ರಾಜ್ಯ

ಕೆಲ ಮಾಧ್ಯಮಗಳು ವಿಜಯೇಂದ್ರ ಪರ: ಶಾಸಕ ಯತ್ನಾಳ್‌ ಆಕ್ರೋಶ

ಕೊಪ್ಪಳ: ವಿಜಯೇಂದ್ರ ಅವರು ವಾಟ್ಸ್‌ಆಪ್‌ನಲ್ಲಿ ಕಳುಹಿಸುವ ಪ್ರಶ್ನೆಗಳನ್ನು ಕೇಳಲು ಇಲ್ಲಿಗೆ ಬಂದಿದ್ದೀರಾ ಎಂದು ಮಾಧ್ಯಮಗಳನ್ನು ಪ್ರಶ್ನಿಸುವ ಮೂಲಕ ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರ ಬೆಂಬಲವಾಗಿ ನಿಂತಿರುವ ಕೆಲ ಮಾಧ್ಯಮಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹರಿಹಾಯ್ದಿದ್ದಾರೆ.

ಇಂದು ಇಲ್ಲಿನ ಗವಿಸಿದ್ದೇಶ್ವರ ಮಠಕ್ಕೆ ಯತ್ನಾಳ್‌ ಅವರು ಭೇಟಿ ನೀಡಿದ ವೇಳೆ ಕೆಲ ಮಾಧ್ಯಮಗಳ ವಿರುದ್ಧ ಹರಿಹಾಯ್ದರು.

ಕರ್ನಾಟಕದ ಎಲ್ಲ ಮಾಧ್ಯಮಗಳು ನಿಷ್ಪಕ್ಷವಾಗಿದ್ದರೆ ಮಾತ್ರ ನನ್ನ ಬಳಿ ಬನ್ನಿ. ನೀವು ಯಡಿಯೂರಪ್ಪ ಹಾಗೂ ವಿಜಯೇಂದ್ರ ಬೆಂಬಲಿಗರಾದರೆ ಬರಬೇಡಿ. ಕೆಲವು ಮಾಧ್ಯಮಗಳು ತಮ್ಮಿಂದಲೇ ರಾಜ್ಯದ ಜನರ ಅಭಿಪ್ರಾಯ ರೂಪುಗೊಳ್ಳುತ್ತವೆ ಎಂದು ಭಾವಿಸಿರುವುದು ಮೂರ್ಖತನ ಎಂದು ಆಕ್ರೋಶಗೊಂಡರು.

ಕಾಂಗ್ರೆಸ್‌ ಪಕ್ಷಕ್ಕೆ ಹೋಗುತ್ತೀರಾ ಎಂದು ಕೇಳಲಾದ ಪ್ರಶ್ನೆಗೆ, ಕಾಂಗ್ರೆಸ್‌ ಮುಸ್ಲಿಂ ಪಕ್ಷ. ಈ ಜನ್ಮದಲ್ಲಿ ಅಲ್ಲ, ಮುಂದಿನ ಜನ್ಮದಲ್ಲಿಯೂ ಹೋಗುವುದಿಲ್ಲ ಎಂದರು.

ನಿಮ್ಮ ಜೊತೆಯಲ್ಲಿ ರಮೇಶ್‌ ಜಾರಕಿಹೊಳಿ ಹಾಗೂ ಕುಮಾರ ಬಂಗಾರಪ್ಪ ಈಗಲೂ ಇದ್ದಾರೆಯೇ ಎಂಬ ಪ್ರಶ್ನೆಗೆ, ಅವರು ಯಾವಾಗಲೂ ನನ್ನ ಜೊತೆಗೆ ಇರುತ್ತಾರೆ. ನೀವು ವಿಜಯೇಂದ್ರ ಅವರ ಏಜೆಂಟರ ರೀತಿ ಪ್ರಶ್ನೆ ಕೇಳುವುದಾದರೆ ಇಲ್ಲಿಂದ ಗೆಟ್‌ಔಟ್‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಕಾರು ಅಪಘಾತ : ಕಾರಿನಲ್ಲಿ‌10ಕ್ಕೂ ಹೆಚ್ಚು ಕರುಗಳು ಪತ್ತೆ

ಮಂಡ್ಯ: ನಾಗಮಂಗಲ ತಾಲೂಕು ಯರಗಟ್ಟಿ ಗೇಟ್ ಬಳಿ ಶುಕ್ರವಾರ ರಾತ್ರಿ ಅಪಘಾತಕ್ಕೊಳಗಾದ ಸ್ಕಾರ್ಪಿಯೋ ಕಾರಿನಲ್ಲಿ ಮೃತಪಟ್ಟಿರುವ ಹತ್ತಕ್ಕೂ ಹೆಚ್ಚು ಕರುಗಳು…

8 hours ago

ಮದ್ದೂರು |‌ ದೇವಾಲಯಗಳಲ್ಲಿ ಸರಣಿ ಕಳ್ಳತನ

ಮದ್ದೂರು: ದುಷ್ಕರ್ಮಿಗಳು ದೇವಾಲಯಗಳ ಬಾಗಿಲು ಮುರಿದು ಸರಣಿ ಕಳ್ಳತನ ಮಾಡಿರುವ ಘಟನೆ ತಾಲ್ಲೂಕಿನ ಕೆಸ್ತೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಡಗನಹಳ್ಳಿ…

11 hours ago

ಎಚ್ಚೆತ್ತ ಪೊಲೀಸರು : ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ,ಪರಿಶೀಲನೆ

ಮೈಸೂರು : ಎನ್‌ಸಿಬಿ ಪೊಲೀಸರು ನಗರದ ಹೆಬ್ಬಾಳು ಕೈಗಾರಿಕಾ ಪ್ರದೇಶದ ರಾಸಾಯನಿಕ ತಯಾರಿಕಾ ಘಟಕದ ಮೇಲೆ ದಾಳಿ ನಡೆಸಿದ ನಂತರ…

12 hours ago

ರಾಜೀವ್‌ಗೌಡಗೆ ಜಾಮೀನು : ಪಟಾಕಿ ಸಿಡಿಸಿ ಸಂಭ್ರಮಿಸದಂತೆ ಕೋರ್ಟ್‌ ತಾಕೀತು

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಅವರಿಗೆ ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಆರೋಪಿ ರಾಜೀವ್ ಗೌಡಗೆ ಜಾಮೀನು…

12 hours ago

ಉದ್ಯಮಿ ಸಿ.ಜೆ.ರಾಯ್‌ ಆತ್ಮಹತ್ಯೆ

ಬೆಂಗಳೂರು : ದಕ್ಷಿಣ ಭಾರತದ ಪ್ರಮುಖ ರಿಯಲ್ ಎಸ್ಟೇಟ್ ಕಂಪನಿ ಕಾನ್ಫಿಡೆಂಟ್ ಗ್ರೂಪ್‌ನ ಸ್ಥಾಪಕ ಮತ್ತು ಚೇರ್ಮನ್ ಡಾ.ಸಿ.ಜೆ. ರಾಯ್…

12 hours ago

ಸಿಎಂ,ಡಿಸಿಎಂ ವಿರುದ್ಧ ಮಾನಹಾನಿಕ ಪೋಸ್ಟ್‌ : ಬಿಜೆಪಿ ವಿರುದ್ಧ ದೂರು

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು ‘ಮಾನಹಾನಿಕರ’ ಪೋಸ್ಟ್‌ನ್ನು ಬಿಜೆಪಿಯ ‘ಎಕ್ಸ್’ ಖಾತೆಯಲ್ಲಿ…

13 hours ago