ಬೆಂಗಳೂರು: ಎಂಎಲ್ಸಿ ರಾಜೇಂದ್ರ ರಾಜಣ್ಣ ಹತ್ಯೆಗೆ ಸ್ಕೆಚ್ ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಡಿಯೋ ವೈರಲ್ ಆಗುತ್ತಿದ್ದಂತೆ ಸೋಮನ ಆಪ್ತೆ ಪುಷ್ಪಾ ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಚಿವ ಕೆ.ಎನ್.ರಾಜಣ್ಣ ಅವರ ಪುತ್ರ ರಾಜೇಂದ್ರರವರ ಹತ್ಯೆಗೆ ಸುಫಾರಿ ನೀಡಿದ ವಿಚಾರದ ಬಗ್ಗೆ ಆಡಿಯೋನಲ್ಲಿ ಕೇಳಿ ಬಂದಿರುವ ಪುಷ್ಪಾ ಎಂಬ ಮಹಿಳೆ ಸ್ಪೋಟಕ ಮಾಹಿತಿ ಹಂಚಿಕೊಂಡಿರುವುದು ಬಯಲಾಗಿದೆ. ಈ ಹಿನ್ನೆಲೆ ಕಳೆದ ನವೆಂಬರ್ನಲ್ಲಿ ರಾಜೇಂದ್ರ ಅವರ ಮಗಳ ಹುಟ್ಟುಹಬ್ಬದ ಡೆಕೋರೇಷನ್ಗಾಗಿ ಇಬ್ಬರು ಯುವಕರು ಬಂದಿದ್ದರು. ಆ ಇಬ್ಬರು ಯುವಕರನ್ನು ಕಳುಹಿಸಿದ್ದು, ಆಗಲೇ ಹತ್ಯೆಗೆ ಪ್ರಯತ್ನ ನಡೆದಿತ್ತು ಎಂದು ಆಡಿಯೋದಲ್ಲಿ ಪುಷ್ಪಾ ಎಂಬಾಕೆ ಮಾಹಿತಿ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣದ ಹಿನ್ನೆಲೆ ಏನು?
ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಅಲ್ಲದೇ ಅವರ ಸೋಮ, ಭರತ್, ಗುಂಡ, ಯತೀಶ್ ಹಾಗೂ ಅಮಿತ್ ಎಂಬುವವರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ಮಡಿಕೇರಿ: ವಯೋವೃದ್ಧರೊಬ್ಬರ ಮನೆಯಲ್ಲಿ ಹೋಂ ನರ್ಸಿಂಗ್(ಕೇರ್ ಟೇಕರ್) ಕೆಲಸಕ್ಕೆಂದು ಸೇರಿಕೊಂಡು ಚಿನ್ನಾಭರಣ ಹಾಗೂ ನಗದು ಕಳ್ಳತನ ಮಾಡಿದ ಆರೋಪಿಯನ್ನು ಬಂಧಿಸುವಲ್ಲಿ…
ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಎರಡನೇ ಶನಿವಾರ ಹಾಗೂ ಯುಗಾದಿ ಜಾತ್ರಾ…
ಟೆಹ್ರಾನ್ : ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆಯೂ ಹೊರ್ಮುಜ್ ಜಲಸಂಧಿಯನ್ನು ಸಂಪೂರ್ಣವಾಗಿ ಮುಚ್ಚಲಾಗಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಶತ್ರು ರಾಷ್ಟ್ರ ಮತ್ತು…
ಹುಣಸೂರು : ತಾಲ್ಲೂಕಿನ ಹನಗೋಡು ಹೋಬಳಿ ವ್ಯಾಪ್ತಿ ಸೇರಿದಂತೆ ನಾಗರಹೊಳೆ ರಾಷ್ಟ್ರೀಯ ಉದ್ಯಾನದ ಅಂಚಿನ ಗ್ರಾಮಗಳಲ್ಲಿ ಸೋಮವಾರ ಸಂಜೆ ಗುಡುಗು-ಸಿಡಿಲು…
ಮೈಸೂರು : ಕುಕ್ಕರಹಳ್ಳಿ ಕೆರೆಯ ಪರಿಸರ ಸಂರಕ್ಷಣೆ ಮಾಡಬೇಕು ಎಂದು ಒತ್ತಾಯಿಸಿ ಪರಿಸರ ಸಂರಕ್ಷಿಸಿ ಹೋರಾಟ ಸಮಿತಿ ವತಿಯಿಂದ ಕುಕ್ಕರಹಳ್ಳಿ…
ಬೆಂಗಳೂರು : ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಎಂಜಿನಿಯರಿಂಗ್ ಕಾಲೇಜು, ಪಾಲಿಟೆಕ್ನಿಕ್ ಎಂಜಿನಿಯರಿಂಗ್ ಕಾಲೇಜು ಹಾಗೂ ವಿವಿಯಲ್ಲಿ ಖಾಲಿ ಇರುವ…