Resign and Fulfill the Aspirations of Kannadigas: Opposition Leader R. Ashoka
ಬೆಂಗಳೂರು : ಕಾಂಗ್ರೆಸ್ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ವಿವರವನ್ನು ಬಹಿರಂಗೊಳಿಸಬಾರದು. ಜನರ ಬಳಿ ಏನೇನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಂತಹ ಪ್ರಶ್ನೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಇದನ್ನು ಕಾಂಗ್ರೆಸ್ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಖಜಾನೆಯಲ್ಲಿ ಹಣವಿಲ್ಲದೆ, ರೇಷನ್ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಅದಕ್ಕಾಗಿ ಮಾನದಂಡ ಬೇಕಾಗುತ್ತದೆ. ಈ ಕಾರಣಕ್ಕಾಗಿ ಹಾಗೂ ಯೋಜನೆಗಳಿಗೆ ಕತ್ತರಿ ಹಾಕಲು ಜಾತಿ ಸಮೀಕ್ಷೆ ಮಾಡಲಾಗುತ್ತಿದೆ ಎಂದರು.
ಇದನ್ನೂ ಓದಿ:-ಕಾವೇರಿ ಆರತಿಗೆ ಅಮೆರಿಕ ಕನ್ನಡತಿ ಮೆಚ್ಚುಗೆ : ಕಾವೇರಿ ಆರತಿಗಾಗಿ 5 ಲಕ್ಷ ರೂ. ಸಮರ್ಪಣೆ
ಮುಂದಿನ ಬಜೆಟ್ ರಚನೆ ಸಿಎಂ ಸಿದ್ದರಾಮಯ್ಯನವರಿಗೆ ಕಗ್ಗಂಟಾಗಿದೆ. ಅದಕ್ಕಾಗಿ ಹಣ ಉಳಿಸಬೇಕಿದೆ. ಇದು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಅಲ್ಲ, ಇದು ಸಿದ್ದರಾಮಯ್ಯನವರ ಜಾತಿ ಸಮೀಕ್ಷೆ. ಜನರಿಗೆ ಪಂಗನಾಮ ಹಾಕುವ ಸಮೀಕ್ಷೆ. ಯಾರೂ ವೈಯಕ್ತಿಕ ದಾಖಲೆಗಳನ್ನು ನೀಡಬಾರದು. ಯಾವ್ಯಾವ ಪ್ರಶ್ನೆಗೆ ಉತ್ತರ ಕೊಡಬಹುದೋ ಅಷ್ಟನ್ನು ಮಾತ್ರ ನೀಡಿದರೆ ಸಾಕು. ಹೈಕೋರ್ಟ್ ಕೂಡ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಬೇಕಿಲ್ಲ ಎಂದಿದೆ ಎಂದರು.
ಬೆಳಗಾವಿ, ರಾಯಚೂರು, ವಿಜಯಪುರ ಮೊದಲಾದ ಭಾಗಗಳಲ್ಲಿ ಪ್ರವಾಸ ಮಾಡಿ ಮಳೆ ಹಾನಿ ಪರಿಶೀಲನೆ ಮಾಡುತ್ತೇನೆ. ಹಿಂದೆ ಬಿಜೆಪಿ ಇದ್ದಾಗ ಜನರಿಗೆ ಉತ್ತಮ ಪರಿಹಾರ ನೀಡಲಾಗಿತ್ತು. ಈಗ ಕಾಂಗ್ರೆಸ್ ಏನೂ ನೀಡುತ್ತಿಲ್ಲ. ರೈತರಿಗೆ ಬೆಳೆ ಪರಿಹಾರ ನೀಡಿಲ್ಲ ಎಂದರು.
ಮೈಸೂರಿನ ಕ್ರಾಫರ್ಡ್ ಹಾಲ್ ಎದುರಿನ ಓವೆಲ್ ಮೈದಾನದಲ್ಲಿ ಕ್ರೀಡಾಪಟುಗಳು ಪ್ರತಿನಿತ್ಯ ಕ್ರೀಡಾಭ್ಯಾಸ ನಡೆಸುತ್ತಾರೆ. ಸಾರ್ವಜನಿಕರೂ ಬೆಳಿಗ್ಗೆ ಹಾಗೂ ಸಂಜೆಯ ವೇಳೆ…
ಒಳಮೀಸಲಾತಿ ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ರಾಜ್ಯ ಸರ್ಕಾರ ಒಳಮೀಸಲಾತಿಯಲ್ಲಿ ಎಡಗೈ ಮತ್ತು ಬಲಗೈ ಪಂಗಡಗಳಿಗೆ ಸಮಾನವಾಗಿ ಸೌಲಭ್ಯ ಕಲ್ಪಿಸಬೇಕು.…
ಮೈಸೂರಿನ ವಿವಿಧ ವೃತ್ತಗಳಲ್ಲಿ ಹೊಸದಾಗಿ ಸಿಗ್ನಲ್ ಲೈಟ್ಗಳನ್ನು ಅಳವಡಿಸಿದ್ದಾರೆ. ಆದರೆ ಚಾಮರಾಜಪುರಂನ ನ್ಯಾಯಾಲಯದ ಬಳಿ ವಾಹನ ಸಂಚಾರ ಹೆಚ್ಚಾಗಿದ್ದು, ನ್ಯಾಯಾಲಯದ…
ಚಾಮರಾಜನಗರ ಪಟ್ಟಣದಲ್ಲಿರುವ ನಂದಿ ಭವನದಲ್ಲಿ ಮದುವೆ ಮತ್ತು ಇತರ ಸಮಾರಂಭಗಳು ನಡೆಯುತ್ತವೆ. ಕಾರ್ಯಕ್ರಮಗಳು ಮುಗಿದ ಮೇಲೆ ಉಳಿದ ಆಹಾರ ಪದಾರ್ಥಗಳನ್ನು…
ನಕಲಿ ವಿಡಿಯೋಗಳ ಹಾವಳಿ, ಕೃತಕ ಬುದ್ಧಿಮತ್ತೆ ಬಳಸಿ ಡೀಪ್ಫೇಕ್, ಅಭಿವ್ಯಕ್ತಿ ಸ್ವಾತಂತ್ರ್ಯದ ಹೆಸರಲ್ಲಿ ಏನು ಬೇಕಾದರೂ ಮಾಡಬಹುದು ಎನ್ನುವುದನ್ನು ತಡೆಯುವ…
ಮಹಾದೇಶ್ ಎಂ.ಗೌಡ ನಿರಂತರವಾಗಿ ಚಿರತೆಗಳು ಕಾಣಿಸಿಕೊಳ್ಳುತ್ತಿರುವುದರಿಂದ ಸಾರ್ವಜನಿಕರಲ್ಲಿ ಭೀತಿ ಹನೂರು: ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾ ಸ್ಥಳ ಮಲೆಮಹದೇಶ್ವರ ಬೆಟ್ಟಕ್ಕೆ…