ಬೆಂಗಳೂರು: ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ನಡೆಸಲಾಗುತ್ತಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಮೀಕ್ಷಾದಾರರಿಗೆ ಮೊದಲ ಕಂತಿನ ಗೌರವಧನ ತಲಾ 5 ಸಾವಿರ ರೂ. ಬಿಡುಗಡೆ ಮಾಡಿ ಆದೇಶಿಸಲಾಗಿದೆ.
ಹಿಂದುಳಿದ ವರ್ಗಗಳ ಆಯೋಗದ ಸದಸ್ಯ ಕಾರ್ಯದರ್ಶಿ ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ರಾಜ್ಯದಲ್ಲಿ 1,20,728 ಸಮೀಕ್ಷಾದಾರರಿಗೆ ಮೊದಲ ಕಂತಿನಲ್ಲಿ ತಲಾ 5000 ರೂ.ನಂತೆ ಗೌರವಧನವನ್ನು ಎಲ್ಲಾ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಿರುವುದಾಗಿ ಆದೇಶದಲ್ಲಿ ತಿಳಿಸಲಾಗಿದೆ.
ಒಟ್ಟು 60,36,40,000 ರೂ.ಗಳನ್ನು ಸಮೀಕ್ಷಾ ಉದ್ದೇಶಕ್ಕಾಗಿ ನಿಗಮಗಳಿಂದ ಆಯೋಗದ ಖಾತೆಗೆ ವರ್ಗಾವಣೆಯಾಗಿರುವ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.
ಜಿಲ್ಲಾಧಿಕಾರಿಗಳ ಹೆಸರಿನಲ್ಲಿರುವ ಪಿಡಿ ಖಾತೆ/ಬ್ಯಾಂಕ್ ಖಾತೆಗೆ ಹಲವು ನಿಬಂಧನೆಗಳಿಗೆ ಒಳಪಟ್ಟು ಬಿಡುಗಡೆ ಮಾಡಿ ಆದೇಶ ಹೊರಡಿಸಲಾಗಿದೆ. ಸಮೀಕ್ಷಾದಾರರಿಗೆ ತಲಾ 5 ಸಾವಿರ ರೂ.ನಂತೆ ಮೊದಲ ಕಂತಿನ ಗೌರವಧನ ನೀಡಲು ಬಳಸಬೇಕು. ಉಳಿದ ಅನುದಾನವನ್ನು ಮುಂದಿನ ಕಂತಿನಲ್ಲಿ ಬಿಡುಗಡೆ ಮಾಡಲಾಗುವುದು.
ಬಿಡುಗಡೆ ಮಾಡಲಾದ ಅನುದಾನ ಮತ್ತು ವೆಚ್ಚದ ವಿವರವನ್ನು ಪ್ರತ್ಯೇಕವಾಗಿ ನಿರ್ವಹಿಸಬೇಕು. ನಿಯಮಾನುಸಾರ ವೆಚ್ಚ ಮಾಡಿದ ನಂತರ ಹಣ ವಿನಿಯೋಗ ಪ್ರಮಾಣಪತ್ರವನ್ನು ಆಯೋಗಕ್ಕೆ ಸಲ್ಲಿಸುವಂತೆ ಆದೇಶದಲ್ಲಿ ತಿಳಿಸಲಾಗಿದೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…