ರಾಜ್ಯ

ತುಂಗಾ ನದಿ ಸೇತುವೆ ಮೇಲೆ ರೈಲಿನಿಂದ ಬೇರ್ಪಟ್ಟ 6 ಬೋಗಿಗಳು: ತಪ್ಪಿದ ಭಾರೀ ಅನಾಹುತ

ಶಿವಮೊಗ್ಗ: ತಾಳಗುಪ್ಪ-ಮೈಸೂರು ರೈಲುವೊಂದರ ಬೋಗಿಗಳ ನಡುವಿನ ಲಿಂಕ್‌ ಕಟ್ಟಾಗಿ ರೈಲಿನ ಬೋಗಿಗಳು ಬೇರ್ಪಟ್ಟ ಘಟನೆ ಶಿವಮೊಗ್ಗದ ಹಳೆ ಬಸ್‌ ನಿಲ್ದಾಣದ ಬಳಿ ನಡೆದಿದೆ.

ಘಟನೆಯಲ್ಲಿ ರೈಲಿನ ಆರು ಬೋಗಿಗಳು ಸೇತುವೆ ಮೇಲೆ ನಿಂತಿದ್ದವು. ಇನ್ನೊಂದಿಷ್ಟು ಬೋಗಿಗಳು ಮಲ್ಲೇಶ್ವರ ರೈಲ್ವೆ ಕ್ರಾಸಿಂಗ್‌ ಬಳಿ ನಿಂತಿದ್ದವು. ಘಟನೆಯಿಂದ ಸ್ಥಳೀಯರು ಸೇರಿದಂತೆ ಪ್ರಯಾಣಿಕರಲ್ಲಿ ತೀವ್ರ ಆತಂಕ ಮೂಡಿಸಿತ್ತು.

ಸಾಮಾನ್ಯವಾಗಿ ಸೇತುವೆಗಳ ಮೇಲೆ ರೈಲುಗಳು ನಿಧಾನವಾಗಿ ಸಂಚರಿಸುತ್ತವೆ. ಈ ಹಿನ್ನೆಲೆಯಲ್ಲಿ ಬೋಗಿಗಳು ಬೇರ್ಪಟ್ಟರೂ ಯಾವುದೇ ಅಪಾಯ ಸಂಭವಿಸಿಲ್ಲ.

ಸ್ಥಳಕ್ಕಾಗಮಿಸಿದ ರೈಲ್ವೆ ಸಿಬ್ಬಂದಿ ಬೋಗಿಗಳನ್ನು ಮುಕ್ಕಾಲು ಗಂಟೆ ಕಾರ್ಯಾಚರಣೆ ನಡೆಸಿ ಮತ್ತೆ ಸೇರಿಸಿದರು. ಬಳಿಕ ಅಂತಿಮವಾಗಿ ರೈಲು ಮೈಸೂರು ಕಡೆಗೆ ಪ್ರಯಾಣ ಬೆಳೆಸಿತು.

ಆಂದೋಲನ ಡೆಸ್ಕ್

Recent Posts

ಮಣ್ಣಲ್ಲಿ ಮಣ್ಣಾದ ನಟ ದಿಲೀಪ್‌ ರಾಜ್‌

ರಾಮನಗರ: ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನರಾಗಿದ್ದ ನಟ ದಿಲೀಪ್‌ ರಾಜ್‌ ಅವರ ಅಂತ್ಯಕ್ರಿಯೆ ಲಿಂಗಾಯತ ಸಂಪ್ರದಾಯದಂತೆ ನೆರವೇರಿತು. ರಾಮನಗರ ತಾಲ್ಲೂಕಿನ…

3 hours ago

ಹನೂರು: ಶ್ರೀರಂಗನಾಥಸ್ವಾಮಿ ದೇವಾಲಯದ ಅಭಿವೃದ್ಧಿ ಕಾಮಗಾರಿಗೆ ಅನುಮತಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಗೋಪಿನಾಥಂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಲಂಬಾಡಿ ಗ್ರಾಮದಲ್ಲಿನ ಪುರಾತನ…

3 hours ago

ತಪಾಸಣೆಗೆ ಆಸ್ಪತ್ರೆಗೆ ದಾಖಲಾಗಿದ್ದ ಸೋನಿಯಾಗಾಂಧಿ ಮನೆಗೆ ವಾಪಸ್‌

ನವದೆಹಲಿ: ಕಾಂಗ್ರೆಸ್‌ ಹಿರಿಯ ನಾಯಕಿ ಸೋನಿಗಾ ಗಾಂಧೀ ಅವರು ನಿಯಮಿತ ವೈದ್ಯಕೀಯ ತಪಾಸಣೆಗೆ ತೆರಳಿದ್ದರು. ಇದೀಗ ಆಸ್ಪತ್ರೆಯಿಂದ ಮನೆಗೆ ಮರಳಿದ್ದಾರೆ.…

4 hours ago

ಇನ್ನೊಂದು ವಾರದೊಳಗೆ ನೀಟ್-ಯುಜಿ ಪರೀಕ್ಷೆ ದಿನಾಂಕ ಘೋಷಣೆ

ನವದೆಹಲಿ: ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದ ಪರಿಣಾಮ ವೈದ್ಯಕೀಯ ಕೋರ್ಸ್‍ಗಳ ಪ್ರವೇಶಾತಿಗೆ ಕಳೆದ ಮೇ.3ರಂದು ನಡೆದಿದ್ದ ನೀಟ್- ಯುಜಿ ಮರುಪರೀಕ್ಷೆಯ ದಿನಾಂಕವನ್ನು…

4 hours ago

ಸದ್ಯಕ್ಕೆ ಬಸ್‌ ಪ್ರಯಾಣ ದರ ಏರಿಕೆ ಮಾಡುವ ಚಿಂತನೆಯಿಲ್ಲ: ಸಚಿವ ರಾಮಲಿಂಗಾರೆಡ್ಡಿ

ಬೆಂಗಳೂರು: ಡೀಸೆಲ್ ಬೆಲೆ ಹೆಚ್ಚಾದರೆ ಸಾರಿಗೆ ಸಂಸ್ಥೆಗಳಿಗೆ ಹೊರೆಯಾಗಲಿದೆ. ಬಸ್ ಪ್ರಯಾಣ ದರ ಏರಿಕೆ ಬಗ್ಗೆ ಸದ್ಯಕ್ಕೆ ಯಾವುದೇ ಚಿಂತನೆ…

4 hours ago

ನೀಟ್‌ ಪರೀಕ್ಷೆ ರದ್ದು: ಕೇಂದ್ರದ ವಿರುದ್ಧ ಮೈಸೂರು ಯೂತ್‌ ಕಾಂಗ್ರೆಸ್‌ ಪ್ರತಿಭಟನೆ

ಮೈಸೂರು: ನೀಟ್ ಪರೀಕ್ಷೆ ರದ್ದಾದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಮೈಸೂರು ಯೂತ್ ಕಾಂಗ್ರೆಸ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಸಂಸದ…

5 hours ago