ಬೆಂಗಳೂರು : ಆರೋಗ್ಯದ ಮೇಲೆ ವ್ಯಾಪಕ ದುಷ್ಪರಿಣಾಮ ಬೀರುತ್ತಿರುವ ಹಿನ್ನೆಲೆಯಲ್ಲಿ ಇನ್ನು ಮುಂದೆ 16 ವರ್ಷದ ಒಳಗಿನ ಮಕ್ಕಳು, ಸಾಮಾಜಿಕ ಜಾಲತಾಣ (ಸೋಶಿಯಲ್ ಮೀಡಿಯಾ) ಬಳಸುವುದನ್ನು ನಿಷೇಧ ಮಾಡಲು ರಾಜ್ಯ ಸರ್ಕಾರ ಗಂಭೀರ ಚಿಂತನೆ ನಡೆಸಿದೆ.
ಒಂದು ಕಡೆ ಕೇಂದ್ರ ಸರ್ಕಾರವು 16 ವರ್ಷಗಳ ವಯೋಮಿತಿಯ ಮಕ್ಕಳು ಸಾಮಾಜಿಕ ಜಾಲತಾಣ ಬಳಕೆ ಮಾಡುವುದನ್ನು ನಿಷೇಧ ಮಾಡಲು ಸಂಸತ್ತಿನಲ್ಲಿ ಕಾಯ್ದೆ ಜಾರಿ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದೆ. ಮತ್ತೊಂದು ಕಡೆ ಆಂಧ್ರಪ್ರದೇಶ, ಗೋವಾ ಮತ್ತು ಬಿಹಾರದಲ್ಲಿ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲತಾಣ ಬಳಕೆ ಮಾಡುವುದನ್ನು ನಿಷೇಧಿಸಲು ಹೊಸ ಐಟಿ ಕಾಯ್ದೆ ಜಾರಿಗೊಳಿಸುವ ಬಗ್ಗೆ ಚಿಂತನ ಮಂಥನ ನಡೆಸಲಾಗಿದೆ.
ಪ್ರಧಾನಿ ನರೇಂದ್ರ ಮೋದಿಯವರ ಎನ್ಡಿಎ ಪ್ರಮುಖ ಮಿತ್ರಪಕ್ಷ ಟಿಡಿಪಿ 16 ವರ್ಷಕ್ಕಿಂತ ಕಡಿಮೆ ವಯಸ್ಸಿನ ಯಾರಾದರೂ ಸಾಮಾಜಿಕ ಮಾಧ್ಯಮ ಖಾತೆಯನ್ನು ರಚಿಸುವುದು ಅಥವಾ ನಿರ್ವಹಿಸುವುದನ್ನು ನಿಷೇಧಿಸುವ ರಾಷ್ಟ್ರವ್ಯಾಪಿ ಮಸೂದೆಯನ್ನು ಪ್ರಸ್ತಾಪಿಸಿದೆ.
ಪ್ರಸ್ತಾವಿತ ಶಾಸನವು ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ವಯಸ್ಸಿನ ಪರಿಶೀಲನೆಯ ಸಂಪೂರ್ಣ ಜವಾಬ್ದಾರಿಯನ್ನು ವಹಿಸುತ್ತದೆ, ರಾಜ್ಯಗಳು ಆಸ್ಟ್ರೇಲಿಯಾದ ಇತ್ತೀಚಿನ ಇದೇ ರೀತಿಯ ಕ್ರಮಗಳನ್ನು ಉದಾಹರಣೆಯಾಗಿ ಉಲ್ಲೇಖಿಸುತ್ತವೆ.
ಈ ಬೆಳವಣಿಗೆಗಳ ನಡುವೆ ಕರ್ನಾಟಕದಲ್ಲಿ ಇನ್ನು ಮುಂದೆ 16 ವರ್ಷದೊಳಗಿನ ಮಕ್ಕಳು ಸಾಮಾಜಿಕ ಜಾಲ ಬಳಕೆಗೆ ನಿರ್ಬಂಧ ವಿಧಿಸುವ ಕಾಯ್ದೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ. ಈ ಸಂಬಂಧ ಐಟಿಬಿಟಿ ಸಚಿವ ಪ್ರಿಯಾಂಕ ಖರ್ಗೆ ಅವರು ಈಗಾಗಲೇ ಅಧಿಕಾರಿಗಳ ಜೊತೆ ಮಾತುಕತೆ ನಡೆಸಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುಮೋದನೆ ನೀಡಿದರೆ ಹೊಸ ಕಾಯ್ದೆ ಶೀಘ್ರದಲ್ಲಿ ಜಾರಿಗೆ ಬರಲಿದೆ.
ಸಾಮಾಜಿಕ ಜಾಲತಾಣ ಬಳಕೆ ಮಾಡುವುದು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಒಂದು ಕಡೆ ವ್ಯಾಸಂಗದ ಕಡೆ ಗಮನ ನೀಡದಿರುವುದು, ಏಕಾಗ್ರತೆ ಇಲ್ಲದಿರುವುದು ಫಲಿತಾಂಶದ ಮೇಲೆ ಎಲ್ಲಕ್ಕಿಂತ ಹೆಚ್ಚಾಗಿ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ ಎಂದು ಮಾನಸಿಕ ತಜ್ಞರು ಆತಂಕ ವ್ಯಕ್ತಪಡಿಸಿದ್ದಾರೆ ಎಂದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…