ರಾಜ್ಯ

ಸಾಮಾಜಿಕ,ಶೈಕ್ಷಣಿಕ ಸಮೀಕ್ಷೆ : ಜನರು ವೈಯಕ್ತಿಕ ಮಾಹಿತಿ ನೀಡಬೇಕೆಂದಿಲ್ಲ ; ಆರ್.ಅಶೋಕ್‌

ಬೆಂಗಳೂರು : ಕಾಂಗ್ರೆಸ್‌ ಸರ್ಕಾರ ನಡೆಸುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ವೈಯಕ್ತಿಕ ಮಾಹಿತಿಗಳನ್ನು ನೀಡಲೇಬೇಕು ಎಂದೇನಿಲ್ಲ. ಸೂಕ್ತ ಎನಿಸಿದ ಪ್ರಶ್ನೆಗಳಿಗೆ ಮಾತ್ರ ಜನರು ಉತ್ತರ ನೀಡಬೇಕು. ಸಮೀಕ್ಷೆ ವಿಚಾರದಲ್ಲಿ ಜನರು ಎಚ್ಚರವಾಗಿರಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಮಾಡುತ್ತಿರುವ ಜಾತಿ ಸಮೀಕ್ಷೆಯಲ್ಲಿ ಜನರು ಎಲ್ಲ ವಿವರವನ್ನು ಬಹಿರಂಗೊಳಿಸಬಾರದು. ಜನರ ಬಳಿ ಏನೇನೋ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇಂತಹ ಪ್ರಶ್ನೆಗಳಿಗೆ ಉತ್ತರ ನೀಡುವುದು ಜನರಿಗೆ ಬಿಟ್ಟ ವಿಚಾರ. ಇದನ್ನು ಕಾಂಗ್ರೆಸ್‌ ರಾಜಕೀಯಕ್ಕೆ ಬಳಸಿಕೊಳ್ಳುತ್ತಿದೆ. ಖಜಾನೆಯಲ್ಲಿ ಹಣವಿಲ್ಲದೆ, ರೇಷನ್‌ ಕಾರ್ಡ್ ರದ್ದು ಮಾಡುತ್ತಿದ್ದಾರೆ. ಅದಕ್ಕಾಗಿ ಮಾನದಂಡ ಬೇಕಾಗುತ್ತದೆ. ಈ ಕಾರಣಕ್ಕಾಗಿ ಹಾಗೂ ಯೋಜನೆಗಳಿಗೆ ಕತ್ತರಿ ಹಾಕಲು ಜಾತಿ ಸಮೀಕ್ಷೆ ಮಾಡಲಾಗುತ್ತಿದೆ ಎಂದರು.

ಇದನ್ನೂ ಓದಿ:-ಕಾವೇರಿ ಆರತಿಗೆ ಅಮೆರಿಕ ಕನ್ನಡತಿ ಮೆಚ್ಚುಗೆ : ಕಾವೇರಿ ಆರತಿಗಾಗಿ 5 ಲಕ್ಷ ರೂ. ಸಮರ್ಪಣೆ

ಮುಂದಿನ ಬಜೆಟ್‌ ರಚನೆ ಸಿಎಂ ಸಿದ್ದರಾಮಯ್ಯನವರಿಗೆ ಕಗ್ಗಂಟಾಗಿದೆ. ಅದಕ್ಕಾಗಿ ಹಣ ಉಳಿಸಬೇಕಿದೆ. ಇದು ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆ ಅಲ್ಲ, ಇದು ಸಿದ್ದರಾಮಯ್ಯನವರ ಜಾತಿ ಸಮೀಕ್ಷೆ. ಜನರಿಗೆ ಪಂಗನಾಮ ಹಾಕುವ ಸಮೀಕ್ಷೆ. ಯಾರೂ ವೈಯಕ್ತಿಕ ದಾಖಲೆಗಳನ್ನು ನೀಡಬಾರದು. ಯಾವ್ಯಾವ ಪ್ರಶ್ನೆಗೆ ಉತ್ತರ ಕೊಡಬಹುದೋ ಅಷ್ಟನ್ನು ಮಾತ್ರ ನೀಡಿದರೆ ಸಾಕು. ಹೈಕೋರ್ಟ್‌ ಕೂಡ ಎಲ್ಲ ಪ್ರಶ್ನೆಗಳಿಗೆ ಉತ್ತರ ನೀಡಬೇಕಿಲ್ಲ ಎಂದಿದೆ ಎಂದರು.

ಬೆಳಗಾವಿ, ರಾಯಚೂರು, ವಿಜಯಪುರ ಮೊದಲಾದ ಭಾಗಗಳಲ್ಲಿ ಪ್ರವಾಸ ಮಾಡಿ ಮಳೆ ಹಾನಿ ಪರಿಶೀಲನೆ ಮಾಡುತ್ತೇನೆ. ಹಿಂದೆ ಬಿಜೆಪಿ ಇದ್ದಾಗ ಜನರಿಗೆ ಉತ್ತಮ ಪರಿಹಾರ ನೀಡಲಾಗಿತ್ತು. ಈಗ ಕಾಂಗ್ರೆಸ್‌ ಏನೂ ನೀಡುತ್ತಿಲ್ಲ. ರೈತರಿಗೆ ಬೆಳೆ ಪರಿಹಾರ ನೀಡಿಲ್ಲ ಎಂದರು.

ಆಂದೋಲನ ಡೆಸ್ಕ್

Recent Posts

ಬೆಳೆಗೆ ಸಿಗದ ಬೆಲೆ: ಯುವ ರೈತ ಆತ್ಮಹತ್ಯೆ

ಕೆ.ಆರ್.ನಗರ: ತಂಬಾಕು ಬೆಳೆಗೆ ಸರಿಯಾಗಿ ಬೆಲೆ ಸಿಗದೇ ನಷ್ಟವಾದ ಹಿನ್ನೆಲೆಯಲ್ಲಿ ಮಾಡಿದ್ದ ಸಾಲ ತೀರಿಸಲಾಗದೆ ಮನನೊಂದು ರೈತರೊಬ್ಬರು ತಮ್ಮ ಜಮೀನಿನಲ್ಲಿ…

45 mins ago

ಮುಂದಿನ ಒಂದು ವಾರಗಳ ಕಾಲ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಗಾಳಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಹಾಸನ, ಶಿವಮೊಗ್ಗ,…

2 hours ago

ಸಾಲಬಾಧೆ; ರೈತ ಆತ್ಮಹತ್ಯೆ

ರಾವಂದೂರು: ರೈತರೊಬ್ಬರು ತಾವು ಬೆಳೆದ ತಂಬಾಕಿಗೆ ಸೂಕ್ತ ಬೆಲೆ ಸಿಗದೆ ಮನನೊಂದು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.…

3 hours ago

ಹರಿಹರದಲ್ಲಿ ಶಂಕಿತ ಉಗ್ರನ ಬಂಧನ: ಪೊಲೀಸರಿಂದ ಸ್ಫೋಟಕ ಮಾಹಿತಿ ಬಹಿರಂಗ

ಬೆಂಗಳೂರು: ದಾವಣಗೆರೆ ಜಿಲ್ಲೆಯ ಹರಿಹರದಲ್ಲಿ ಬಂಧನಕ್ಕೊಳಗಾಗಿರುವ ಶಂಕಿತ ಉಗ್ರ ಸುಹೈಲ್ ಉತ್ತರಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರವನ್ನು ಸ್ಫೋಟಿಸಲು ಸಂಚು ನಡೆಸಿದ್ದ…

3 hours ago

ಮುಂಗಾರು ಮಳೆ ಹಿನ್ನಡೆ ; ರಾಜ್ಯದ ಹಲವೆಡೆ ಕೃಷಿ ಕುಂಠಿತ

ಬೆಂಗಳೂರು : ಮುಂಗಾರು ಮಳೆ ಹಿನ್ನಡೆಯಿಂದ ರಾಜ್ಯದ ಹಲವು ಕಡೆ ಕೃಷಿ ಚಟುವಟಿಕೆಗಳು ಕುಂಟುತ್ತಾ ಸಾಗುತ್ತಿದ್ದು, ದಾವಣಗೆರೆ, ಕಲಬುರಗಿ, ಬೆಳಗಾವಿ, ಹಾವೇರಿ,…

4 hours ago

ಮುಂಬೈನಲ್ಲಿ ಭಾರೀ ಮಳೆ: ಜನಜೀವನ ಅಸ್ತವ್ಯಸ್ತ

ಮುಂಬೈ: ಮುಂಬೈನಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಭಾರೀ ಮಳೆಯಿಂದ ರಸ್ತೆಗಳಲ್ಲಿ ನೀರು ನಿಂತಿದ್ದು, ವಾಹನ ಸಂಚಾರಕ್ಕೆ ತೊಂದರೆಯಾಗಿದೆ.…

4 hours ago