ಬೆಂಗಳೂರು: ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಜಾತಿನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು 590 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ್ದಾರೆ.
ಆರ್.ಆರ್.ನಗರದ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಸೆಪ್ಟೆಂಬರ್ 14 ರಂದು ಜಾತಿ ನಿಂದನೆ ಕೇಸ್ನಲ್ಲಿ ಬಂಧಿಸಿದ್ದರು. ಬಳಿಕ ಮುನಿರತ್ನ ನ್ಯಾಯಾಲಯದಲ್ಲಿ ಜಾಮೀನಿಗಾಗಿ ಅರ್ಜಿ ಸಲ್ಲಿಸಿ ಜನಪ್ರತಿನಿಧಿಗಳ ನ್ಯಾಯಾಲಯದಿಂದ ಷರತ್ತು ಬದ್ಧ ಜಾಮೀನು ಪಡೆದಿದ್ದಾರೆ. ಆದರೆ ಇದೀಗ ಅವರ ವಿರುದ್ಧದ ಕೇಸ್ನಲ್ಲಿ ಎಸ್ಐಟಿ ಅಧಿಕಾರಿಗಳು ಚಾರ್ಜ್ಶೀಟ್ ಸಲ್ಲಿಸಿದ್ದು, 53 ಟೆಕ್ನಿಕಲ್ ಮತ್ತು ವೈಜ್ಞಾನಿಕ ಸಾಕ್ಷ್ಯ ಸೇರಿದಂತೆ ಮೂವರು ಪ್ರತ್ಯಕ್ಷದರ್ಶಿಗಳ ಸಾಕ್ಷ್ಯ ಹೇಳಿಕೆಗಳನ್ನು ದಾಖಲೆಯಲ್ಲಿ ಉಲ್ಲೇಖಿಸಿದ್ದಾರೆ.
ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಎಸ್ಐಟಿ ಅಧಿಕಾರಿಗಳು ಸಲ್ಲಿಸಿರುವ ಚಾರ್ಜ್ಶೀಟ್ನಲ್ಲಿ, ಮುನಿರತ್ನ ಸಾರ್ವಜನಿಕವಾಗಿ ಜಾತಿ ನಿಂದನೆ ಮಾಡಿ ಬೆದರಿಕೆ ಹಾಕಿರುವುದು ಹಾಗೂ ಜಾತಿನಿಂದನೆ ಮಾಡಿರುವುದು ದೃಢಪಟ್ಟಿದೆ. ಅಲ್ಲದೇ ಶಾಸಕ ಮುನಿರತ್ನ ಮತ್ತು ಗುತ್ತಿಗೆದಾರ ಚಲುವರಾಜು ಅವರ ಕರೆ ಸಂಭಾಷಣೆಯಲ್ಲಿಯೂ ಮುನಿರತ್ನ ಅವರದ್ದೇ ಧ್ವನಿ ಎಂದು ಎಫ್ಎಸ್ಎಲ್ ವರದಿಯಿಂದ ದೃಢಪಟ್ಟಿದೆಯೆಂದು ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಚೆನ್ನೈ: ತಮಿಳುನಾಡಿನ ಜನರಿಗೆ ವಿಜಯ್ ಸರ್ಕಾರದಿಂದ ಭರ್ಜರಿ ಗುಡ್ನ್ಯೂಸ್ ನೀಡಲಾಗಿದ್ದು, ಮನೆ ಬಳಕೆಯ ಅಡುಗೆ ಅನಿಲ ಸಿಲಿಂಡರ್ಗಳ ವಿಚಾರದಲ್ಲಿ ಮಹತ್ವದ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿವಾದಕ್ಕೆ ಸಂಬಂಧಿಸಿದ ಮಹತ್ವದ ಬೆಳವಣಿಗೆ ನಡೆದಿದೆ. ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ…
ಸಂಸತ್ತಿನಲ್ಲಾಗಲಿ ಅಥವಾ ರಾಜ್ಯಗಳ ವಿಧಾನಸಭೆ ಹಾಗೂ ವಿಧಾನಪರಿಷತ್ತುಗಳಲ್ಲಾಗಲಿ ಕೆಲವು ವರ್ಷಗಳಿಂದ ಕಲಾಪಗಳೇ ಸುಸೂತ್ರವಾಗಿ ನಡೆಯದೆ ಗದ್ದಲ, ಧರಣಿ, ಪ್ರತಿ ಭಟನೆಗಳು…
ರಮೇಶ್ ಹೆಚ್.ಕೆ. ಒಳ ಮೀಸಲಾತಿ ಜಾತಿ ಪ್ರಮಾಣ ಪತ್ರ ವಿತರಣೆ ಗೊಂದಲ ಸುದೀರ್ಘವಾದ ಒಳ ಮೀಸಲಾತಿ ಹೋರಾಟದ ಬಳಿಕ ಸದ್ಯ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉತ್ಸಾಹದ ಕುದುರೆಯ ಮೇಲಿದ್ದಾರೆ. ಈ ಕುದುರೆಯನ್ನು ಸಮರ್ಥವಾಗಿ ಓಡಿಸುವ ವಿಶ್ವಾಸ ಇರುವುದರಿಂದ…
ಮಂಜು ಕೋಟೆ ಎಚ್.ಡಿ.ಕೋಟೆ: ರಾಜ್ಯದ ಗಡಿಭಾಗ ಕಬಿನಿ ಹಿನ್ನೀರಿನ ಪ್ರದೇಶವಾದ ತಾಲ್ಲೂಕಿನ ಡಿ.ಬಿ.ಕುಪ್ಪೆ ಗ್ರಾಮದಲ್ಲಿ ಕಪಿಲಾ ನದಿಗೆ ಅಡ್ಡಲಾಗಿ, ಡಿ.ಬಿ.ಕುಪ್ಪೆಯಿಂದ…