train
ಶಿವಮೊಗ್ಗ: ತಾಳಗುಪ್ಪ-ಮೈಸೂರು ರೈಲುವೊಂದರ ಬೋಗಿಗಳ ನಡುವಿನ ಲಿಂಕ್ ಕಟ್ಟಾಗಿ ರೈಲಿನ ಬೋಗಿಗಳು ಬೇರ್ಪಟ್ಟ ಘಟನೆ ಶಿವಮೊಗ್ಗದ ಹಳೆ ಬಸ್ ನಿಲ್ದಾಣದ ಬಳಿ ನಡೆದಿದೆ.
ಘಟನೆಯಲ್ಲಿ ರೈಲಿನ ಆರು ಬೋಗಿಗಳು ಸೇತುವೆ ಮೇಲೆ ನಿಂತಿದ್ದವು. ಇನ್ನೊಂದಿಷ್ಟು ಬೋಗಿಗಳು ಮಲ್ಲೇಶ್ವರ ರೈಲ್ವೆ ಕ್ರಾಸಿಂಗ್ ಬಳಿ ನಿಂತಿದ್ದವು. ಘಟನೆಯಿಂದ ಸ್ಥಳೀಯರು ಸೇರಿದಂತೆ ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿತ್ತು.
ಸಾಮಾನ್ಯವಾಗಿ ಸೇತುವೆಗಳ ಮೇಲೆ ರೈಲುಗಳು ನಿಧಾನವಾಗಿ ಸಂಚರಿಸುತ್ತವೆ. ಈ ಹಿನ್ನೆಲೆಯಲ್ಲಿ ಬೋಗಿಗಳು ಬೇರ್ಪಟ್ಟರೂ ಯಾವುದೇ ಅಪಾಯ ಸಂಭವಿಸಿಲ್ಲ.
ಸ್ಥಳಕ್ಕಾಗಮಿಸಿದ ರೈಲ್ವೆ ಸಿಬ್ಬಂದಿ ಬೋಗಿಗಳನ್ನು ಮುಕ್ಕಾಲು ಗಂಟೆ ಕಾರ್ಯಾಚರಣೆ ನಡೆಸಿ ಮತ್ತೆ ಸೇರಿಸಿದರು. ಬಳಿಕ ಅಂತಿಮವಾಗಿ ರೈಲು ಮೈಸೂರು ಕಡೆಗೆ ಪ್ರಯಾಣ ಬೆಳೆಸಿತು.
ಬೆಂಗಳೂರು : ಭಾರತವನ್ನು ಆತ್ಮನಿರ್ಭರ ರಾಷ್ಟ್ರವನ್ನಾಗಿಸುವ ದಿಶೆಯಲ್ಲಿ ಕರ್ನಾಟಕದಂತಹ ಸ್ವಾವಲಂಬಿ ರಾಜ್ಯಗಳ ಪಾತ್ರ ಅತ್ಯಂತ ಮಹತ್ವದ್ದಾಗಿದೆ. ಕೃಷಿಯಿಂದ ಕೈಗಾರಿಕೆವರೆಗೆ ಹಾಗೂ…
ಹನೂರು : ತಾಲೂಕಿನ ಮಲೆ ಮಹದೇಶ್ವರ ವನ್ಯಜೀವಿಧಾಮ ವ್ಯಾಪ್ತಿಯ ತಾಳುಬೆಟ್ಟದಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ರಾಜ್ಯದ ಎಲ್ಲಾ ರೀತಿಯ ಸಿವಿಲ್ ಹುದ್ದೆಗಳಿಗೆ 2027ರ ಡಿಸೆಂಬರ್ 31ರವರೆಗೆ ಹೊರಡಿಸುವ ನೇಮಕಾತಿ ಅಧಿಸೂಚನೆಗಳಿಗೆ ಸಂಬಂಧಿಸಿದಂತೆ ಎಲ್ಲಾ…
ಮಂಡ್ಯ : ಸಾರ್ವಜನಿಕರಿಗೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್)ವು ಜಿಲ್ಲೆಯಲ್ಲಿ…
ಮಂಡ್ಯ : ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿಯದ್ದು ಬರಿ ಡಬಲ್ ಸ್ಟ್ಯಾಂಡರ್ಡ್ ನಾಟಕವಾಗಿದೆ. ಜಾತ್ಯತೀತ ಜನತಾದಳವನ್ನು ಓಡಿಸುವುದಕ್ಕೆ ಅವರಿಗೆ ತಾಕತ್ತಿದೆಯೇ?.…
ನಾಗಮಂಗಲ ನಕಲಿ ದಾಖಲೆ ಸೃಷ್ಟಿಸಿ ಸರ್ಕಾರಿ ಜಮೀನು ಕಬಳಿಕೆ ಪ್ರಕರಣ ಮಂಡ್ಯ : ನಾಗಮಂಗಲ ತಾಲ್ಲೂಕಿನ ನಕಲಿ ದಾಖಲೆ ಸೃಷ್ಟಿ…