಲಿದೆ. ಈ ಹಿನ್ನೆಲೆ ವಿಮಾನ ನಿಲ್ದಾಣದ ಟರ್ಮಿನಲ್‌ ಒಳಗೆ ತೆರಳಲು ೧೦ ಎಸ್‌ಐಟಿ ಅಧಿಕಾರಿಗಳಿಗೆ ಪಾಸ್‌ ನೀಡುವಂತೆ ಎಸ್‌ಐಟಿ ಮುಖ್ಯಸ್ಥರು ವಿಮಾನ ನಿಲ್ದಾಣದ ಅಧಿಕಾರಿಗೆ ಪತ್ರ ಬರೆದಿದ್ದಾರೆ. ಅದರಂತೆ ವಿಮಾನ ನಿಲ್ದಾಣದ ಪಾಸ್‌ ಪಡೆಯುವಲ್ಲಿ ಎಸ್‌ಐಟಿ ಅಧಿಕಾರಿಗಳು ನಿರತರಾಗಿದ್ದಾರೆ. ಪಾಸ್‌ ಪಡೆದ ಬಳಿಕ ಅಂದರೆ ಇಂದು ರಾತ್ರಿ ೧೦ ಗಂಟೆಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಎಸ್‌ಐಟಿ ಅಧಿಕಾರಿಗಳು ಆಗಮಿಸಲಿದ್ದಾರೆ.

ಪ್ರಜ್ವಲ್‌ ಬಂಧನದ ಬಗ್ಗೆ ಗೃಹ ಸಚಿವರು ಹೇಳಿದಿಷ್ಟು
ಪ್ರಜ್ವಲ್‌ ಬಂಧನದ ಬಗ್ಗೆ ಗೃಹ ಸಚಿವ ಡಾ.ಜಿ ಪರಮೇಶ್ವರ್‌ ಮಾತನಾಡಿ, ಪ್ರಜ್ವಲ್‌ ರೇವಣ್ಣ ಬೆಂಗಳೂರಿಗೆ ಬಂದ ತಕ್ಷಣ ಬಂಧಿಸಲಾಗುವುದು. ಅವರ ಬಂಧನಕ್ಕೆ ಈಗಾಗಲೇ ವಾರೆಂಟ್‌ ಜಾರಿ ಆಗಿದೆ. ಈ ಬಗ್ಗೆ ಎಸ್‌ಐಟಿ  ಮುಂದಿನ ಕ್ರಮ ಕೈಗೊಳ್ಳಲಿದೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪರವಾನಗಿ ಅಮಾನತ್ತು : ನಾಲ್ವರ ವಿರುದ್ಧ ಶಿಸ್ತು ಕ್ರಮ

ಚಾಮರಾಜನಗರ : ರಾಜ್ಯ ಆಹಾರ ಆಯೋಗದ ಅಧ್ಯಕ್ಷರಾದ ಡಾ. ಎಚ್.ಕೃಷ್ಣ ಅವರು ತಮ್ಮ ದಿಢೀರ್ ಭೇಟಿ ಸಂದರ್ಭದಲ್ಲಿ ನ್ಯೂನತೆ ಕಂಡುಬಂದಿರುವ…

8 hours ago

ಸಿ.ಟಿ.ರವಿ ಯಾವ ಕಡೆಯಿಂದಲೂ ಒಳಗೆ ಬರತಕ್ಕದ್ದಲ್ಲ : ಚೀಫ್ ಮಾರ್ಷಲ್​​ಗೆ ಸಭಾಪತಿ ಸೂಚನೆ

ಬೆಂಗಳೂರು : ಸಭಾಪತಿಗಳ ಆದೇಶಕ್ಕೆ ಗೌರವ ನೀಡದೆ, ಗೈರು ಹಾಜರಾಗಿದ್ದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯ ಸಿ.ಟಿ.ರವಿ ಅವರನ್ನು ವಿಧಾನ ಪರಿಷತ್ತಿನಿಂದ…

9 hours ago

ಮಂಡ್ಯ | 60 ಲಕ್ಷ ಲಂಚಕ್ಕೆ ಬೇಡಿಕೆ ; ಅಬಕಾರಿ ಉಪ ಆಯುಕ್ತ ಅಮಾನತು

ಮಂಡ್ಯ : ಹೊಸದಾಗಿ ಬಾರ್ ಆರಂಭಿಸಲು ಸಿಎಲ್ 7 ಲೈಸೆನ್ಸ್ ನೀಡಲು ಲಂಚ ಕೇಳಿದ ಆರೋಪದಡಿ ಮಂಡ್ಯ ಅಬಕಾರಿ ಉಪ…

10 hours ago

ಮೈಸೂರಿನಲ್ಲಿ ಮತ್ತೆ ಡ್ರಗ್ಸ್‌ ಪತ್ತೆ ; ಮೂವರ ಬಂಧನ

ಮೈಸೂರು : ಮೈಸೂರಲ್ಲಿ ಪದೇ ಪದೇ ಡ್ರಗ್ಸ್‌ ಪ್ರಕರಣಗಳು ಪತ್ತೆಯಾಗುತ್ತಿರುವುದು ಪೊಲೀಸರನ್ನು ನಿದ್ದೆಗೆಡಿಸಿದೆ. ಈ ಸಂಬಂಧ ಹೈಕೋರ್ಟ್‌ ಸಹ ಕಳವಳ…

10 hours ago

ಮೈ-ಬೆಂ ಹೆದ್ದಾರಿಯಲ್ಲಿ ಸುಲಿಗೆ,ದರೋಡೆ ; 34 ಪ್ರಕರಣಗಳಲ್ಲಿ 28 ಕೇಸ್‌ ಸಾಲ್ವ್‌!

ಮಂಡ್ಯ : ಮೈಸೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್-275) ಹಾಗೂ ಸರ್ವಿಸ್ ರಸ್ತೆಗಳಲ್ಲಿ ತಡರಾತ್ರಿ ಪ್ರಯಾಣಿಕರನ್ನು ತಡೆದು ಸುಲಿಗೆ, ದರೋಡೆ ಮಾಡುತ್ತಿರುವುದಕ್ಕೆ…

11 hours ago

ಮೂರು ಬಾಲಕಿಯರನ್ನು ಬಲಿ ಪಡೆದ ಆನ್‌ಲೈನ್‌ ಗೇಮ್‌ ; ಮಹಡಿಯಿಂದ ಹಾರಿ ಆತ್ಮಹತ್ಯೆ

ಗಾಜಿಯಾಬಾದ್ : ಆನ್‌ಲೈನ್ ಗೇಮ್ ಆಡಬೇಡಿ ಎಂದಿದ್ದಕ್ಕೆ ಮೂವರು ಅಪ್ರಾಪ್ತ ಸಹೋದರಿಯರು ಹೌಸಿಂಗ್ ಸೊಸೈಟಿಯ 9ನೇ ಮಹಡಿಯಿಂದ ಹಾರಿ ಆತ್ಮಹತ್ಯೆ…

12 hours ago