ರಾಜ್ಯ

ಸ್ಮಾರ್ಟ್‌ ಮೀಟರ್‌ ಹಗರಣ: ರಾಜ್ಯ ಸರ್ಕಾದ ವಿರುದ್ಧ ನಿಖಿಲ್‌ ಕುಮಾರಸ್ವಾಮಿ ಕಿಡಿ

ಬೆಂಗಳೂರು: ಸ್ಮಾರ್ಟ್‌ ಮೀಟರ್‌ನಲ್ಲಿ ಸಾವಿರಾರು ಕೋಟಿ ರೂಪಾಯಿಗಳ ಹಗರಣ ನಡೆದಿದೆ ಎಂದು ರಾಜ್ಯ ಸರ್ಕಾರದ ಜೆಡಿಎಸ್‌ ಯುವ ಘಟಕದ ಅಧ್ಯಕ್ಷ ನಿಖಿಲ್‌ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ನಗರದ ಜೆಪಿ ಭವನದಲ್ಲಿ ಇಂದು(ಮಾರ್ಚ್.‌25) ಈ ಕುರಿತು ಮಾಧ್ಯಮಗಳೊಂದಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದು 2 ವರ್ಷಗಳಾಗುತ್ತಾ ಬಂದಿದೆ. ಆದರೆ ಅಧಿಕಾರಕ್ಕೆ ಬಂದಾಗಿನಿಂದ ದೊಡ್ಡ ಹಗರಣಗಳೇ ಬಯಲಿಗೆ ಬರುತ್ತಿವೆ. ಈ ಸರ್ಕಾರದಿಂದ ರಾಜ್ಯದ ಜನತೆ ಇದನ್ನು ನಿರೀಕ್ಷೆ ಮಾಡಿರಲಿಲ್ಲ ಈ ಸರ್ಕಾರದಿಂದ ಸ್ಮಾರ್ಟ್ ಮೀಟರ್‌ನಲ್ಲಿ ಅಕ್ರಮ ನಡೆದಿದ್ದು, ಇದರ ಟೆಂಡರ್ ಪ್ರಕ್ರಿಯೆ ಸರಿಯಾಗಿ ಆಗಿಲ್ಲ. ಸದನದಲ್ಲಿಯೂ ಕೂಡ ಈ ಹಗರಣ ಬಗ್ಗೆ ಪ್ರಸ್ತಾಪ ಆಗಿದೆ ಎಂದರು.

ದೇಶದ ಅನೇಕ ರಾಜ್ಯಗಳಲ್ಲಿ ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಿಕೊಂಡಿವೆ. ಕೇಂದ್ರ ಸರ್ಕಾರ ಸ್ಮಾರ್ಟ್ ಮೀಟರ್ ಅಳವಡಿಕೆ ಬಗ್ಗೆ ಸೂಚನೆ ನೀಡಿತ್ತು. ಅಂತೆಯೇ ಕೇಂದ್ರದಿಂದ ಸ್ಮಾರ್ಟ್ ಮೀಟರ್‌ಗೆ ಸಬ್ಸಿಡಿ ನೀಡುತ್ತಿದೆ. ಈಗಾಗಲೇ ದೇಶದಲ್ಲಿ 19 ಕೋಟಿ ರೂ.ನಷ್ಟು ಸ್ಮಾರ್ಟ್ ಮೀಟರ್ ಅಳವಡಿಸಲಾಗಿದೆ. ಆದರೆ ನಮ್ಮ ರಾಜ್ಯದಲ್ಲಿ ಮಾತ್ರ ಬಾಟಾ ಚಪ್ಪಲಿ ರೀತಿ 4,998 ರೂ. ಹಣ ಫಿಕ್ಸ್‌ ಮಾಡಿದ್ದಾರೆ. ಹೀಗಾಗಿ ನಮ್ಮ ಪಕ್ಷ ಮತ್ತು ಬಿಜೆಪಿ ಒಟ್ಟಾಗಿ ಅಕ್ರಮದ ಬಗ್ಗೆ ಹೋರಾಟ ಮಾಡಿ, ತಾರ್ಕಿಕ ಅಂತ್ಯಕ್ಕೆ ತೆಗೆದುಕೊಂಡು ಹೋಗುತ್ತೇವೆ ಎಂದು ಹೇಳಿದರು.

ಇನ್ನು ಈ ಹಗರಣ ಬಗ್ಗೆ ಯಾರಿದ್ದಾರೆಂದು ತಿಳಿಯಬೇಕಿದೆ. ಸ್ಮಾರ್ಟ್ ಮೀಟರ್‌ನಲ್ಲಿ ನಡೆದಿರುವ ಅಕ್ರಮ ಸಚಿವರು ಮತ್ತು ಅಧಿಕಾರಿಗಳ ಗಮನಕ್ಕೆ ನಡೆದಿರಲು ಸಾಧ್ಯವೇ ಇಲ್ಲ. ರಾಜ್ಯದ ಜನತೆಗೆ ಎಲ್ಲಾ ರೀತಿಯಲ್ಲಿಯೂ ಬೆಲೆ ಏರಿಕೆ ಬರೆ ಎಳೆದಿದ್ದು, ಯಾವುದನ್ನು ಬಿಟ್ಟಿಲ್ಲ. ಹಾಗಾಗಿ ಸ್ಮಾರ್ಟ್ ಮೀಟರ್ ಬರೆ ಹಾಕಿದ್ದಾರೆ. ಕಾಂಗ್ರೆಸ್‌ ಪಕ್ಷ ದಪ್ಪ ಚರ್ಮ ಇಟ್ಟುಕೊಂಡು ಸರ್ಕಾರ ನಡೆಸುತ್ತಿದೆ. ಅಲ್ಲದೇ ಮುಂದೆ ಕಾಂಗ್ರೆಸ್‌ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲವೆಂದು ತಿಳಿದಿರಬೇಕು. ಹೀಗಾಗಿ ಎಷ್ಟು ಸಾಧ್ಯವೋ ಅಷ್ಟು ಲೂಟಿ ಮಾಡೋಣವೆಂದು ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ಅರ್ಚನ ಎಸ್‌ ಎಸ್

Recent Posts

ಓದುಗರ ಪತ್ರ: ಪ್ರಕೃತಿ ಪ್ರೀತಿ ಅತಿಮುಖ್ಯ

ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…

20 hours ago

ಓದುಗರ ಪತ್ರ: ಪ್ಲಾಸ್ಟಿಕ್ ನೋಟುಗಳ ಬಿಡುಗಡೆ ನಿರ್ಧಾರ ದೂರದೃಷ್ಟಿಯ ಹೆಜ್ಜೆ

ಆರ್‌ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…

20 hours ago

ಓದುಗರ ಪತ್ರ: ಸಮಾನತೆ ಮಾತನಾಡುವವರ ನಡವಳಿಕೆ ಇದೇನಾ?

ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…

20 hours ago

ಚಲನಚಿತ್ರ: ಪ್ರಮಾಣೀಕರಣ ಮಂಡಳಿಯದೇ ಅಂತಿಮ ತೀರ್ಪು

ವೈಡ್‌ ಆಂಗಲ್:‌ ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ  ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…

20 hours ago

ಕೊಡಗು ಜಿಲ್ಲೆಯಲ್ಲಿ ಶೇ.37ರಷ್ಟು ಮಳೆ ಕೊರತೆ

ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…

20 hours ago

ಕಬಿನಿ ಜಲಾಶಯದಿಂದ ಹರಿಸುತ್ತಿದ್ದ ನೀರು ಸ್ಥಗಿತ

ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್‌ಗೇಟ್‌ಗಳನ್ನು ಬಂದ್…

20 hours ago