ರಾಜ್ಯ

ಒಂದು ತಿಂಗಳೊಳಗೆ ಜನರ ಅಹವಾಲುಗಳನ್ನು ಬಗೆಹರಿಸಿ: ಸಿಎಂ ಸಿದ್ದರಾಮಯ್ಯ!

ಬೆಂಗಳೂರು: ಒಂದು ತಿಂಗಳೊಳಗೆ ಜನ ಸ್ಪಂದನೆ ಅರ್ಜಿ/ಅಹವಾಲುಗಳನ್ನು ಬಗೆಹರಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಖಡಕ್‌ ಸೂಚನೆ ನೀಡಿದ್ದಾರೆ.

ನಗರದ ವಿಧಾನ ಸೌಧ ಮುಂಬಾಗ ಗುರುವಾರ ನಡೆದ ಎರಡನೇ ಜನಸ್ಪಂದನ ಕಾರ್ಯಕ್ರಮದ ಬಳಿಕೆ ಸಿಎಂ ಸಿದ್ದರಾಮಯ್ಯ ನಡೆಸಿದ ಮಾಧ್ಯಮ ಗೋಷ್ಠಿಯಲ್ಲಿ ಅವರು ಮಾತನಾಡಿ, ಜನರ ಸಮಸ್ಯೆಗಳನ್ನು ಬಗೆಹರಿಸುವಂತೆ ಅಧಿಕಾರಿಗಳಿಗೆ ಖಡಕ್ ಸೂಚನೆಗಳು ನೀಡಿದರು.

ಇಂದಿನ ಜನ ಸ್ಪಂದನೆಯಲ್ಲಿ 11 ಸಾವಿರ ಅರ್ಜಿಗಳು ಸ್ವೀಕೃತವಾಗಿವೆ. 20 ಸಾವಿರ ಮಂದಿ ಭಾಗಿ ಆಗಿದ್ದಾರೆ. ಆಯಾ ಜಿಲ್ಲೆಗೆ ಸಂಬಂಧಪಟ್ಟ ಅರ್ಜಿಗಳನ್ನು ಆಯಾ ಜಿಲ್ಲಾಧಿಕಾರಿಗಳು ಸಮಯ ಮಿತಿಯೊಳಗೆ ಬಗೆ ಹರಿಸುತ್ತಾರೆ. ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅವರ ವ್ಯಾಪ್ತಿಯ ಅರ್ಜಿಗಳನ್ನು ಆದಷ್ಟು ಬೇಗ ಪರಿಹರಿಸಲು ಸೂಚನೆ ನೀಡಿದ್ದೇನೆ ಎಂದು ಸಿಎಂ ತಿಳಿಸಿದರು.

ಮೊದಲ ಜನ ಸ್ಪಂದನೆಯಲ್ಲಿ ಬಂದ ಅರ್ಜಿಗಳಲ್ಲಿ 98% ಪರಿಹಾರ ದೊರಕಿವೆ. ಈ ಬಾರಿಯೂ ಅಷ್ಟೇ ತ್ವರಿತವಾಗಿ ಪರಿಹಾರ ಒದಗಿಸಲು ನಾನು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಎಲ್ಲಾ ಅರ್ಜಿಗಳನ್ನೂ ಅಧಿಕಾರಿಗಳು ಪರಿಶೀಲನೆ ನಡೆಸಲಿದ್ದಾರೆ. ಅಧಿಕಾರಿಗಳು ಕೆಳ ಹಂತದಲ್ಲೇ ಸಮಸ್ಯೆ ಬಗೆಹರಿಸಿದರೆ ಬೆಂಗಳೂರಿಗೆ ಜನ ಬಂದು ಅರ್ಜಿ ಕೊಡುವ ಸಂದರ್ಭ ಉದ್ಭವಿಸುವುದಿಲ್ಲ. ಡಿಸಿ (ಜಿಲ್ಲಾಧಿಕಾರಿ), ಸಿಇಒ (ಕಾರ್ಯ ನಿರ್ವಾಹಕಾಧಿಕಾರಿ) ಗಳ ಮೇಲೆ ಈ ಜವಾಬ್ದಾರಿ ಹೆಚ್ಚಿದೆ ಎಂದು ಸಿಎಂ ಸೂಚಿಸಿದರು.

ಆಡಳಿತ ಜಡತ್ವದಿಂದ ಕೂಡಿರಬಾರದು. ಈ ಬಗ್ಗೆ ಅಧಿಕಾರಿಗಳಿಗೆ ಎಚ್ಚರಿಕೆ ಕೊಡ್ತೇನೆ. ನಿಮ್ಮ ಹಂತದಲ್ಲೇ ಸಮಸ್ಯೆ ಬಗೆಹರಿಸಿ ಎನ್ನುವ ಎಚ್ಚರಿಕೆ ಕೊಡುತ್ತೇನೆ. ಜನರನ್ನು ಸರಿಯಾಗಿ ನಡೆಸಿಕೊಳ್ಳದಿದ್ದರೆ ಅಂಥವರ ಮೇಲೆ ಕ್ರಮ ಕೈಗೊಳ್ಳುತ್ತೇವೆ. ಒಂದು ತಿಂಗಳೊಳಗೆ ಹೆಚ್ಚು ಅರ್ಜಿ, ಅಹವಾಲು ಪರಿಹರಿಸಿ ಎಂದು ಡಿಸಿ, ಸಿಇಒ ಮತ್ತು ಉಸ್ತುವಾರಿ ಕಾರ್ಯದರ್ಶಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

andolanait

Recent Posts

ಗ್ಯಾರಂಟಿ ಪರಿಷ್ಕರಣೆ; ಅರ್ಹರಿಗೆ ಅನ್ಯಾಯ ಆಗಬಾರದು

೨೦೨೩ರ ವಿಧಾನಸಭಾ ಚುನಾವಣೆಯಲ್ಲಿ ನೀಡಿದ್ದ ಭರವಸೆಯಂತೆ ಪಂಚ ಗ್ಯಾರಂಟಿ ಯೋಜನೆಗಳನ್ನು ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ಜಾರಿಗೊಳಿಸಿದ್ದರು. ಅನ್ನಭಾಗ್ಯ, ಗೃಹಲಕ್ಷ್ಮಿ, ಗೃಹಜ್ಯೋತಿ,…

1 hour ago

ರಾಜ್ಯ ರಾಜಕಾರಣದ ಬೆಳವಣಿಗೆಯ ಲಾಭ ಪಡೆಯಲು ಬಿಜೆಪಿ-ಜಾ.ದಳ ಮಿತ್ರಕೂಟ ಯತ್ನ

ಬೆಂಗಳೂರು ಡೈರಿ ಆರ್.ಟಿ.ವಿಠ್ಠಲಮೂರ್ತಿ  ಮುಂಬರುವ ವಿಧಾನಸಭಾ ಚುನಾವಣೆಗೆ ತಂತಮ್ಮ ಪಕ್ಷದ ವೈಯಕ್ತಿಕ ಬಲ ಹೆಚ್ಚಿಸಿಕೊಳ್ಳಲೂ ಕೂಡ ತಂತ್ರ ರಾಜ್ಯ ಕಾಂಗ್ರೆಸ್‌ನ…

1 hour ago

ಕೊಡಗಿನ ಮಲ್ಲಳ್ಳಿ ಫಾಲ್ಸ್‌ನಲ್ಲಿ ಅಭದ್ರತೆ

ಲಕ್ಷ್ಮೀಕಾಂತ್ ಕೊಮಾರಪ್ಪ ಎಚ್ಚರಿಕೆ ಫಲಕ, ಕಾವಲು ಸಿಬ್ಬಂದಿ ಇಲ್ಲ; ಪ್ರವಾಸಿಗರಿಗೆ ಇಲ್ಲಿಲ್ಲ ರಕ್ಷಣೆ ಸೋಮವಾರಪೇಟೆ: ಕೊಡಗಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ…

1 hour ago

ಮುಚ್ಚುವ ಆತಂಕದಲ್ಲಿ ಶತಮಾನ ಕಂಡ ಶಾಲೆ

ಮಂಜು ಕೋಟೆ ಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಬಾಲಕರ ಮಾದರಿ ಶಾಲೆ; ಮಕ್ಕಳ ದಾಖಲಾತಿಯೇ ಇಲ್ಲದೆ ೧, ೨ನೇ ತರಗತಿಗಳು…

1 hour ago

ಸರ್ಕಾರಿ ಕಚೇರಿ; ಮೂಲ ಸೌಕರ್ಯಗಳಿಗೆ ಗೋರಿ!

ಪ್ರಶಾಂತ್ ಎಸ್. ಮೈಸೂರು : ಇಲ್ಲಿ ಕುಡಿಯಲು ನೀರಿಲ್ಲ... ಕುಳಿತುಕೊಳ್ಳಲು ಕುರ್ಚಿ ಇಲ್ಲ... ನಿಸರ್ಗ ಕರೆಗೆ ತುರ್ತಾದರೆ ಪರಿಸ್ಥಿತಿ ಏನೋ…

2 hours ago