ರಾಜ್ಯ

ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹತ್ಯೆಗೆ ಸ್ಕೆಚ್‌: ಓರ್ವ ಮಹಿಳೆ ಪೊಲೀಸ್‌ ವಶಕ್ಕೆ

ಬೆಂಗಳೂರು: ಎಂಎಲ್‌ಸಿ ರಾಜೇಂದ್ರ ರಾಜಣ್ಣ ಹತ್ಯೆಗೆ ಸ್ಕೆಚ್ ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಡಿಯೋ ವೈರಲ್‌ ಆಗುತ್ತಿದ್ದಂತೆ ಸೋಮನ ಆಪ್ತೆ ಪುಷ್ಪಾ ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಸಚಿವ ಕೆ.ಎನ್‌.ರಾಜಣ್ಣ ಅವರ ಪುತ್ರ ರಾಜೇಂದ್ರರವರ ಹತ್ಯೆಗೆ ಸುಫಾರಿ ನೀಡಿದ ವಿಚಾರದ ಬಗ್ಗೆ ಆಡಿಯೋನಲ್ಲಿ ಕೇಳಿ ಬಂದಿರುವ ಪುಷ್ಪಾ ಎಂಬ ಮಹಿಳೆ ಸ್ಪೋಟಕ ಮಾಹಿತಿ ಹಂಚಿಕೊಂಡಿರುವುದು ಬಯಲಾಗಿದೆ. ಈ ಹಿನ್ನೆಲೆ ಕಳೆದ ನವೆಂಬರ್‌ನಲ್ಲಿ ರಾಜೇಂದ್ರ ಅವರ ಮಗಳ ಹುಟ್ಟುಹಬ್ಬದ ಡೆಕೋರೇಷನ್‌ಗಾಗಿ ಇಬ್ಬರು ಯುವಕರು ಬಂದಿದ್ದರು. ಆ ಇಬ್ಬರು ಯುವಕರನ್ನು ಕಳುಹಿಸಿದ್ದು, ಆಗಲೇ ಹತ್ಯೆಗೆ ಪ್ರಯತ್ನ ನಡೆದಿತ್ತು ಎಂದು ಆಡಿಯೋದಲ್ಲಿ ಪುಷ್ಪಾ ಎಂಬಾಕೆ ಮಾಹಿತಿ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.

ಪ್ರಕರಣದ ಹಿನ್ನೆಲೆ ಏನು?

ಕಾಂಗ್ರೆಸ್‌ ವಿಧಾನ ಪರಿಷತ್‌ ಸದಸ್ಯ ಆರ್‌.ರಾಜೇಂದ್ರ ಅವರ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾತ್ಸಂದ್ರ ಪೊಲೀಸ್‌ ಠಾಣೆಯಲ್ಲಿ ಐವರ ವಿರುದ್ಧ ಎಫ್‌ಐಆರ್‌ ದಾಖಲಿಸಲಾಗಿತ್ತು. ಅಲ್ಲದೇ ಅವರ ಸೋಮ, ಭರತ್‌, ಗುಂಡ, ಯತೀಶ್‌ ಹಾಗೂ ಅಮಿತ್‌ ಎಂಬುವವರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.

ಅರ್ಚನ ಎಸ್‌ ಎಸ್

Recent Posts

ಜಮೀನಿನಲ್ಲಿ ಯುವತಿಗೆ ಹಾವು ಕಡಿತ

ಹನೂರು: ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಯುವತಿಯೊಬ್ಬರಿಗೆ ಹಾವು ಕಚ್ಚಿದ ಪರಿಣಾಮ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಅಜ್ಜೀಪುರ ಗ್ರಾಮದಲ್ಲಿ ನಡೆದಿದೆ.…

4 mins ago

ಸರಗೂರು: ಹುಲಿ ದಾಳಿಗೆ ಕರು ಬಲಿ

ಸರಗೂರು: ಮೈಸೂರು ಜಿಲ್ಲೆಯಲ್ಲಿ ಮತ್ತೆ ಹುಲಿ ಉಪಟಳ ಹೆಚ್ಚಾಗಿದ್ದು, ಹುಲಿ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ಸರಗೂರು ತಾಲ್ಲೂಕಿನ ಹೆಗ್ಗನೂರು…

55 mins ago

ಅಮೇರಿಕಾಗೆ ಬಿಗ್‌ ಶಾಕ್‌ ಕೊಟ್ಟ ಇರಾನ್‌

ಟೆಹರಾನ್:‌ ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಯ ನಡುವೆ ಇರಾನ್‌ ಮಿಲಿಟರಿ ಪಡೆಗಳು ಜಾಗತಿಕ ತೈಲ ಸಾಗಣೆಯ ಪ್ರಮುಖ ಮಾರ್ಗವಾದ…

1 hour ago

ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ: ಶೇಖ್‌ ಹಸೀನಾ

ನವದೆಹಲಿ: ಈ ವರ್ಷವೇ ನಾನು ಬಾಂಗ್ಲಾದೇಶಕ್ಕೆ ಮರಳಲಿದ್ದೇನೆ ಎಂದು ಬಾಂಗ್ಲಾದೇಶ ಮಾಜಿ ಪ್ರಧಾನಿ ಶೇಖ್‌ ಹಸೀನಾ ಹೇಳಿದ್ದಾರೆ. ಈ ಬಗ್ಗೆ…

2 hours ago

ಮೋದಿ ಸಂಪುಟಕ್ಕೆ ಮೇಜರಿ ಸರ್ಜರಿ: ಹಲವು ಸಚಿವರ ಖಾತೆ ಬದಲಾವಣೆ?

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸಚಿವ ಸಂಪುಟದಲ್ಲಿ ಮಹತ್ವದ ಪುನಾರಚನೆ ನಡೆಯುವ…

3 hours ago

ಶಿವಾಜಿ ಗಣೇಶನ್‌ ಅವರ ದೆಹಲಿ ಕಣ್ಣೋಟ | ರಾಮಮಂದಿರ ಅಕ್ರಮ ಮಂಕಾಗಿಸಿದ ಬಿಜೆಪಿ ಭವಿಷ್ಯ

ಧಾರ್ಮಿಕ ಶ್ರದ್ಧಾ ಕೇಂದ್ರಗಳ ಬಗೆಗೆ ಭಕ್ತರು ಭಕ್ತಿಯಿಂದ ನಡೆದುಕೊಳ್ಳುವುದು ಮಾತ್ರವಲ್ಲ, ತಮ್ಮ ಇಚ್ಛೆಯ ಈಡೇರಿಕೆಗಾಗಿ ಹರಕೆ ಹೊತ್ತವರು , ದಾನ…

8 hours ago