ರಾಜ್ಯ

ಶಾಸಕ ಮುನಿರತ್ನ ವಿರುದ್ಧ ಜಾತಿನಿಂದನೆ ಪ್ರಕರಣ: ನ್ಯಾಯಾಲಯಕ್ಕೆ ಚಾರ್ಜ್‌ಶೀಟ್‌ ಸಲ್ಲಿಸಿದ ಎಸ್‌ಐಟಿ

ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು 590 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಸಿದ್ದಾರೆ.

ಆರ್‌.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಸೆಪ್ಟೆಂಬರ್‌ 14 ರಂದು ಜಾತಿ ನಿಂದನೆ ಕೇಸ್‌ನಲ್ಲಿ ಬಂಧಿಸಿದ್ದರು. ಬಳಿಕ ಮುನಿರತ್ನ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಪಡೆದಿದ್ದಾರೆ. ಆದರೆ ಇದೀಗ ಅವರ ವಿರುದ್ಧದ ಕೇಸ್‌ನಲ್ಲಿ ಎಸ್‌ಐಟಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದು, 53 ಟೆಕ್ನಿಕಲ್‌ ಮತ್ತು ವೈಜ್ಞಾನಿಕ ಸಾಕ್ಷ್ಯ ಸೇರಿದಂತೆ ಮೂವರು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯ ಹೇಳಿಕೆಗಳನ್ನು ದಾಖಲೆಯಲ್ಲಿ ಉಲ್ಲೇಖಿಸಿದ್ದಾರೆ.

ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್‌ಐಟಿ ಅಧಿಕಾರಿಗಳು ಸಲ್ಲಿಸಿರುವ ಚಾರ್ಜ್‌ಶೀಟ್‌ನಲ್ಲಿ, ಮುನಿರತ್ನ ಸಾರ್ವಜನಿಕವಾಗಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿರುವುದು ಹಾಗೂ ಜಾತಿನಿಂದನೆ ಮಾಡಿರುವುದು ದೃಢಪಟ್ಟಿದೆ. ಅಲ್ಲದೇ ಶಾಸಕ ಮುನಿರತ್ನ ಮತ್ತು ಗುತ್ತಿಗೆದಾರ ಚಲುವರಾಜು ಅವರ ಕರೆ ಸಂಭಾಷಣೆಯಲ್ಲಿಯೂ ಮುನಿರತ್ನ ಅವರದ್ದೇ ಧ್ವನಿ ಎಂದು ಎಫ್‌ಎಸ್‌ಎಲ್‌ ವರದಿಯಿಂದ ದೃಢಪಟ್ಟಿದೆಯೆಂದು ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.

ಅರ್ಚನ ಎಸ್‌ ಎಸ್

Recent Posts

ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ: ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ

ಬೆಂಗಳೂರು: ಬೇಸಿಗೆಗೂ ಮುನ್ನವೇ ಬಿಸಿಲಿನ ಬೇಗೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ನೆರೆಯ ರಾಜ್ಯಗಳಲ್ಲಿ ಹಕ್ಕಿಜ್ವರದ ಭೀತಿ ಎದುರಾಗಿದ್ದು, ರಾಜ್ಯದ ಗಡಿಭಾಗಗಳಲ್ಲಿ ಮುನ್ನೆಚ್ಚರಿಕೆ…

3 mins ago

ಕನಕಪುರದ ಕಾಡಂಚಿನ ಗ್ರಾಮದಲ್ಲಿ 40 ಕಾಡಾನೆಗಳ ಹಿಂಡು ಪ್ರತ್ಯಕ್ಷ

ರಾಮನಗರ: ಕನಕಪುರದಲ್ಲಿ ಕಾಡಾನೆ ಹಾವಳಿ ಮುಂದುವರಿದಿದ್ದು, ಕಾಡಂಚಿನ ಗ್ರಾಮದ ಬಳಿ ಸುಮಾರು 40 ಕಾಡಾನೆಗಳು ಕನಕಪುರ ತಾಲ್ಲೂಕಿನ ಕಾಡುಶಿವನಹಳ್ಳಿ ಬಳಿ…

1 hour ago

ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಹೇಳಿಕೆಗೆ ಕಿಚ್ಚ ಸುದೀಪ್‌ ಕೆಂಡಾಮಂಡಲ

ಬೆಂಗಳೂರು:ಇತ್ತೀಚೆಗೆ ನಿರ್ಮಾಪಕ ಕನಕಪುರ ಶ್ರೀನಿವಾಸ್‌ ಕನ್ನಡ ಚಿತ್ರರಂಗದ ಹಲವರ ಬಗ್ಗೆ ನಾಲಿಗೆ ಹರಿಬಿಟ್ಟಿದ್ದರು. ಅಶ್ಲೀಲವಾಗಿ ಮಾತನಾಡಿದ್ದರು. ಈ ವಿಚಾರಕ್ಕೆ ಸಂಬಂಧಿಸಿದಂತೆ…

2 hours ago

ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಾಕಷ್ಟು ಅಭ್ಯರ್ಥಿಗಳಿದ್ದಾರೆ: ಎಚ್.ಡಿ.ಕುಮಾರಸ್ವಾಮಿ

ಮೈಸೂರು: ಶಾಸಕ ಜಿ.ಟಿ.ದೇವೇಗೌಡ ಜೆಡಿಎಸ್‌ ಪಕ್ಷದಿಂದ ದೂರ ಉಳಿದಿರುವ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಈ…

2 hours ago

ರಾಜ್ಯ ಸರ್ಕಾರದ ವೈಫಲ್ಯ ಮುಚ್ಚಿಕೊಳ್ಳಲು ಕೇಂದ್ರ ಬಜೆಟ್ ಬಗ್ಗೆ ಟೀಕೆ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ

ಮೈಸೂರು: ರಾಜ್ಯ ಸರ್ಕಾರದ ವೈಫಲ್ಯಗಳನ್ನು ಮುಚ್ಚಿಕೊಳ್ಳಲು ಕೇಂದ್ರ ಬಜೆಟ್‌ ಬಗ್ಗೆ ಟೀಕೆ ಮಾಡಲಾಗುತ್ತಿದೆ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಆಕ್ರೋಶ…

2 hours ago

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಬೆಂಕಿ: ಅದೃಷ್ಟವಶಾತ್‌ ಪಾರು

ಮಡಿಕೇರಿ: ಎಸ್‌ಡಿಪಿಐ ರಾಜ್ಯಾಧ್ಯಕ್ಷ ಮಜಿದ್‌ ಪ್ರಯಾಣಿಸುತ್ತಿದ್ದ ಕಾರ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಅದೃಷ್ಟವಶಾತ್‌ ಪಾರಾಗಿದ್ದಾರೆ. ಕೊಡಗು ಜಿಲ್ಲೆ ಕುಶಾಲನಗರ ತಾಲ್ಲೂಕಿನ…

3 hours ago