ಬೆಂಗಳೂರು: ಡೆಂಗ್ಯೂ ಆರ್ಭಟದಿಂದ ಕಂಗೆಟ್ಟಿರುವ ಸಿಲಿಕಾನ್ ಸಿಟಿ ಬೆಂಗಳೂರಿನ ಜನತೆಗೆ ಈಗ ಮತ್ತೊಂದು ಶಾಕ್ ಎದುರಾಗಿದೆ.
ಬೆಂಗಳೂರು ನಗರದಲ್ಲಿ ಮಳೆ ಹೆಚ್ಚಾಗಿ ಸುರಿದ ಪರಿಣಾಮ ಜನರಲ್ಲಿ ಮತ್ತೊಂದು ಆತಂಕ ಶುರುವಾಗಿದ್ದು, ಜನತೆ ಚರ್ಮದ ಕಾಳಜಿ ಬಗ್ಗೆ ಎಚ್ಚರ ವಹಿಸಬೇಕಿದೆ.
ಮಕ್ಕಳು ಸೇರಿದಂತೆ ವಯಸ್ಕರಲ್ಲಿ ಫಂಗಲ್ ಇನ್ಫೆಕ್ಷನ್ ಹಾಗೂ ಚರ್ಮದ ಸೋಂಕು ಕಾಣಿಸಿಕೊಳ್ಳುತ್ತಿದೆ. ಸದ್ಯ ಈ ಖಾಯಿಲೆಗಳು ಒಬ್ಬರಿಂದ ಒಬ್ಬರಿಗೆ ಹರಡುತ್ತಿದ್ದು, ಜನತೆಗೆ ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.
ಅದರಲ್ಲೂ ಚಿಕ್ಕ ಚಿಕ್ಕ ಮಕ್ಕಳಿಗೆ ಸೋಂಕು ಜಾಸ್ತಿ ಕಾಣಿಸಿಕೊಳ್ಳುತ್ತಿದ್ದು, ಮನೆಯಲ್ಲಿ ಒಬ್ಬರಿಗೆ ಕಾಣಿಸಿಕೊಂಡರೆ ಮನೆಯ ಎಲ್ಲಾ ಸದಸ್ಯರಿಗೂ ಈ ಸೋಂಕು ಉಲ್ಬಣಗೊಳ್ಳುತ್ತಿದೆ. ಹೀಗಾಗಿ ಜನತೆ ತುಂಬಾ ಎಚ್ಚರಿಕೆಯಿಂದ ಇರುವಂತೆ ಆರೋಗ್ಯ ಇಲಾಖೆ ಸೂಚನೆ ನೀಡಿದೆ.
ಇದು ಹೆಚ್ಚಾಗಿ ಚರ್ಮ ಒದ್ದೆಯಾಗುವುದು ಹಾಗೂ ಮಳೆಯಲ್ಲಿ ನೆನೆಯುವುದರಿಂದ ಕಂಡು ಬರುತ್ತದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಪೋಷಕರು ಮಕ್ಕಳಿಗೆ ಮಳೆಗಾಲ ಮುಗಿಯುವವರೆಗೂ ಕಾದಾರಿದ ಬಿಸಿ ನೀರು ಕುಡಿಯುವಂತೆ ನೋಡಿಕೊಳ್ಳಬೇಕು ಎಂದು ವೈದ್ಯರು ಸಲಹೆ ನೀಡಿದ್ದಾರೆ.
ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್ನ ಕಾನ್ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…
ಎಚ್.ಎಸ್.ದಿನೇಶ್ ಕುಮಾರ್ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…
ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…
ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…
ಲಕ್ನೋ: ಉತ್ತರ ಪ್ರದೇಶದಾದ್ಯಂತ ಭಾರೀ ಮಳೆ ಮತ್ತು ಬಿರುಗಾಳಿಗೆ ಈವರೆಗೆ 104 ಜನರು ಸಾವನ್ನಪ್ಪಿದ್ದಾರೆ. ಮಳೆ ಹೊಡೆತಕ್ಕೆ 53 ಜನರಿಗೆ…