ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ ಜಾಲತಾಣ (ಸೋಶಿಯಲ್ ಮೀಡಿಯಾ) ಬಳಸುವುದನ್ನು ನಿಷೇಧ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಒಂದು ಕಡೆ ಕೇಂದ್ರ ಸರ್ಕಾರವು 16 ವರ್ಷಗಳ ವಯೋಮಿತಿಯ ಮಕ್ಕಳು ಸಾಮಾಜಿಕ ಜಾಲತಾಣ ಬಳಕೆ ಮಾಡುವುದನ್ನು ನಿಷೇಧ ಮಾಡಲು ಸಂಸತ್ತಿನಲ್ಲಿ ಕಾಯ್ದೆ ಜಾರಿ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ. ಮತ್ತೊಂದು ಕಡೆ ಆಂಧ್ರಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಕೆ ಮಾಡುವುದನ್ನು ನಿಷೇಧಿಸಲು ಹೊಸ ಐಟಿ ಕಾಯ್ದೆ ಜಾರಿಗೊಳಿಸುವ ಬಗ್ಗೆ ಚಿಂತನ ಮಂಥನ ನಡೆಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಎನ್ಡಿಎ ಪ್ರಮುಖ ಮಿತ್ರಪಕ್ಷ ಟಿಡಿಪಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾರಾದರೂ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸುವುದು ಅಥವಾ ನಿರ್ವಹಿಸುವುದನ್ನು ನಿಷೇಧಿಸುವ ರಾಷ್ಟ್ರವ್ಯಾಪಿ ಮಸೂದೆಯನ್ನು ಪ್ರಸ್ತಾಪಿಸಿದೆ.
ಪ್ರಸ್ತಾವಿತ ಶಾಸನವು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವಯಸ್ಸಿನ ಪರಿಶೀಲನೆಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸುತ್ತದೆ, ರಾಜ್ಯಗಳು ಆಸ್ಟ್ರೇಲಿಯಾದ ಇತ್ತೀಚಿನ ಇದೇ ರೀತಿಯ ಕ್ರಮಗಳನ್ನು ಉದಾಹರಣೆಯಾಗಿ ಉಲ್ಲೇಖಿಸುತ್ತವೆ.
ಈ ಬೆಳವಣಿಗೆಗಳ ನಡುವೆ ಕರ್ನಾಟಕದಲ್ಲಿ ಇನ್ನು ಮುಂದೆ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲ ಬಳಕೆಗೆ ನಿರ್ಬಂಧ ವಿಧಿಸುವ ಕಾಯ್ದೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಅವರು ಈಗಾಗಲೇ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದರೆ ಹೊಸ ಕಾಯ್ದೆ ಶೀಘ್ರದಲ್ಲಿ ಜಾರಿಗೆ ಬರಲಿದೆ.
ಸಾಮಾಜಿಕ ಜಾಲತಾಣ ಬಳಕೆ ಮಾಡುವುದು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ಕಡೆ ವ್ಯಾಸಂಗದ ಕಡೆ ಗಮನ ನೀಡದಿರುವುದು, ಏಕಾಗ್ರತೆ ಇಲ್ಲದಿರುವುದು ಫಲಿತಾಂಶದ ಮೇಲೆ ಎಲ್ಲಕ್ಕಿಂತ ಹೆಚ್ಚಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾನಸಿಕ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…