ರಾಜ್ಯ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ | ಮಾಹಿತಿ ನೀಡೋದು ಕಡ್ಡಾಯವಲ್ಲ ; ಆಯೋಗ ಸ್ಪಷ್ಟನೆ

ಬೆಂಗಳೂರು : ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ರಾಜ್ಯದ ಎಲ್ಲ ಜನಸಂಖ್ಯೆಯನ್ನು ಒಳಗೊಳ್ಳುವುದೆಂದು ಸರ್ಕಾರ ಹೇಳಿದ್ದರೂ, ಇದರಲ್ಲಿ ಭಾಗವಹಿಸುವುದು ಸಂಪೂರ್ಣವಾಗಿ ಸ್ವಯಂಪ್ರೇರಿತವೆಂದು ಆಯೋಗ ಸ್ಪಷ್ಟಪಡಿಸಿದೆ.

ಸಮೀಕ್ಷೆಯಲ್ಲಿ ಭಾಗವಹಿಸುವುದು ಕಡ್ಡಾಯವಲ್ಲ ಎಂದು ಸ್ಪಷ್ಟಪಡಿಸಿ ಕರ್ನಾಟಕ ಉಚ್ಚ ನ್ಯಾಯಾಲಯ ಮಧ್ಯಂತರ ಆದೇಶದ ನೀಡಿದ ಬೆನ್ನಲ್ಲೇ ಹಿಂದುಳಿದ ವರ್ಗಗಳ ಆಯೋಗ ತಿಳಿಸಿದೆ.

ಇದನ್ನೂ ಓದಿ:-ಚಾ.ನಗರ | ವಾರದಲ್ಲಿ ಜೀತವಿಮುಕ್ತರ ಸ್ಥಿತಿಗತಿ ವರದಿ ನೀಡಿಲು ಜಿಲ್ಲಾಧಿಕಾರಿ ತಾಕೀತು

ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಈ ಆದೇಶದ ಅನುಸರಣೆಯ ಕುರಿತು ಪ್ರಮಾಣ ಪತ್ರವನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕಾಗಿದೆ. ಸಮೀಕ್ಷೆ ಕುರಿತು ಸಾರ್ವಜನಿಕರಲ್ಲಿ ವಿಶ್ವಾಸ ಮೂಡಿಸುವ ಸಲುವಾಗಿ ಹಾಗೂ ಉಚ್ಚ ನ್ಯಾಯಾಲಯದ ಮಧ್ಯಂತರ ಆದೇಶದ ಪಾಲನೆ ದೃಷ್ಟಿಯಿಂದ ಆಯೋಗದಿಂದ ಈ ಪ್ರಕಟಣೆ ಹೊರಬಿದ್ದಿದೆ.

ಪ್ರಕಟಣೆಯಲ್ಲಿ ಏನಿದೆ?
ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ರಾಜ್ಯದ ಕುಟುಂಬಗಳ ಹಾಗೂ ಜನರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಸೆ.೨೨ರಿಂದ ಪ್ರಾರಂಭಿಸಿದ್ದು, ಪ್ರಗತಿಯಲ್ಲಿದೆ. ಈ ಸಮೀಕ್ಷೆಯಲ್ಲಿ ರಾಜ್ಯದ ಸಂಪೂರ್ಣ ಜನಸಂಖ್ಯೆಯನ್ನು ಸಮೀಕ್ಷೆಗೆ ಒಳಪಡಿಸಲು ಉದ್ದೇಶಿಸಲಾಗಿದ್ದರೂ, ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ/ಕುಟುಂಬಗಳ ಸ್ವಯಂ ಇಚ್ಛೆಗೆ ಬಿಡಲಾಗಿದೆಯೆಂದೂ ಹಾಗೂ ಮಾಹಿತಿಯನ್ನು ನೀಡುವ ಬಗ್ಗೆ ಆಯೋಗ ಒತ್ತಾಯ ಮಾಡುತ್ತಿಲ್ಲವೆಂದು ಸ್ಪಷ್ಟಿಕರಿಸಲಾಗಿದೆಯೆಂದು ಈ ಮೂಲಕ ಸಾರ್ವಜನಿಕರ ಗಮನಕ್ಕೆ ತರಲಾಗಿದೆ ಎಂದು ಉಲ್ಲೇಖಿಸಲಾಗಿದೆ.

ಸಮೀಕ್ಷೆಯ ಸಮಯದಲ್ಲಿ ಜನರು, ಕುಟುಂಬಗಳು ಯಾವುದೇ ಮಾಹಿತಿಯನ್ನು ನೀಡಲು ಸಿಬ್ಬಂದಿ ಬಲವಂತಪಡಿಸುವಂತಿಲ್ಲ ಎಂದು ಸ್ಪಷ್ಟ ಸೂಚನೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಮಣ್ಣಿನ ಘಮ, ನಾಟಿ ಸಂಭ್ರಮ, ಗ್ರಾಮೀಣ ಕ್ರೀಡೆಗಳ ಉತ್ಸಾಹ

ಲಕ್ಷ್ಮೀಕಾಂತ್ ಕೊಮಾರಪ್ಪ ಮಣ್ಣಿನೊಂದಿಗೆ ಯುವಜನರ ನಂಟು ಬೆಸೆಯುವ ಉದ್ದೇಶ  ನಾಳೆ ಯಂಗ್ ಇಂಡಿಯನ್ ಫಾರ್ಮರ್ಸ್ ಅಸೋಸಿಯೇಷನ್ ವತಿಯಿಂದ ಗದ್ದೆ ನಾಟಿ…

3 mins ago

ಮಳೆ ಕೊರತೆ; ರೈತರ ಕೈ ಸೇರದ ಬೆಳೆಗಳು

ಎಂ.ನಾರಾಯಣ ತಿ.ನರಸೀಪುರ: ಹೂ ಕಚ್ಚದ ಕಡಲೆಕಾಯಿ, ಸೂರ್ಯಕಾಂತಿ, ಮುಸುಕಿನ ಜೋಳದ ಬೆಳೆಗಳು ತಿ.ನರಸೀಪುರ: ತಾಲ್ಲೂಕಿನಲ್ಲಿ ಸಮರ್ಪಕ ಮಳೆ ಬಾರದಿರುವುದರಿಂದ ರೈತರು…

8 mins ago

ದುಬಾರಿ ಬಾಡಿಗೆ: ಬಾಡಿಗೆದಾರರಿಲ್ಲದೆ ಖಾಲಿ ಬಿದ್ದ ಮಳಿಗೆಗಳು

ಭೇರ್ಯ ಮಹೇಶ್ ಭೇರ್ಯ: ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಳಿಗೆಗಳು ತೆರೆಯದೆ ಪ್ರಯಾಣಿಕರಿಗೆ ಸಮಸ್ಯೆ ಭೇರ್ಯ: ಭೇರ್ಯ ಗ್ರಾಮದ ಬಸ್ ನಿಲ್ದಾಣದಲ್ಲಿ…

13 mins ago

ನೇಪಾಳದಲ್ಲಿ ಭೀಕರ ಪ್ರವಾಹ ; ಭಾರತೀಯರ ನೆರವಿಗೆ ಸಹಾಯವಾಣಿ ಆರಂಭ

ಕಠ್ಮಂಡು : ನೇಪಾಳದ ರಸುವಾ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದ ಸಂತ್ರಸ್ತರಾಗಿರುವ ಭಾರತೀಯ ಪ್ರಜೆಗಳ ನೆರವಿಗಾಗಿ ಭಾರತವು ಸಹಾಯವಾಣಿ ಆರಂಭಿಸಿದೆ.…

10 hours ago

ಸಂಪುಟದಲ್ಲಿ ಚರ್ಚಿಸಿ ಬರ ಘೋಷಣೆ ; ಡಿಸಿಎಂ ಪರಮೇಶ್ವರ್‌

ಬೆಂಗಳೂರು : ರಾಜ್ಯದ ಬರ ಪರಿಸ್ಥಿತಿಯ ಸಮಗ್ರ ಅವಲೋಕನ ನಡೆಯುತ್ತಿದೆ. 102 ತಾಲ್ಲೂಕುಗಳ ಗ್ರೌಂಡ್ ಟ್ರೂಥಿಂಗ್ ವರದಿ ಬಂದಿದ್ದು, ಮುಂದಿನ…

11 hours ago