ರಾಜ್ಯ

ಸ್ಮಾರ್ಟ್‌ ಮೀಟರ್‌ ಹಗರಣ: ಸಚಿವ ಕೆ.ಜೆ.ಜಾರ್ಜ್‌ಗೆ ಬಿಗ್‌ ರಿಲೀಫ್‌

ಬೆಂಗಳೂರು: ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆಗೆ ಸಂಬಂಧಿಸಿದ ಟೆಂಡರ್ ಭ್ರಷ್ಟಾಚಾರ ಆರೋಪಕ್ಕೆ ಸಂಬಂಧಿಸಿದಂತೆ ಇಂಧನ ಸಚಿವ ಕೆ.ಜೆ.ಜಾರ್ಜ್‌ಗೆ ರಿಲೀಫ್‌ ಸಿಕ್ಕಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ಆದೇಶಕ್ಕೆ ಹೈಕೋರ್ಟ್‌ ತಡೆ ನೀಡಿದೆ.

ಪ್ರಕರಣದಲ್ಲಿ ಸಚಿವ ಕೆ.ಜೆ.ಜಾರ್ಜ್‌ ವಿರುದ್ಧ ನಡೆಸಿದ ತನಿಖಾ ವರದಿಯನ್ನು ಕೋರ್ಟ್‌ಗೆ ಸಲ್ಲಿಸಲು ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿ, ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಮಾಡಿತ್ತು. ಇದನ್ನು ಪ್ರಶ್ನಿಸಿ ಸಚಿವ ಜಾರ್ಜ್‌ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್‌, ಲೋಕಾಯುಕ್ತ ಎಸ್‌ಪಿ ಹಾಗೂ ದೂರುದಾರರಾದ ಬಿಜೆಪಿ ನಾಯಕರಾದ ಅಶ್ವಥ್‌ ನಾರಾಯಣ್‌, ಎಸ್.ಆರ್‌.ವಿಶ್ವನಾಥ್‌, ಧೀರಜ್‌ ಮುನಿರಾಜು ಅವರಿಗೆ ನೋಟಿಸ್‌ ನೀಡಿದೆ.

ಸ್ಮಾರ್ಟ್‌ ಮೀಟರ್‌ ಸೇವೆ ಒದಗಿಸುವ ನಿಟ್ಟಿನಲ್ಲಿ 2024ರ ಸೆಪ್ಟೆಂಬರ್.‌26ರಂದು ದಾವಣಗೆರೆ ರಾಜೇಶ್ವರಿ ಎಲೆಕ್ಟ್ರಿಕಲ್‌ ಸೆಲ್‌ ಕಂಪನಿಗೆ ಟೆಂಡರ್‌ ನೀಡಲಾಗಿದೆ. ನೇರವಾಗಿ ಟೆಂಡರ್‌ ನೀಡಲಾಗಿದ್ದು, ಇದು ಕರ್ನಾಟಕ ಸಾರ್ವಜನಿಕ ಖರೀದಿಯಲ್ಲಿ ಪಾರದರ್ಶಕತೆ ಅಧಿನಿಯಮ-2000, ಕರ್ನಾಟಕ ವಿದ್ಯುತ್‌ ನಿಯಂತ್ರಣ ಆರೋಗದ ನಿಯಮಗಳಿಗೆ ವಿರುದ್ಧವಾಗಿದೆ ಎಂದು ದೂರುದಾರರು ಆರೋಪಿಸಿದ್ದಾರೆ. ಈ ಬಗ್ಗೆ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸ್ಮಾರ್ಟ್‌ ಮೀಟರ್‌ ಟೆಂಡರ್‌ನಲ್ಲಿ ಭ್ರಷ್ಟಾಚಾರ ಆರೋಪ ಸಂಬಂಧ ಎಫ್‌ಐಆರ್‌ ದಾಖಲಿಸುವಂತೆ ಆದೇಶ ಹೊರಡಿಸಲಾಗಿತ್ತು.

ಆಂದೋಲನ ಡೆಸ್ಕ್

Recent Posts

ದೆಹಲಿಯಲ್ಲಿ ಭಾರೀ ಮಳೆ: ಯೆಲ್ಲೋ ಅಲರ್ಟ್‌ ಘೋಷಣೆ

ನವದೆಹಲಿ: ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸತತ ಎರಡನೇ ದಿನವೂ ಭಾರೀ ಮಳೆಯಾಗುತ್ತಿದೆ. ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಭಾರತೀಯ…

11 hours ago

ರಾಜ್ಯದಲ್ಲಿ ಮತ್ತಷ್ಟು ತಗ್ಗಲಿದೆ ಮಳೆ: ಹವಾಮಾನ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಸೆಪ್ಟೆಂಬರ್‌ ತಿಂಗಳಿನಲ್ಲಿ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಮತ್ತು ಉತ್ತರ ಒಳನಾಡಿನ…

13 hours ago

ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಎಚ್ಚರಿಕೆ

ಕಠ್ಮಂಡು: ನೇಪಾಳಕ್ಕೆ ಮತ್ತೆ ವಿನಾಶಕಾರಿ ಪ್ರವಾಹದ ಆತಂಕ ಎದುರಾಗಿದೆ. ದಾರ್ಚುಲಾ ಜಿಲ್ಲೆಯ ಅಪಿ ಹಿಮಾಲ್ ಗ್ರಾಮೀಣ ಪುರಸಭೆಯ ಭಟ್ಟಾರ್ ಪ್ರದೇಶದಲ್ಲಿ…

13 hours ago

ಓದುಗರ ಪತ್ರ: ಸಚಿವರಿಬ್ಬರ ಹೇಳಿಕೆಗಳು ‘ಲಕ್ಷ್ಮಣರೇಖೆ’ ಮೀರದಿರಲಿ

ಕೇಂದ್ರ ಸಚಿವ ಎಚ್. ಡಿ. ಕುಮಾರಸ್ವಾಮಿ ಮತ್ತು ರಾಜ್ಯ ಜಲಸಂಪನ್ಮೂಲ ಸಚಿವ ಎನ್.ಚಲುವರಾಯ ಸ್ವಾಮಿಯವರ ನಡುವಿನ ಆರೋಪ ಮತ್ತು ಪ್ರತ್ಯಾರೋಪಗಳು…

18 hours ago

ಓದುಗರ ಪತ್ರ: ‘ಸಂಧ್ಯಾ ಕಿರಣ’ ಯೋಜನೆಯ ವ್ಯಾಪ್ತಿಗೆ ವಯೋನಿಗದಿ ಬೇಡ

ಸರ್ಕಾರವು ೭೦ ವರ್ಷದೊಳಗಿನ ನಿವೃತ್ತ ಸರ್ಕಾರಿ ಪಿಂಚಣಿದಾರರಿಗೆ, ಕುಟುಂಬ ಪಿಂಚಣಿದಾರರಿಗೆ ಮತ್ತು ಅವರ ಅರ್ಹ ಅವಲಂಬಿತ ವಿಕಲಚೇತನ ಮಕ್ಕಳ ಆರೋಗ್ಯ…

19 hours ago

ಓದುಗರ ಪತ್ರ: ಗುರು-ಶಿಷ್ಯರ ಸಂಬಂಧ ವರ್ಣನಾತೀತ

ನಮ್ಮಲ್ಲಿ ಗುರುವಿಗೆ ಅಗ್ರಸ್ಥಾನ ಕೊಟ್ಟಿದ್ದೇವೆ. ಒಂದು ಅಕ್ಷರ ಕಲಿಸಿದವರನ್ನು ಗುರುವೆಂದು ಒಪ್ಪಿಕೊಂಡಿದ್ದೇವೆ. ಗುರುವು ನಮಗೆ ಒಳ್ಳೆಯ ಮಾರ್ಗ,ನಡತೆ ಹಾಗೂ ಜ್ಞಾನವನ್ನು…

19 hours ago