ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಮೀಕ್ಷಾದಾರರಿಗೆ ಮೊದಲ ಕಂತಿನ ಗೌರವಧನ ತಲಾ 5 ಸಾವಿರ ರೂ. ಬಿಡುಗಡೆ ಮಾಡಿ ಆದೇಶಿಸಲಾಗಿದೆ.
ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ 1,20,728 ಸಮೀಕ್ಷಾದಾರರಿಗೆ ಮೊದಲ ಕಂತಿನಲ್ಲಿ ತಲಾ 5000 ರೂ.ನಂತೆ ಗೌರವಧನವನ್ನು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಒಟ್ಟು 60,36,40,000 ರೂ.ಗಳನ್ನು ಸಮೀಕ್ಷಾ ಉದ್ದೇಶಕ್ಕಾಗಿ ನಿಗಮಗಳಿಂದ ಆಯೋಗದ ಖಾತೆಗೆ ವರ್ಗಾವಣೆಯಾಗಿರುವ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಜಿಲ್ಲಾಧಿಕಾರಿಗಳ ಹೆಸರಿನಲ್ಲಿರುವ ಪಿಡಿ ಖಾತೆ/ಬ್ಯಾಂಕ್ ಖಾತೆಗೆ ಹಲವು ನಿಬಂಧನೆಗಳಿಗೆ ಒಳಪಟ್ಟು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಸಮೀಕ್ಷಾದಾರರಿಗೆ ತಲಾ 5 ಸಾವಿರ ರೂ.ನಂತೆ ಮೊದಲ ಕಂತಿನ ಗೌರವಧನ ನೀಡಲು ಬಳಸಬೇಕು. ಉಳಿದ ಅನುದಾನವನ್ನು ಮುಂದಿನ ಕಂತಿನಲ್ಲಿ ಬಿಡುಗಡೆ ಮಾಡಲಾಗುವುದು.
ಬಿಡುಗಡೆ ಮಾಡಲಾದ ಅನುದಾನ ಮತ್ತು ವೆಚ್ಚದ ವಿವರವನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ನಿಯಮಾನುಸಾರ ವೆಚ್ಚ ಮಾಡಿದ ನಂತರ ಹಣ ವಿನಿಯೋಗ ಪ್ರಮಾಣಪತ್ರವನ್ನು ಆಯೋಗಕ್ಕೆ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಬೆಂಗಳೂರು: ಪ್ರಸಕ್ತ 2025-26ನೇ ಸಾಲಿನ ರಾಜ್ಯಮಟ್ಟದ ಎಸ್ಎಸ್ಎಲ್ಸಿ ಪೂರ್ವ ಸಿದ್ಧತಾ ಪರೀಕ್ಷೆ-2ರ ವೇಳಾಪಟ್ಟಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಜ.27…
ಬೆಂಗಳೂರು: ಕರ್ನಾಟಕ ಸರ್ಕಾರ ಸುತ್ತೋಲೆಯೊಂದನ್ನು ಹೊರಡಿಸಿದೆ. ಸರ್ಕಾರಿ ಕಾರ್ಯಕ್ರಮ, ರಾಷ್ಟ್ರೀಯ ಹಬ್ಬಗಳು, ಶಾಲಾ-ಕಾಲೇಜುಗಳ ಕಾರ್ಯಕ್ರಮಗಳಲ್ಲಿ ಜನರ ಹಾಗೂ ಮಕ್ಕಳ ಸುರಕ್ಷತೆಗೆ…
ಯಾದಗಿರಿ: ದೇವರದಾಸಿಮಯ್ಯ ಪುಣ್ಯಕ್ಷೇತ್ರ ಯಾದಗಿರಿ ಜಿಲ್ಲೆಯ ಮುದನೂರು ಗ್ರಾಮದಲ್ಲಿಯೂ ಉತ್ಖನನ ನಡೆಸಲು ಸಿದ್ಧತೆ ನಡೆದಿದೆ. ಮುದನೂರು ಗ್ರಾಮ ರಾಜ-ಮಹಾರಾಜರ ಕಾಲದಲ್ಲಿ…
ಮೈಸೂರು: ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಸಂಸದ ಯದುವೀರ್ ಒಡೆಯರ್ ಅವರನ್ನು ಭೇಟಿಯಾಗಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು…
ಬೆಂಗಳೂರು: ಜಾತಿ, ಅಸಮಾನತೆ, ಸಂವಿಧಾನದ ಮೌಲ್ಯ ಎತ್ತಿ ಹಿಡಿಯುವ "ಲ್ಯಾಂಡ್ ಲಾರ್ಡ್" ಸಿನಿಮಾ ನೋಡಿ ಎಂದು ಸಿಎಂ ಸಿದ್ದರಾಮಯ್ಯ ಕರೆ…
ಶ್ರೀನಗರ: ಕಾಶ್ಮೀರದ ಸುತ್ತಮುತ್ತ ಭಾರೀ ಹಿಮಮಳೆಯಾಗುತ್ತಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಜಮ್ಮು-ಕಾಶ್ಮೀರದಲ್ಲಿ ಹಲವು ವರ್ಷಗಳ ಬಳಿಕ ಇಷ್ಟೊಂದು ಹಿಮಪಾತವಾಗುತ್ತಿದ್ದು, ಜನಜೀವನ…