ತುಮಕೂರು: ಕೃಷಿ ಹೊಂಡದಲ್ಲಿ ಸೋಡಿಯಂ ಸ್ಫೋಟ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಡ್ರೋನ್ ಪ್ರತಾಪ್ಗೆ ಹತ್ತು ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಮಧುಗಿರಿ ಜೆಎಂಎಫ್ಸಿ ಕೋರ್ಟ್ ಆದೇಶ ಹೊರಡಿಸಿದೆ.
ಸೋಡಿಯಂ ಮೆಟಲ್ ಸ್ಫೋಟ ಪ್ರಕರಣದಲ್ಲಿ ಬಂಧನದಲ್ಲಿದ್ದ ಡ್ರೋನ್ ಪ್ರತಾಪ್ ಅವರ ಮೂರು ದಿನದ ಪೊಲೀಸ್ ಕಸ್ಟಡಿ ಅವಧಿ ಮುಗಿದಿತ್ತು. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಅವರನ್ನು ಪೊಲೀಸರು ಮಧುಗಿರಿ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿದ್ದರು.
ಬಳಿಕ ವಾದ ಆಲಿಸಿದ ನ್ಯಾಯಾಧೀಶರು, ಡ್ರೋನ್ ಪ್ರತಾಪ್ಗೆ 10 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೊಬ್ಬ ಆರೋಪಿಯಾಗಿರುವ ಫಾರಂಹೌಸ್ ಮಾಲೀಕ ಜಿತೇಂದ್ರ ಜೈನ್ ತಲೆ ಮರೆಸಿಕೊಂಡಿದ್ದಾನೆ. ಅವನಿಗಾಗಿ ಹುಡುಕಾಟ ಮುಂದುವರಿದಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಡ್ರೋನ್ ಪ್ರತಾಪ್ಗೆ ರಿಲೀಫ್ ಇಲ್ಲದಂತಾಗಿದ್ದು, ಈ ಬಾರಿ ಜೈಲು ಸಂಕಷ್ಟ ಬಹುತೇಕ ಫಿಕ್ಸ್ ಎಂದು ಹೇಳಲಾಗಿದೆ.
ಬೆಂಗಳೂರು: ರಾಜೀನಾಮೆಗೆ ಸಂಬಂಧಿಸಿದ ಯಾವುದೇ ಚರ್ಚೆ ನಡೆದಿಲ್ಲ. ನನ್ನ ರಾಜೀನಾಮೆ ಬಗ್ಗೆ ಕೇಳಿಬರುತ್ತಿರುವ ವರದಿಗಳು ಸಂಪೂರ್ಣವಾಗಿ ಸತ್ಯಕ್ಕೆ ದೂರವಾಗಿವೆ ಎಂದು ಸಚಿವ…
ಹುಣಸೂರು: ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ 2026ರ ದಸರಾ ಗಜಪಯಣಕ್ಕೆ ಇಂದು ಅದ್ಧೂರಿ ಚಾಲನೆ ದೊರೆತಿದೆ. ಮೈಸೂರು ಜಿಲ್ಲಾ…
ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ನಿತ್ಯ ಒಂಬತ್ತು ಸಾವಿರ ಕ್ಯುಸೆಕ್ಸ್ ಕಾವೇರಿ ನದಿ ನೀರು ಹರಿಸಬೇಕಾಗಿರುವುದು ಅಘಾತಕಾರಿ ಸಂಗತಿಯಾಗಿದೆ.…
ಮೈಸೂರು ನಗರವು ‘ಸ್ವಚ್ಛ ನಗರಿ’, ‘ಸಾಂಸ್ಕೃತಿಕ ನಗರಿ’ ಮತ್ತು ‘ಪಾರಂಪರಿಕನಗರಿ’ ಎಂದೇ ಖ್ಯಾತವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಹೆಮ್ಮೆಯ…
ಎಐಸಿಸಿ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಹಿರಿಯ ಮುಖಂಡರಾದ, ಮಲ್ಲಿಕಾರ್ಜುನ ಖರ್ಗೆ ಅವರು ಉತ್ತರಖಂಡದ ಹಲ್ದ್ವಾನಿಯದಲ್ಲಿ ಭಾಷಣ ಮಾಡಿದ ಸ್ಥಳವನ್ನು ಶುದ್ಧೀಕರಣ…
ನವೀನ್ ಡಿಸೋಜ ಕೊಡಗಿನಲ್ಲಿ ಇಲ್ಲಿಯವರೆಗೆ ಶೇ.೩೭ರಷ್ಟು ಮಳೆ ಕೊರತೆ; ಭರದಿಂದ ಸಾಗಿದ ಬಿತ್ತನೆ ಕಾರ್ಯ ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ವಾಡಿಕೆಗಿಂತ…