ರಾಜ್ಯ

ಕೆಲ ಮಾಧ್ಯಮಗಳು ವಿಜಯೇಂದ್ರ ಪರ: ಶಾಸಕ ಯತ್ನಾಳ್‌ ಆಕ್ರೋಶ

ಕೊಪ್ಪಳ: ವಿಜಯೇಂದ್ರ ಅವರು ವಾಟ್ಸ್‌ಆಪ್‌ನಲ್ಲಿ ಕಳುಹಿಸುವ ಪ್ರಶ್ನೆಗಳನ್ನು ಕೇಳಲು ಇಲ್ಲಿಗೆ ಬಂದಿದ್ದೀರಾ ಎಂದು ಮಾಧ್ಯಮಗಳನ್ನು ಪ್ರಶ್ನಿಸುವ ಮೂಲಕ ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರ ಬೆಂಬಲವಾಗಿ ನಿಂತಿರುವ ಕೆಲ ಮಾಧ್ಯಮಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹರಿಹಾಯ್ದಿದ್ದಾರೆ.

ಇಂದು ಇಲ್ಲಿನ ಗವಿಸಿದ್ದೇಶ್ವರ ಮಠಕ್ಕೆ ಯತ್ನಾಳ್‌ ಅವರು ಭೇಟಿ ನೀಡಿದ ವೇಳೆ ಕೆಲ ಮಾಧ್ಯಮಗಳ ವಿರುದ್ಧ ಹರಿಹಾಯ್ದರು.

ಕರ್ನಾಟಕದ ಎಲ್ಲ ಮಾಧ್ಯಮಗಳು ನಿಷ್ಪಕ್ಷವಾಗಿದ್ದರೆ ಮಾತ್ರ ನನ್ನ ಬಳಿ ಬನ್ನಿ. ನೀವು ಯಡಿಯೂರಪ್ಪ ಹಾಗೂ ವಿಜಯೇಂದ್ರ ಬೆಂಬಲಿಗರಾದರೆ ಬರಬೇಡಿ. ಕೆಲವು ಮಾಧ್ಯಮಗಳು ತಮ್ಮಿಂದಲೇ ರಾಜ್ಯದ ಜನರ ಅಭಿಪ್ರಾಯ ರೂಪುಗೊಳ್ಳುತ್ತವೆ ಎಂದು ಭಾವಿಸಿರುವುದು ಮೂರ್ಖತನ ಎಂದು ಆಕ್ರೋಶಗೊಂಡರು.

ಕಾಂಗ್ರೆಸ್‌ ಪಕ್ಷಕ್ಕೆ ಹೋಗುತ್ತೀರಾ ಎಂದು ಕೇಳಲಾದ ಪ್ರಶ್ನೆಗೆ, ಕಾಂಗ್ರೆಸ್‌ ಮುಸ್ಲಿಂ ಪಕ್ಷ. ಈ ಜನ್ಮದಲ್ಲಿ ಅಲ್ಲ, ಮುಂದಿನ ಜನ್ಮದಲ್ಲಿಯೂ ಹೋಗುವುದಿಲ್ಲ ಎಂದರು.

ನಿಮ್ಮ ಜೊತೆಯಲ್ಲಿ ರಮೇಶ್‌ ಜಾರಕಿಹೊಳಿ ಹಾಗೂ ಕುಮಾರ ಬಂಗಾರಪ್ಪ ಈಗಲೂ ಇದ್ದಾರೆಯೇ ಎಂಬ ಪ್ರಶ್ನೆಗೆ, ಅವರು ಯಾವಾಗಲೂ ನನ್ನ ಜೊತೆಗೆ ಇರುತ್ತಾರೆ. ನೀವು ವಿಜಯೇಂದ್ರ ಅವರ ಏಜೆಂಟರ ರೀತಿ ಪ್ರಶ್ನೆ ಕೇಳುವುದಾದರೆ ಇಲ್ಲಿಂದ ಗೆಟ್‌ಔಟ್‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ರಾಮನಗುಡ್ಡ ಕೆರೆ ಭರ್ತಿ : ಕೋಡಿ ಬಿದ್ದು ಹರಿದ ನೀರು

ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…

1 hour ago

ಓದುಗರ ಪತ್ರ: ಕೊನೆಗೊಳ್ಳಲಿ ಸಂಘರ್ಷ!

ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…

6 hours ago

ಓದುಗರ ಪತ್ರ: ಚುರುಕಾಗಲಿ 6ರ ಪ್ಲಾಟ್ ಫಾರಂ ಟಿಕೆಟ್ ಕೌಂಟರ್

ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…

6 hours ago

ಓದುಗರ ಪತ್ರ: ಲೆಕ್ಕ ಹಾಕಿಕೊಂಡು ಮುಷ್ಕರ ನಡೆಸುವ ಬ್ಯಾಂಕ್ ಯೂನಿಯನ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಿ

ಸರ್ಕಾರಿ ಸ್ವಾಮ್ಯದ ಬ್ಯಾಂಕ್ ನೌಕರರು ಕಳೆದ ಶುಕ್ರವಾರ ತಮ್ಮ ಬಹುದಿನಗಳ ಬೇಡಿಕೆಯಾದ ವಾರಕ್ಕೆ ಐದು ದಿನಗಳ ಕಾಲ ಮಾತ್ರ ಕೆಲಸ…

6 hours ago

ಬಾಗಿಲುಗಳನ್ನು ತೆರೆದಿಡಿ, ಸಂವಹನವನ್ನು ಪಾರದರ್ಶಕವಾಗಿಡಿ

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಸಾರ್ವಜನಿಕ ಸಂಸ್ಥೆಗಳಿಗೆ ಅತ್ಯಂತ ಮುಖ್ಯವಾದ ಪಾಠ  ಯಾವುದೇ ನಾಗರಿಕನು ತನ್ನ…

6 hours ago

ಗಾಲಿಕುರ್ಚಿಯಲ್ಲಿ ಕುಳಿತೇ ಯಶಸ್ವೀ ಲೇಖಕಿಯಾದ ಹಿಮಾಂಶಿಕಾ

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ದೈಹಿಕ ನ್ಯೂನತೆ ನಡುವೆ ಆರ್ಥಿಕ ಪ್ರಗತಿಯ ಮೆಟ್ಟಿಲೇರಿದ ಮಹಿಳೆ ಹರ‍್ಯಾಣದ ಅಂಬಾಲಾದ ಹಿಮಾಂಶಿಕಾ ಶರ್ಮಾರಿಗೆ…

6 hours ago