ರಾಜ್ಯ

ಎಸ್.ಎಂ.ಕೃಷ್ಣ ಗುಣಮುಖ: ವಿಶ್ರಾಂತಿ ಪಡೆಯುವಂತೆ ವೈದ್ಯರ ಸಲಹೆ

ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು‌ ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದು, ಭಗವಂತನ ಕೃಪೆ ಮತ್ತು ವೈದ್ಯರ ಪರಿಶ್ರಮದಿಂದ ಎಸ್.ಎಂ.ಕೃಷ್ಣ ಅವರು ಗುಣಮುಖರಾಗಿದ್ದಾರೆ. ಆದರೆ ಎರಡು ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದು ಯಾವುದೆ‌ ಸಾರ್ವಜನಿಕ ಭೇಟಿ ಮತ್ತು ‌ಕಾರ್ಯಕ್ರಮಗಳಿಗೆ ಪಾಲ್ಗೊಳ್ಳದಂತೆ ವೈದ್ಯರು‌ ಸೂಚಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಅವರ ಹಿತೈಷಿಗಳು, ಅಭಿಮಾನಿಗಳು ಕೆಲವು ದಿನಗಳ ಕಾಲ ಅವರನ್ನು ಭೇಟಿ ಮಾಡದಂತೆ ಕುಟುಂಬ ವರ್ಗದವರಿಗೆ ವೈದ್ಯರು ತಿಳಿಸಿದ್ದು ಹೀಗಾಗಿ ಯಾರೂ ಸಹ ಅನ್ಯತಃ ಭಾವಿಸದೇ ಹಿರಿಯ ಮುತ್ಸುದ್ದಿಎಸ್.ಎಂ.ಕೃಷ್ಣ. ಅವರು ವಿಶ್ರಾಂತಿ ಪಡೆಯಲು ಸಹಕರಿಸಬೇಕಾಗಿದೆ ಹಾಗೂ ಸಂಪೂರ್ಣವಾಗಿ ಗುಣಮುಖರಾದ ನಂತರ ಎಸ್.ಎಂ.ಕೃಷ್ಣ ಅವರೇ ಎಲ್ಲರನ್ನೂ ಭೇಟಿ ಮಾಡಲಿದ್ದಾರೆ.

ಚಿಕಿತ್ಸೆ ನೀಡಿದ ಮಣಿಪಾಲ ವೈದ್ಯರ ತಂಡ ಹಾಗೂ ಸಿಬ್ಬಂದಿಗೆ ಎಸ್.ಎಂ.ಕೃಷ್ಣ ಅವರು ಧನ್ಯವಾದ ತಿಳಿಸಿದ್ದಾರೆ ಎಂದು ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

1 hour ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

4 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

6 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

6 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

6 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

6 hours ago