ಕಲಬುರ್ಗಿ: ಸಿಸಿಬಿಯಿಂದ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಬಂಧನದ ಹಿಂದೆ ಸಿಎಂ ದೊಡ್ಡ ಕೈವಾಡವಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಕಿಡಿಕಾರಿದರು.
ಈ ಕುರಿತು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನಟೋರಿಯಸ್ ನಟೇಶ್ ದೂರಿನ ಮೇಲೆ ಸ್ನೇಹಮಯಿ ಕೃಷ್ಣರನ್ನು ಬಂಧಿಸಿದ್ದೀರಿ. ನಿಮಗೆ ನಾಚಿಕೆ ಆಗಲ್ವಾ? ಎಂದು ವಾಗ್ದಾಳಿ ನಡೆಸಿದರು.
ಮಾನ ಮಾರ್ಯಾದೆ ಇದ್ದರೆ ಸ್ನೇಹಮಯಿ ಕೃಷ್ಣ ಬಿಡುಗಡೆ ಮಾಡಲಿ. ಸ್ನೇಹಮಯಿ ಕೃಷ್ಣ ಕೋರ್ಟ್ಗೆ ದಾಖಲೆ ಸಲ್ಲಿಸಲಿ ಎಂದು ಪ್ರಹ್ಲಾದ್ ಜೋಶಿ ಆಗ್ರಹಿಸಿದರು.





