ಬೆಂಗಳೂರು: ಡೆಂಗ್ಯೂ ಆರ್ಭಟದಿಂದ ಕಂಗೆಟ್ಟಿರುವ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಗೆ ಈಗ ಮತ್ತೊಂದು ಶಾಕ್ ಎದುರಾಗಿದೆ.
ಬೆಂಗಳೂರು ನಗರದಲ್ಲಿ ಮಳೆ ಹೆಚ್ಚಾಗಿ ಸುರಿದ ಪರಿಣಾಮ ಜನರಲ್ಲಿ ಮತ್ತೊಂದು ಆತಂಕ ಶುರುವಾಗಿದ್ದು, ಜನತೆ ಚರ್ಮದ ಕಾಳಜಿ ಬಗ್ಗೆ ಎಚ್ಚರ ವಹಿಸಬೇಕಿದೆ.
ಮಕ್ಕಳು ಸೇರಿದಂತೆ ವಯಸ್ಕರಲ್ಲಿ ಫಂಗಲ್ ಇನ್ಫೆಕ್ಷನ್ ಹಾಗೂ ಚರ್ಮದ ಸೋಂಕು ಕಾಣಿಸಿಕೊಳ್ಳುತ್ತಿದೆ. ಸದ್ಯ ಈ ಖಾಯಿಲೆಗಳು ಒಬ್ಬರಿಂದ ಒಬ್ಬರಿಗೆ ಹರಡುತ್ತಿದ್ದು, ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳಿಗೆ ಸೋಂಕು ಜಾಸ್ತಿ ಕಾಣಿಸಿಕೊಳ್ಳುತ್ತಿದ್ದು, ಮನೆಯಲ್ಲಿ ಒಬ್ಬರಿಗೆ ಕಾಣಿಸಿಕೊಂಡರೆ ಮನೆಯ ಎಲ್ಲಾ ಸದಸ್ಯರಿಗೂ ಈ ಸೋಂಕು ಉಲ್ಬಣಗೊಳ್ಳುತ್ತಿದೆ. ಹೀಗಾಗಿ ಜನತೆ ತುಂಬಾ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಇದು ಹೆಚ್ಚಾಗಿ ಚರ್ಮ ಒದ್ದೆಯಾಗುವುದು ಹಾಗೂ ಮಳೆಯಲ್ಲಿ ನೆನೆಯುವುದರಿಂದ ಕಂಡು ಬರುತ್ತದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಪೋಷಕರು ಮಕ್ಕಳಿಗೆ ಮಳೆಗಾಲ ಮುಗಿಯುವವರೆಗೂ ಕಾದಾರಿದ ಬಿಸಿ ನೀರು ಕುಡಿಯುವಂತೆ ನೋಡಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…