ಬೆಂಗಳೂರು : ಮುಂದಿನ ಮೂರು ತಿಂಗಳ ಕಾಲ ರಾಜ್ಯದಲ್ಲಿ ಆಗಾಗ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೇಸಿಗೆಯ ಬಿಸಿಲಿನ ತಾಪಕ್ಕೆ ತಂಪೆರೆಯುವ ರೀತಿ ವಾಡಿಕೆಗಿಂತ ತುಸು ಹೆಚ್ಚಿನ ಮಳೆಯಾಗಲಿದೆ. ಜನವರಿ, ಫೆಬ್ರವರಿ, ಮಾರ್ಚ್ ಅವಧಿಯಲ್ಲಿ 15.4 ಮಿಲಿಮೀಟರ್ ನಷ್ಟು ವಾಡಿಕೆ ಮಳೆಯಾಗುತ್ತದೆ.
ಈ ಪ್ರಮಾಣ ಮತ್ತು ಇದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗಲಿದ್ದು, ರಾಜ್ಯದಲ್ಲಿ ಸ್ವಲ್ಪಮಟ್ಟಿಗೆ ನೀರಿನ ಬವಣೆ ಕಡಿಮೆ ಮಾಡುತ್ತದೆ. ಅಲ್ಲದೇ, ಬೇಸಿಗೆಯಲ್ಲಿ ಬಿಸಿಲಿನ ತಾಪ ಕಡಿಮೆ ಮಾಡಲಿದೆ ಎಂದು ಹೇಳಲಾಗಿದೆ.
ಜನವರಿ, ಫೆಬ್ರವರಿ, ಮಾರ್ಚ್ ನಲ್ಲಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆಯಾಗುವ ಸಂಭವ ಇದೆ ಎಂದು ಹೇಳಿರುವುದರಿಂದ ಹಿಂಗಾರು, ಮುಂಗಾರು ಮಳೆ ಕೊರತೆಯಿಂದ ಕಂಗಾಳದ ರೈತರಿಗೆ ಅನುಕೂಲವಾಗಲಿದೆ ಎನ್ನಲಾಗಿದೆ.
ನವದೆಹಲಿ: ಮೇಕೆದಾಟು ಯೋಜನೆಗೆ ಇರುವ ಅಡೆತಡೆಗಳು ನಿವಾರಣೆಯಾಗುತ್ತಿದ್ದು, ಶೀಘ್ರದಲ್ಲೇ ಕಾಮಗಾರಿಗೆ ಚಾಲನೆ ನೀಡುವ ಸಾಧ್ಯತೆ ಇದೆ ಎಂದು ಕರ್ನಾಟಕದ ಜಲಸಂಪನ್ಮೂಲ…
ಬೆಂಗಳೂರು: ಮುಂದಿನ 24 ಗಂಟೆ ಅವಧಿಯಲ್ಲಿ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.…
ನವದೆಹಲಿ: ಜಂತರ್ ಮಂತರ್ ಹಾಗೂ ದೇಶದ ವಿವಿಧ ಭಾಗಗಳಲ್ಲಿ ವಿದ್ಯಾರ್ಥಿಗಳು ನಡೆಸಿದ ಪ್ರತಿಭಟನೆಗಳ ಮೇಲೆ ನಡೆದ ಪೊಲೀಸರ ದೌರ್ಜನ್ಯ ಮತ್ತು…
ಮಂಡ್ಯ: ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ನಿತ್ಯ 3500 ಕ್ಯೂಸೆಕ್ನಂತೆ 15…
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…