Mysore
22
clear sky

Social Media

ಮಂಗಳವಾರ, 17 ಮಾರ್ಚ್ 2026
Light
Dark

ಸ್ಮೃತಿ ಇರಾನಿ ಕಾಣುತ್ತಿಲ್ಲ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯ

lakshmi hebbalkar opinion on caste census

ಬೆಂಗಳೂರು: ಅಡುಗೆ ಅನಿಲದ ಬೆಲೆ ಏರಿಕೆ ಮಾಡುವ ಮೂಲಕ ಮಹಿಳೆಯರಿಗೆ ಉಡುಗೊರೆ ನೀಡಿರುವ ಕೇಂದ್ರ ಸರ್ಕಾರಕ್ಕೆ ಅಭಿನಂದನೆ ಸಲ್ಲಿಸಲು ಬಯಸುವೆ. ಈ ಬಗ್ಗೆ ಮಾತನಾಡಲು ಕೇಂದ್ರದ ಮಾಜಿ ಸಚಿವೆ ಸ್ಮೃತಿ ಇರಾನಿ ಕಾಣಿಸುತ್ತಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌ ವ್ಯಂಗ್ಯವಾಡಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ಈ ಹಿಂದೆ 10, 20 ರೂಪಾಯಿ ಏರಿಕೆ ಮಾಡಿದರೂ ಸ್ಮೃತಿ ಇರಾನಿ ಹೋರಾಟ ಮಾಡುತ್ತಿದ್ದರು. ಯಾಕೆ ಈಗ ಮಾತಾಡುತ್ತಿಲ್ಲ, ಎಲ್ಲಿ ಕಾಣೆಯಾಗಿದ್ದಾರೆ ಎಂದು ಪ್ರಶ್ನಿಸಿದರು.

ಈಗ ಯುದ್ಧ ನಡೆಯುತ್ತಿದ್ದು, ಇದರಿಂದ ಪೆಟ್ರೋಲ್‌, ಡಿಸೇಲ್‌, ಗ್ಯಾಸ್‌ ಬೆಲೆ ಏರಿಕೆಯಾಗುತ್ತಿದೆ. ಈಗಷ್ಟೇ ಸಂಕಷ್ಟ ಶುರುವಾಗಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು ಸಂಕಷ್ಟ ಎದುರಾಗಲಿದೆ. ಕೇಂದ್ರ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕು. ಗ್ರಾಹಕರ ಹಾಗೂ ಹೋಟೆಲ್‌ ನವರ ಹಿತದೃಷ್ಟಿಯನ್ನು ಕಾಪಾಡಬೇಕು ಎಂದು ಆಗ್ರಹಿಸಿದರು.

Tags:
error: Content is protected !!