ಬೆಂಗಳೂರು: ಶ್ವಾಸಕೋಶ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಮುಖ್ಯಮಂತ್ರಿಗಳು ಹಾಗೂ ಕೇಂದ್ರದ ಮಾಜಿ ಸಚಿವರಾದ ಎಸ್.ಎಂ.ಕೃಷ್ಣ ಅವರ ಆರೋಗ್ಯ ಸುಧಾರಿಸಿದ್ದು ವೈದ್ಯರ ಸಲಹೆಯಂತೆ ಆಸ್ಪತ್ರೆಯಿಂದ ಬಿಡುಗಡೆಯಾಗಿ ಮರಳಿ ಮನೆಗೆ ಆಗಮಿಸಿದ್ದಾರೆ ಎಂದು ಶಾಸಕರಾದ ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.
ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು ಶ್ವಾಸಕೋಶದ ಸೊಂಕು ನಿವಾರಣೆ ಆದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿರುವುದಾಗಿ ಮಣಿಪಾಲ ಆಸ್ಪತ್ರೆ ವೈದ್ಯರು ತಿಳಿಸಿದ್ದು, ಭಗವಂತನ ಕೃಪೆ ಮತ್ತು ವೈದ್ಯರ ಪರಿಶ್ರಮದಿಂದ ಎಸ್.ಎಂ.ಕೃಷ್ಣ ಅವರು ಗುಣಮುಖರಾಗಿದ್ದಾರೆ. ಆದರೆ ಎರಡು ವಾರಗಳ ಕಾಲ ಮನೆಯಲ್ಲಿ ವಿಶ್ರಾಂತಿ ಪಡೆಯುವಂತೆ ವೈದ್ಯರು ಸಲಹೆ ನೀಡಿದ್ದು ಯಾವುದೆ ಸಾರ್ವಜನಿಕ ಭೇಟಿ ಮತ್ತು ಕಾರ್ಯಕ್ರಮಗಳಿಗೆ ಪಾಲ್ಗೊಳ್ಳದಂತೆ ವೈದ್ಯರು ಸೂಚಿಸಿದ್ದಾರೆ.
ಈ ಹಿನ್ನೆಲೆಯಲ್ಲಿ ಅವರ ಹಿತೈಷಿಗಳು, ಅಭಿಮಾನಿಗಳು ಕೆಲವು ದಿನಗಳ ಕಾಲ ಅವರನ್ನು ಭೇಟಿ ಮಾಡದಂತೆ ಕುಟುಂಬ ವರ್ಗದವರಿಗೆ ವೈದ್ಯರು ತಿಳಿಸಿದ್ದು ಹೀಗಾಗಿ ಯಾರೂ ಸಹ ಅನ್ಯತಃ ಭಾವಿಸದೇ ಹಿರಿಯ ಮುತ್ಸುದ್ದಿಎಸ್.ಎಂ.ಕೃಷ್ಣ. ಅವರು ವಿಶ್ರಾಂತಿ ಪಡೆಯಲು ಸಹಕರಿಸಬೇಕಾಗಿದೆ ಹಾಗೂ ಸಂಪೂರ್ಣವಾಗಿ ಗುಣಮುಖರಾದ ನಂತರ ಎಸ್.ಎಂ.ಕೃಷ್ಣ ಅವರೇ ಎಲ್ಲರನ್ನೂ ಭೇಟಿ ಮಾಡಲಿದ್ದಾರೆ.
ಚಿಕಿತ್ಸೆ ನೀಡಿದ ಮಣಿಪಾಲ ವೈದ್ಯರ ತಂಡ ಹಾಗೂ ಸಿಬ್ಬಂದಿಗೆ ಎಸ್.ಎಂ.ಕೃಷ್ಣ ಅವರು ಧನ್ಯವಾದ ತಿಳಿಸಿದ್ದಾರೆ ಎಂದು ದಿನೇಶ್ ಗೂಳಿಗೌಡ ಅವರು ತಿಳಿಸಿದ್ದಾರೆ.
ಗುವಹಾಟಿ : ಆರಂಭದಲ್ಲಿ ಬೌಲರ್ಗಳ ಅಬ್ಬರ ನಂತರ ವೈಭವ್ ಸೂರ್ಯವಂಶಿ ಅವರ ಸ್ಫೋಟಕ ಅರ್ಧಶತಕದ ಆಟದಿಂದ ಚೆನ್ನೈ ಸೂಪರ್ ಕಿಂಗ್ಸ್…
ಮೈಸೂರು: ನಗರದ ಪ್ರತಿಷ್ಠಿತ ಮೈಸೂರು ರೇಸ್ ಕ್ಲಬ್ ಸದಸ್ಯರಾಗಿ ಗೀತಿಕಾ ಬಸಪ್ಪ (152 ಮತ), ಡಾ.ಕೆ.ರವಿ (147), ಕಲೆಂಗಡ ಮಂದಣ್ಣ…
ಬೆಂಗಳೂರು : ಭಾರತದ ರಾಷ್ಟ್ರೀಯ ಹೆದ್ದಾರಿ ಪ್ರಯಾಣವು ಡಿಜಿಟಲ್ ರೂಪಾಂತರದ ಹೊಸ್ತಿಲಲ್ಲಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು…
ಟೆಹ್ರಾನ್ : ಅಮೆರಿಕದೊಂದಿಗೆ ಕದನ ವಿರಾಮಕ್ಕೆ ಸಂಬಂಧಿಸಿದಂತೆ ಯಾವುದೇ ನೇರ ಮಾತುಕತೆ ನಡೆದಿಲ್ಲ ಎಂದು ಇರಾನ್ ಸ್ಪಷ್ಟಪಡಿಸಿದೆ. ಇರಾನ್ ವಿದೇಶಾಂಗ…
ವಾಷಿಂಗ್ಟನ್ : ಹಾರ್ಮುಜ್ ಜಲಸಂಧಿಯನ್ನು ತಕ್ಷಣ ತೆರೆಯದಿದ್ದರೆ ಇರಾನ್ನ ಎಲ್ಲ ತೈಲ ಬಾವಿಗಳು ಮತ್ತು ಖಾರ್ಗ್ ದ್ವೀಪಗಳನ್ನು ಸಂಪೂರ್ಣವಾಗಿ ನಾಶಪಡಿಸುವುದಾಗಿ…
ಬೆಂಗಳೂರು : ದೇಶದಲ್ಲಿ ಮೊದಲ ಬಾರಿಗೆ ಮಕ್ಕಳಿಗೆ ಮೀಸಲಾಗಿ 450 ಹಾಸಿಗೆಗಳ ಬೃಹತ್, ಅತ್ಯಾಧುನಿಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಇಂದಿರಾ…