ಬೆಂಗಳೂರು: ಎಂಎಲ್ಸಿ ರಾಜೇಂದ್ರ ರಾಜಣ್ಣ ಹತ್ಯೆಗೆ ಸ್ಕೆಚ್ ರೂಪಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಆಡಿಯೋ ವೈರಲ್ ಆಗುತ್ತಿದ್ದಂತೆ ಸೋಮನ ಆಪ್ತೆ ಪುಷ್ಪಾ ಎಂಬ ಮಹಿಳೆಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಸಚಿವ ಕೆ.ಎನ್.ರಾಜಣ್ಣ ಅವರ ಪುತ್ರ ರಾಜೇಂದ್ರರವರ ಹತ್ಯೆಗೆ ಸುಫಾರಿ ನೀಡಿದ ವಿಚಾರದ ಬಗ್ಗೆ ಆಡಿಯೋನಲ್ಲಿ ಕೇಳಿ ಬಂದಿರುವ ಪುಷ್ಪಾ ಎಂಬ ಮಹಿಳೆ ಸ್ಪೋಟಕ ಮಾಹಿತಿ ಹಂಚಿಕೊಂಡಿರುವುದು ಬಯಲಾಗಿದೆ. ಈ ಹಿನ್ನೆಲೆ ಕಳೆದ ನವೆಂಬರ್ನಲ್ಲಿ ರಾಜೇಂದ್ರ ಅವರ ಮಗಳ ಹುಟ್ಟುಹಬ್ಬದ ಡೆಕೋರೇಷನ್ಗಾಗಿ ಇಬ್ಬರು ಯುವಕರು ಬಂದಿದ್ದರು. ಆ ಇಬ್ಬರು ಯುವಕರನ್ನು ಕಳುಹಿಸಿದ್ದು, ಆಗಲೇ ಹತ್ಯೆಗೆ ಪ್ರಯತ್ನ ನಡೆದಿತ್ತು ಎಂದು ಆಡಿಯೋದಲ್ಲಿ ಪುಷ್ಪಾ ಎಂಬಾಕೆ ಮಾಹಿತಿ ನೀಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಪ್ರಕರಣದ ಹಿನ್ನೆಲೆ ಏನು?
ಕಾಂಗ್ರೆಸ್ ವಿಧಾನ ಪರಿಷತ್ ಸದಸ್ಯ ಆರ್.ರಾಜೇಂದ್ರ ಅವರ ಹತ್ಯೆಗೆ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ಯಾತ್ಸಂದ್ರ ಪೊಲೀಸ್ ಠಾಣೆಯಲ್ಲಿ ಐವರ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಅಲ್ಲದೇ ಅವರ ಸೋಮ, ಭರತ್, ಗುಂಡ, ಯತೀಶ್ ಹಾಗೂ ಅಮಿತ್ ಎಂಬುವವರ ವಿರುದ್ಧ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.
ಎಂ.ಬಿ.ರಂಗಸ್ವಾಮಿ ಮೂಗೂರು: ಗ್ರಾಮದ ಸರ್ಕಾರಿ ಕರ್ನಾಟಕ ಪಬ್ಲಿಕ್ ಶಾಲೆಯ ಹಿರಿಯ ಪ್ರಾಥಮಿಕ ಬಾಲಕ, ಬಾಲಕಿಯರ ಶಾಲೆಯಲ್ಲಿ ದೈಹಿಕ ಶಿಕ್ಷಣದ ಶಿಕ್ಷಕರ…
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…