ರಾಜ್ಯ

ಒಂದು ತಿಂಗಳೊಳಗೆ ಜನರ ಅಹವಾಲುಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ನಗರದ ವಿಧಾನ ಸೌಧ ಮುಂಬಾಗ ಗುರುವಾರ ನಡೆದ ಎರಡನೇ ಜನಸ್ಪಂದನ ಕಾರ್ಯಕ್ರಮದ ಬಳಿಕೆ ಸಿಎಂ ಸಿದ್ದರಾಮಯ್ಯ ನಡೆಸಿದ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿ, ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆಗಳು ನೀಡಿದರು.

ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.

ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಅರ್ಜಿಗಳನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. ಡಿಸಿ (ಜಿಲ್ಲಾಧಿಕಾರಿ), ಸಿಇಒ (ಕಾರ್ಯ ನಿರ್ವಾಹಕಾಧಿಕಾರಿ) ಗಳ ಮೇಲೆ ಈ ಜವಾಬ್ದಾರಿ ಹೆಚ್ಚಿದೆ ಎಂದು ಸಿಎಂ ಸೂಚಿಸಿದರು.

ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಒಂದು ತಿಂಗಳೊಳಗೆ ಹೆಚ್ಚು ಅರ್ಜಿ, ಅಹವಾಲು ಪರಿಹರಿಸಿ ಎಂದು ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

andolanait

Recent Posts

ಅಧಿಕಾರ ಜಟಾಪಟಿ ನಡುವೆ ಹೈಕಮಾಂಡ್‌ಗೆ ಪತ್ರ ಬರೆದ ಕಾಂಗ್ರೆಸ್‌ನ ಹೊಸ ಶಾಸಕರು : ಕಾರಣವೇನು?

ಬೆಂಗಳೂರು : ಅಧಿಕಾರ ಹಂಚಿಕೆ ಕುರಿತು ನಡೆಯುತ್ತಿರುವ ಜಟಾಪಟಿ ಬೆನ್ನಲ್ಲೇ, ಮೊದಲ ಬಾರಿಗೆ ಗೆದ್ದಿರುವ ಶಾಸಕರು ಸಚಿವ ಸಂಪುಟ ವಿಸ್ತರಣೆ…

13 mins ago

ಕುರ್ಚಿ ಕಾದಾಟದಿಂದ ಅಭಿವೃದ್ಧಿ ಕುಂಠಿತ : ಯದುವೀರ್ ಆರೋಪ

ಮೈಸೂರು : ಕಾಂಗ್ರೆಸ್ ಪಕ್ಷದೊಳಗಿನ ಮುಖ್ಯಮಂತ್ರಿ ಕುರ್ಚಿ ಕಾದಾಟದಿಂದ ರಾಜ್ಯದ ಅಭಿವೃದ್ಧಿ ಕುಂಠಿತವಾಗಿದೆ ಎಂದು ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ…

23 mins ago

ಎಐ ಸಮ್ಮಿಟ್‌ನಲ್ಲಿ ಯುವ ಕಾಂಗ್ರೆಸ್ ಅರೆಬೆತ್ತಲೆ ಪ್ರತಿಭಟನೆ : ಮಾರ್ಗರೇಟ್ ಆಳ್ವಾ ಖಂಡನೆ

ಬೆಂಗಳೂರು : ‘ಇಂಡಿಯಾ ಎಐ ಸಮ್ಮಿಟ್’ ಸಂದರ್ಭ ಯುವ ಕಾಂಗ್ರೆಸ್ ನಾಯಕರು ಶರ್ಟ್ ಬಿಚ್ಚಿ ಪ್ರತಿಭಟನೆ ನಡೆಸಿದ್ದಕ್ಕೆ ವಿಪಕ್ಷಗಳ ನಾಯಕರಿಂದಲೇ…

2 hours ago

ದ್ವಿತೀಯ ಪಿಯುಸಿ ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಿ : ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಮಂಡ್ಯ: ಫೆ.28 ರಿಂದ ಮಾ.17ರ ವರೆಗೆ ನಡೆಯಲಿರುವ ದ್ವಿತೀಯ ಪಿಯುಸಿ ಪರೀಕ್ಷೆ ಬೆಳ್ಳಿಗೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ…

2 hours ago

ಮೈಸೂರು | ಸ್ವಚ್ಛತಾ ರಾಯಾಭಾರಿಗಳಾಗಿ ಆರು ಗಣ್ಯರ ನೇಮಕ

ಮೈಸೂರು : ಐತಿಹಾಸಿಕ ಪರಂಪರೆ, ಸಾಂಸ್ಕ ತಿಕ ವೈಭವದಿಂದ ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡಿರುವ ಮೈಸೂರು ನಗರದ ಸ್ವಚ್ಛತೆಯನ್ನು ಇನ್ನಷ್ಟು ಉತ್ತಮಪಡಿಸುವ…

2 hours ago

ನಟ ದರ್ಶನ್‌ಗೆ ಬಿಗ್‌ ರಿಲೀಫ್‌: ಗನ್‌ ಲೈಸೆನ್ಸ್‌ ಅಮಾನತು ಆದೇಶಕ್ಕೆ ಹೈಕೋರ್ಟ್‌ ತಡೆಯಾಜ್ಞೆ

ಬೆಂಗಳೂರು: ಸ್ಯಾಂಡಲ್‌ವುಡ್‌ ನಟ ದರ್ಶನ್‌ ಅವರಿಗೆ ಕರ್ನಾಟಕ ಹೈಕೋರ್ಟ್‌ನಲ್ಲಿ ದೊಡ್ಡ ಮಟ್ಟದ ಕಾನೂನು ಜಯ ಸಿಕ್ಕಿದೆ. ನಟ ದರ್ಶನ್‌ ಅವರ…

4 hours ago