ರಾಜ್ಯ

ಕೆಲ ಮಾಧ್ಯಮಗಳು ವಿಜಯೇಂದ್ರ ಪರ: ಶಾಸಕ ಯತ್ನಾಳ್‌ ಆಕ್ರೋಶ

ಕೊಪ್ಪಳ: ವಿಜಯೇಂದ್ರ ಅವರು ವಾಟ್ಸ್‌ಆಪ್‌ನಲ್ಲಿ ಕಳುಹಿಸುವ ಪ್ರಶ್ನೆಗಳನ್ನು ಕೇಳಲು ಇಲ್ಲಿಗೆ ಬಂದಿದ್ದೀರಾ ಎಂದು ಮಾಧ್ಯಮಗಳನ್ನು ಪ್ರಶ್ನಿಸುವ ಮೂಲಕ ವಿಜಯೇಂದ್ರ ಹಾಗೂ ಯಡಿಯೂರಪ್ಪ ಅವರ ಬೆಂಬಲವಾಗಿ ನಿಂತಿರುವ ಕೆಲ ಮಾಧ್ಯಮಗಳ ವಿರುದ್ಧ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಹರಿಹಾಯ್ದಿದ್ದಾರೆ.

ಇಂದು ಇಲ್ಲಿನ ಗವಿಸಿದ್ದೇಶ್ವರ ಮಠಕ್ಕೆ ಯತ್ನಾಳ್‌ ಅವರು ಭೇಟಿ ನೀಡಿದ ವೇಳೆ ಕೆಲ ಮಾಧ್ಯಮಗಳ ವಿರುದ್ಧ ಹರಿಹಾಯ್ದರು.

ಕರ್ನಾಟಕದ ಎಲ್ಲ ಮಾಧ್ಯಮಗಳು ನಿಷ್ಪಕ್ಷವಾಗಿದ್ದರೆ ಮಾತ್ರ ನನ್ನ ಬಳಿ ಬನ್ನಿ. ನೀವು ಯಡಿಯೂರಪ್ಪ ಹಾಗೂ ವಿಜಯೇಂದ್ರ ಬೆಂಬಲಿಗರಾದರೆ ಬರಬೇಡಿ. ಕೆಲವು ಮಾಧ್ಯಮಗಳು ತಮ್ಮಿಂದಲೇ ರಾಜ್ಯದ ಜನರ ಅಭಿಪ್ರಾಯ ರೂಪುಗೊಳ್ಳುತ್ತವೆ ಎಂದು ಭಾವಿಸಿರುವುದು ಮೂರ್ಖತನ ಎಂದು ಆಕ್ರೋಶಗೊಂಡರು.

ಕಾಂಗ್ರೆಸ್‌ ಪಕ್ಷಕ್ಕೆ ಹೋಗುತ್ತೀರಾ ಎಂದು ಕೇಳಲಾದ ಪ್ರಶ್ನೆಗೆ, ಕಾಂಗ್ರೆಸ್‌ ಮುಸ್ಲಿಂ ಪಕ್ಷ. ಈ ಜನ್ಮದಲ್ಲಿ ಅಲ್ಲ, ಮುಂದಿನ ಜನ್ಮದಲ್ಲಿಯೂ ಹೋಗುವುದಿಲ್ಲ ಎಂದರು.

ನಿಮ್ಮ ಜೊತೆಯಲ್ಲಿ ರಮೇಶ್‌ ಜಾರಕಿಹೊಳಿ ಹಾಗೂ ಕುಮಾರ ಬಂಗಾರಪ್ಪ ಈಗಲೂ ಇದ್ದಾರೆಯೇ ಎಂಬ ಪ್ರಶ್ನೆಗೆ, ಅವರು ಯಾವಾಗಲೂ ನನ್ನ ಜೊತೆಗೆ ಇರುತ್ತಾರೆ. ನೀವು ವಿಜಯೇಂದ್ರ ಅವರ ಏಜೆಂಟರ ರೀತಿ ಪ್ರಶ್ನೆ ಕೇಳುವುದಾದರೆ ಇಲ್ಲಿಂದ ಗೆಟ್‌ಔಟ್‌ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಆಂದೋಲನ ಡೆಸ್ಕ್

Recent Posts

ಮೈಸೂರು | ಪೊಲೀಸರ ಬಲೆಗೆ ಬಿದ್ದ ಸುಪಾರಿ ಗ್ಯಾಂಗ್‌

ಮೈಸೂರು : ಹಲವು ಗಂಭೀರ ಪ್ರಕರಣಗಳಲ್ಲಿ ಆರೋಪಿಯಾಗಿರುವ ಕುಖ್ಯಾತ ರೌಡಿ ಹಬೀದ್ ಪಾಷಾ ಇದೀಗ ಸುಫಾರಿ ಹಂತಕನಾಗಿ ಕಾರ್ಯನಿರ್ವಹಿಸುತ್ತಿದ್ದಾನೆ ಎಂಬ…

1 hour ago

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

3 hours ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

4 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

5 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

5 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

6 hours ago