ರಾಜ್ಯ

ಕೆಲ ಮಾಧ್ಯಮಗಳು ವಿಜಯೇಂದ್ರ ಪರ: ಶಾಸಕ ಯತ್ನಾಳ್‌ ಆಕ್ರೋಶ

ಕೊಪ್ಪಳ: ವಿಜಯೇಂದ್ರ ಅವರು ವಾಟ್ಸ್‌ಆಪ್‌ನಲ್ಲಿ ಕಳುಹಿಸುವ ಪ್ರಶ್ನೆಗಳನ್ನು ಕೇಳಲು ಇಲ್ಲಿಗೆ ಬಂದಿದ್ದೀರಾ ಎಂದು ಮಾಧ್ಯಮಗಳನ್ನು ಪ್ರಶ್ನಿಸುವ ಮೂಲಕ ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರ ಬೆಂಬಲವಾಗಿ ನಿಂತಿರುವ ಕೆಲ ಮಾಧ್ಯಮಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹರಿಹಾಯ್ದಿದ್ದಾರೆ.

ಇಂದು ಇಲ್ಲಿನ ಗವಿಸಿದ್ದೇಶ್ವರ ಮಠಕ್ಕೆ ಯತ್ನಾಳ್‌ ಅವರು ಭೇಟಿ ನೀಡಿದ ವೇಳೆ ಕೆಲ ಮಾಧ್ಯಮಗಳ ವಿರುದ್ಧ ಹರಿಹಾಯ್ದರು.

ಕರ್ನಾಟಕದ ಎಲ್ಲ ಮಾಧ್ಯಮಗಳು ನಿಷ್ಪಕ್ಷವಾಗಿದ್ದರೆ ಮಾತ್ರ ನನ್ನ ಬಳಿ ಬನ್ನಿ. ನೀವು ಯಡಿಯೂರಪ್ಪ ಹಾಗೂ ವಿಜಯೇಂದ್ರ ಬೆಂಬಲಿಗರಾದರೆ ಬರಬೇಡಿ. ಕೆಲವು ಮಾಧ್ಯಮಗಳು ತಮ್ಮಿಂದಲೇ ರಾಜ್ಯದ ಜನರ ಅಭಿಪ್ರಾಯ ರೂಪುಗೊಳ್ಳುತ್ತವೆ ಎಂದು ಭಾವಿಸಿರುವುದು ಮೂರ್ಖತನ ಎಂದು ಆಕ್ರೋಶಗೊಂಡರು.

ಕಾಂಗ್ರೆಸ್‌ ಪಕ್ಷಕ್ಕೆ ಹೋಗುತ್ತೀರಾ ಎಂದು ಕೇಳಲಾದ ಪ್ರಶ್ನೆಗೆ, ಕಾಂಗ್ರೆಸ್‌ ಮುಸ್ಲಿಂ ಪಕ್ಷ. ಈ ಜನ್ಮದಲ್ಲಿ ಅಲ್ಲ, ಮುಂದಿನ ಜನ್ಮದಲ್ಲಿಯೂ ಹೋಗುವುದಿಲ್ಲ ಎಂದರು.

ನಿಮ್ಮ ಜೊತೆಯಲ್ಲಿ ರಮೇಶ್‌ ಜಾರಕಿಹೊಳಿ ಹಾಗೂ ಕುಮಾರ ಬಂಗಾರಪ್ಪ ಈಗಲೂ ಇದ್ದಾರೆಯೇ ಎಂಬ ಪ್ರಶ್ನೆಗೆ, ಅವರು ಯಾವಾಗಲೂ ನನ್ನ ಜೊತೆಗೆ ಇರುತ್ತಾರೆ. ನೀವು ವಿಜಯೇಂದ್ರ ಅವರ ಏಜೆಂಟರ ರೀತಿ ಪ್ರಶ್ನೆ ಕೇಳುವುದಾದರೆ ಇಲ್ಲಿಂದ ಗೆಟ್‌ಔಟ್‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಸಾಲ ಬಾಧೆ ; ದಂಪತಿ ಆತ್ಮಹತ್ಯೆ

ಮಂಡ್ಯ : ಸಾಲ ಬಾಧೆಯಿಂದ ದಂಪತಿಗಳಿಬ್ಬರು ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲ್ಲೂಕಿನ ಬಿ.ಹಟ್ಟಣ ಗ್ರಾಮದಲ್ಲಿ…

2 hours ago

ಓದುಗರ ಪತ್ರ: ಮೇಕೆದಾಟು ಯೋಜನೆ ಶೀಘ್ರ ಅನುಷ್ಠಾನವಾಗಲಿ

ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ೨೦೧೪ರ ಸುಪ್ರೀಂ ಕೋರ್ಟ್ ತೀರ್ಪಿನ ಪ್ರಕಾರ ಕರ್ನಾಟಕವು ಮೇಕೆದಾಟು ಜಲಾಶಯ ನಿರ್ಮಿಸಲು ತಮಿಳುನಾಡು ಸೇರಿದಂತೆ ಯಾವುದೇ…

16 hours ago

ಓದುಗರ ಪತ್ರ: ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಚುರುಕುಗೊಳ್ಳಲಿ

ಮೈಸೂರು ನಗರದಲ್ಲಿ ಅನೇಕ ಕಡೆ ಪಾದಚಾರಿಗಳಿಗೆ ಅಡಚಣೆಯಾಗಿದ್ದ ಫುಟ್‌ಪಾತ್ ವ್ಯಾಪಾರಿಗಳ ಒತ್ತುವರಿ ತೆರವು ಕಾರ್ಯಾಚರಣೆ ನಡೆಯುತ್ತಿದೆ. ಆದರೆ ಬಹುತೇಕ ಕಡೆ…

16 hours ago

ಓದುಗರ ಪತ್ರ: ಕೂಡ್ಲಾಪುರ ಗ್ರಾಮಕ್ಕೆ ಕಬಿನಿ ನೀರು ಕೊಡಿ

ನಂಜನಗೂಡು ತಾಲ್ಲೂಕಿನ ಕೂಡ್ಲಾಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ಬರ ಪರಿಸ್ಥಿತಿಯಿಂದಾಗಿ ಕೆರೆಗಳು ಬತ್ತಿಹೋಗಿದ್ದು, ಕುಡಿಯುವ ನೀರು ಸಿಗದೆ ತೊಂದರೆಯಾಗಿದೆ. ನಂಜನಗೂಡು…

16 hours ago

ಗಾಮೀಣ ಜನರ ಏಳಿಗೆಗೆ IHDUA ಪಣ

ಪ್ರಸನ್ನ ಎಂ.ಕೆ. ಖ್ಯಾತ ಕ್ಯಾನ್ಸರ್ ರೋಗ ತಜ್ಞರು, ಭಾರತ್ ಕ್ಯಾನ್ಸರ್ ಹಾಸ್ಪಿಟಲ್ ಹಾಗೂ ಎಚ್‌ಸಿಜಿ ಆಸ್ಪತ್ರೆ ಛೇರ್ಮನ್ ಮತ್ತು ಸಂಸ್ಥಾಪಕರು,…

16 hours ago

ಸತ್ಯಮಂಗಲ-ಮೀಣ್ಯಂ ರಸ್ತೆಯಲ್ಲಿ ಸಂಚಾರ ದುಸ್ತರ

ಮಾದೇಶ್ ಗೌಡ ಹದಗೆಟ್ಟ ರಸ್ತೆ ಅಭಿವೃದ್ಧಿಗೆ ಸವಾರರ ಆಗ್ರಹ; ಅಭಿವೃದ್ಧಿಯಾಗದಿದ್ದರೆ ಪ್ರತಿಭಟನೆ ಎಚ್ಚರಿಕೆ ಹನೂರು: ತಾಲ್ಲೂಕಿನ ಮೀಣ್ಯಂ ಗ್ರಾಪಂ ವ್ಯಾಪ್ತಿಯ…

16 hours ago