ರಾಜ್ಯ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ಗ್ರಾಮೀಣ ಭಾಗದಲ್ಲಿ ಪೂರ್ಣ: ಸಚಿವ ಶಿವರಾಜ್‌ ತಂಗಡಗಿ

ಬೆಂಗಳೂರು: ಹಿಂದುಳಿದ ವರ್ಗಗಳ ಶಾಶ್ವತ ಆಯೋಗದಿಂದ ನಡೆಸಲಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಗ್ರಾಮೀಣ ಭಾಗದಲ್ಲಿ ಶೇ.98ರಷ್ಟು ಪೂರ್ಣಗೊಂಡಿದ್ದು, ಗ್ರೆಟರ್ ಬೆಂಗಳೂರಿನಲ್ಲಿ ಬಾಕಿ ಇದೆ. ಎಲ್ಲವನ್ನೂ ಕ್ರೂಢೀಕರಿಸಿ ಎರಡು ತಿಂಗಳ ಒಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಕೆಯಾಗಲಿದೆ ಎಂದು ಸಚಿವ ಶಿವರಾಜ ತಂಗಡಗಿ ತಿಳಿಸಿದ್ದಾರೆ.

ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆನ್‌ಲೈನ್‌ನಲ್ಲಿ ಸಮೀಕ್ಷೆಗೆ ಮಾಹಿತಿ ನೀಡುವ ಗಡುವನ್ನು ಈ ತಿಂಗಳ 30ರವರೆಗೂ ವಿಸ್ತರಣೆ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಸರಾಸರಿ ಶೇ.98ರಷ್ಟು ಸಮೀಕ್ಷೆಯಾಗಿದೆ. ಕೆಲವು ಜಿಲ್ಲೆಗಳಲ್ಲಿ ಪೂರ್ಣಗೊಂಡಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಶೇ.92ರಷ್ಟು ಸಮೀಕ್ಷೆಯಾಗಿದೆ ಎಂದು ಹೇಳಿದರು.

ಇದನ್ನು ಓದಿ: ಜಿಲ್ಲೆಯಲ್ಲಿ ಶೇ.೮೫ರಷ್ಟು ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ ಪೂರ್ಣ

ಆನ್‍ಲೈನ್ ಸಮೀಕ್ಷೆಯಲ್ಲಿ ಭಾಗವಹಿಸಲು ಇದೇ ತಿಂಗಳ 30ರವರೆಗೂ ಗಡುವು ನೀಡಲಾಗಿದೆ. ಬೆಂಗಳೂರಿನಲ್ಲಿ ಸಮೀಕ್ಷೆ ಪೂರ್ಣಗೊಂಡಿಲ್ಲ. ಉಳಿದ ಎಲ್ಲಾ ಜಿಲ್ಲೆಗಳ ಅಂಕಿ-ಸಂಖ್ಯೆಗಳನ್ನೂ ಕ್ರೋಢಿಕರಿಸುವ ಪ್ರಕ್ರಿಯೆಗಳು ನಡೆಯುತ್ತಿವೆ ಎಂದರು.

ಬೆಂಗಳೂರು ಸೇರಿದಂತೆ ಎಲ್ಲಾ ಮಾಹಿತಿಗಳನ್ನು ಸಂಗ್ರಹಿಸಿದ ಬಳಿಕ ಮುಂದಿನ ರೂಪುರೇಷೆ ಸಿದ್ದಪಡಿಸಲಾಗುವುದು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚೆ ಮಾಡಿ, ಒಂದೂವರೆ ಅಥವಾ ಎರಡು ತಿಂಗಳ ಒಳಗಾಗಿ ವರದಿ ಪಡೆದುಕೊಳ್ಳಲಾಗುವುದು ಎಂದರು.

ಸಮೀಕ್ಷೆಯಲ್ಲಿ ಭಾಗವಹಿಸಬೇಡಿ ಎಂದು ಕರೆ ನೀಡಿದ್ದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದ ತೇಜೆಸ್ವಿ ಸೂರ್ಯ ಅವರಿಗೆ ಮುಖಭಂಗವಾಗಿದೆ. ಸಮೀಕ್ಷೆಯಲ್ಲಿ ಭಾಗವಹಿಸುವುದಿಲ್ಲ ಎಂದು ಹೇಳಿದ್ದ ಇನ್ಫೋಸಿಸ್ ನಾರಾಯಣ ಮೂರ್ತಿ ಹಾಗೂ ಸುಧಾ ಮೂರ್ತಿ ಅವರ ಮಾತುಗಳನ್ನು ಜನ ಕೇಳಿಲ್ಲ. ಎಲ್ಲರೂ ಬುದ್ದಿವಂತರಾಗಿ ಸಮೀಕ್ಷೆಯಲ್ಲಿ ಭಾಗವಹಿಸುವ ಮೂಲಕ ಮಾಹಿತಿಗಳನ್ನು ನೀಡಿದ್ದಾರೆ ಎಂದರು.

ಆಂದೋಲನ ಡೆಸ್ಕ್

Recent Posts

ಇರಾನ್ ಮಹಿಳಾ ಫುಟ್ಬಾಲ್ ತಂಡಕ್ಕೆ ಹೆಚ್ಚುತ್ತಿರುವ ಭಯ ; ಆಸ್ಟ್ರೇಲಿಯಾದಲ್ಲಿ ಆಶ್ರಯಕ್ಕೆ ಹೆಚ್ಚುತ್ತಿರುವ ಕರೆ!

ಗೋಲ್ಡ್ ಕೋಸ್ಟ್ (ಆಸ್ಟ್ರೇಲಿಯಾ) :  ಆಸ್ಟ್ರೇಲಿಯಾದಲ್ಲಿ ನಡೆಯುತ್ತಿರುವ ಏಷ್ಯಾ ಮಹಿಳಾ ಫುಟ್ಬಾಲ್ ಕಪ್ 2026ನಲ್ಲಿ ಭಾಗವಹಿಸಿದ್ದ ಇರಾನ್ ರಾಷ್ಟ್ರೀಯ ಮಹಿಳಾ…

4 hours ago

ಜಾಗತಿಕ ತೈಲ ಬೆಲೆಗಳಲ್ಲಿ ಭಾರೀ ಏರಿಕೆ ; ಬ್ಯಾರೆಲ್‌ಗೆ 120 ಡಾಲರ್ ಗಡಿ ದಾಟಿದ ತೈಲ ಬೆಲೆ

ಹೊಸದಿಲ್ಲಿ : ಇರಾನ್ ಮೇಲಿನ ಅಮೆರಿಕಾ-ಇಸ್ರೇಲ್ ದಾಳಿಗಳು ಮತ್ತು ಇರಾನ್‌ಗೆ ಹೊಸ ಸುಪ್ರೀಂ ಲೀಡರ್ ನೇಮಕದ ನಂತರ ಮಧ್ಯಪ್ರಾಚ್ಯದಲ್ಲಿ ತೀವ್ರ…

5 hours ago

ಮಧ್ಯಪ್ರಾಚ್ಯ ಸಂಘರ್ಷ | ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ತೆರಳುತಿದ್ದ ಇಂಡಿಗೊ ವಿಮಾನ ಯು-ಟರ್ನ್‌

ಹೊಸದಿಲ್ಲಿ : ಮಧ್ಯಪ್ರಾಚ್ಯದಲ್ಲಿ ಇರಾನ್-ಇಸ್ರೇಲ್-ಅಮೆರಿಕಾ ನಡುವಿನ ಸಂಘರ್ಷದ ಹಿನ್ನೆಲೆಯಲ್ಲಿ ವಾಯುಪ್ರದೇಶದಲ್ಲಿ ತುರ್ತು ನಿರ್ಬಂಧಗಳು ಜಾರಿಯಾಗಿರುವುದರಿಂದ ದೆಹಲಿಯಿಂದ ಮ್ಯಾಂಚೆಸ್ಟರ್‌ಗೆ ಹೋಗುತಿದ್ದ ಇಂಡಿಗೊ…

6 hours ago

ಎಂಡಿಎ ಬಜೆಟ್‌ | ಮೈಸೂರು ಅಭಿವೃದ್ಧಿಗೆ ಒತ್ತು ; 799.90 ಕೋಟಿ ರೂ. ಸಂಪನ್ಮೂಲ ನಿರೀಕ್ಷೆ

ಮೈಸೂರು : ಮೈಸೂರು ಅಭಿವೃದ್ಧಿ ಪ್ರಾಧಿಕಾರ (MDA) ಈ ಬಾರಿಯ ಆರ್ಥಿಕ ವರ್ಷದ ಬಜೆಟ್‌ನಲ್ಲಿ ನಗರದ ಸಮಗ್ರ ಅಭಿವೃದ್ಧಿಗೆ ತೀವ್ರ…

7 hours ago

ಮೈಸೂರು | 24 ಅಪರಾಧ ಪ್ರಕರಣ ಭೇಧಿಸಿದ ಪೊಲೀಸರು ; 20ಕ್ಕೂ ಹೆಚ್ಚು ಆರೋಪಿಗಳು ವಶಕ್ಕೆ

ಮೈಸೂರು : ಮನೆಗಳ್ಳತನ, ವಾಹನ ಕಳ್ಳತನ, ದರೋಡೆ ಸೇರಿದಂತೆ ಕಳೆದ ಎರಡು ತಿಂಗಳಲ್ಲಿ ಜಿಲ್ಲೆಯಲ್ಲಿ ನಡೆದಿದ್ದ 24 ಅಪರಾಧ ಪ್ರಕರಣಗಳನ್ನು…

8 hours ago

ʻಪಂಚ ಗ್ಯಾರಂಟಿʼಯಿಂದ ಮಹಿಳಾ ಸಬಲೀಕರಣ ಸಾಧ್ಯ : ಅರುಣ್ ಕುಮಾರ್

ಮೈಸೂರು : ರಾಜ್ಯ ಸರ್ಕಾರದ ʻಪಂಚ ಗ್ಯಾರಂಟಿʼ ಯೋಜನೆಗಳಿಂದ ಮಹಿಳಾ ಸಬಲೀಕರಣ ಸಾಧ್ಯವಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ…

8 hours ago