ರಾಜ್ಯ

ರಾಜ್ಯ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ : ಎಂ.ಪಿ ರೇಣುಕಾಚಾರ್ಯ

ಬೆಂಗಳೂರು : ಕರ್ನಾಟಕದ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ. ಈ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ಪಕ್ಷದವರ ವಿರುದ್ಧವೇ ಹರಿಹಾಯ್ದರು. ಪಕ್ಷ ಸೋತ ನಂತರ ಎಲ್ಲರನ್ನೂ ಕರೆದು ಮಾತಾಡಿಸಬೇಕು. ಯಡಿಯೂರಪ್ಪ ಹಿಂದೆಲ್ಲ ಆ ಕೆಲಸ ಮಾಡಿದ್ರು. ಆದರೆ ಬಿಜೆಪಿಯಲ್ಲಿ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು.

ಬೇಸತ್ತು ಹೋಗಿರುವವರು ಮುಂದೆ ಪಕ್ಷ ಬಿಡಬಹುದು. ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಅಂತ ಜನ ಮಾತನಾಡುತ್ತಿದ್ದಾರೆ. ನಾನು ಹೇಳುತ್ತಿಲ್ಲ, ಜನ ಹಾಗೆ ಹೇಳುತ್ತಿದ್ದಾರೆ. ಹಲವರು ಪಕ್ಷದಲ್ಲಿ ಮಾತಾಡಲು ಭಯಪಡುತ್ತಿದ್ದಾರೆ. ಬಿಜೆಪಿಗೆ ಮಧ್ಯದಲ್ಲಿ ಯಾರು ಬಂದಿದ್ದಾರೋ ಅವರ ಆಟವೇ ಜಾಸ್ತಿ ಆಗುತ್ತಿದೆ ಎಂದರು.

ರಾಜಕೀಯದಲ್ಲಿ ಗಾಡ್ ಫಾದರ್ ಬೇಕು. ಯಡಿಯೂರಪ್ಪ ಅವರಿಗೆ ಆ ಸಾಮರ್ಥ್ಯ ಇತ್ತು. ಯಡಿಯೂರಪ್ಪ ಅವರ ನಾಯಕತ್ವ ಪಕ್ಷ ಗಟ್ಟಿಗೊಳಿಸಿದೆ. ಈಗಿನ ಪರಿಸ್ಥಿತಿಗೆ ಈಗಾಗಲೇ ಕೆಲವರು ಪಕ್ಷದಿಂದ ಹೊರಗೆ ಹೋಗಿದ್ದಾರೆ. ಅಭದ್ರತೆಯಿಂದ ಯಾರು ಬೇಕಾದರೂ ಪಕ್ಷ ಬಿಟ್ ಹೋಗಬಹುದು. ಮೋದಿಯವ್ರು ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ. ಮಧ್ಯದಲ್ಲಿ ಇರೋರು ಕೆಲವರು ಯಡಿಯೂರಪ್ಪ ಅವರನ್ನು ಕಡೆಗಣಿಸ್ತಿದ್ದಾರೆ ಎಂದರು.

ನಾನು ಯಡಿಯೂರಪ್ಪ ಗರಡಿಯಲ್ಲಿ ಬೆಳೆದವನು. ಬಿಜೆಪಿ ಬಿಡ್ತೇನೆ ಅಂತ ಎಲ್ಲೂ ಹೇಳಿಲ್ಲ. ಕಾಂಗ್ರೆಸ್ ಸೇರುತ್ತೇನೆ ಅಂತ ಹೇಳಿಲ್ಲ. ಪಕ್ಷ ಕಟ್ಟೋಣ ಅಂತ ಯಡಿಯೂರಪ್ಪ ಹೇಳಿದ್ದಾರೆ. ನಾವು ಕಾದು ನೋಡುತ್ತೇವೆ. ಆದರೆ ಪಕ್ಷ ಬಿಡುವ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಗರಂ ಆದರು.

lokesh

Recent Posts

ಕುರಟ್ಟಿ ಹೊಸೂರಲ್ಲಿ ಪ್ರಕೃತಿ ವಿಸ್ಮಯ: ಕಹಿ ಬೇವಿನ ಮರದಲ್ಲಿ ಸಿಹಿ ದ್ರಾವಣ ಕಂಡು ಜನರು ಅಚ್ಚರಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು  ಹನೂರು: ಕಡು ಕಹಿ ಎಲೆ, ಕಾಂಡ, ಕಾಯಿ ನೀಡುವ ಬೇವಿನ ಮರದಲ್ಲಿ…

7 hours ago

ಕನ್ನಡದಲ್ಲಿ ರೈಲ್ವೆ ಪರೀಕ್ಷೆ ನಡೆಸದಿದ್ದರೆ ಉಗ್ರ ಹೋರಾಟ: ನಾರಾಯಣಗೌಡ ಎಚ್ಚರಿಕೆ

ಬೆಂಗಳೂರು: ರೈಲ್ವೆಯ ಯಾವುದೇ ಪರೀಕ್ಷೆಯಿರಲಿ, ಅದನ್ನು ಕನ್ನಡದಲ್ಲೇ ಕಡ್ಡಾಯವಾಗಿ ನಡೆಸಬೇಕು. ಇಲ್ಲದಿದ್ದರೆ ಉಗ್ರ ಹೋರಾಟ ನಡೆಸಲಾಗುತ್ತದೆ ಎಂದು ಕರ್ನಾಟಕ ರಕ್ಷಣಾ…

8 hours ago

ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆ: ಪರೀಕ್ಷಾ ಕೇಂದ್ರಗಳಿಗೆ ಸಿಇಓ ಭೇಟಿ

ಮಂಡ್ಯ: ಜನವರಿ.27ರಿಂದ ಪ್ರಾರಂಭವಾಗಿರುವ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಹಿನ್ನೆಲೆಯಲ್ಲಿ ಇಂದು ತಾಲ್ಲೂಕಿನ ಸೂನಗನಹಳ್ಳಿ ಮತ್ತು ತಗ್ಗಹಳ್ಳಿ ಗ್ರಾಮದ ಸರ್ಕಾರಿ…

8 hours ago

ಲೋಕಸಭೆಯಲ್ಲಿ ಸ್ಪೀಕರ್‌ ಮೇಲೆ ಪೇಪರ್‌ ತೂರಿದ್ದ 8 ಮಂದಿ ಸಂಸದರು ಅಮಾನತು

ನವದೆಹಲಿ: ಸಂಸತ್ತಿನ ಬಜೆಟ್‌ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಉಂಟಾದ ಭಾರೀ ಗದ್ದಲ ಮತ್ತು ಸ್ಪೀಕರ್‌ ಪೀಠದ ಕಡೆಗೆ ಪೇಪರ್‌ ಹರಿದು…

8 hours ago

ನರೇಗಾ ಮರುಸ್ಥಾಪನೆಗೆ ಸಿಎಂ ಸಿದ್ದರಾಮಯ್ಯ ಪಟ್ಟು: ವಿಧಾನಸಭೆಯಲ್ಲಿ ಕೇಂದ್ರದ ವಿರುದ್ಧ ನಿರ್ಣಯ ಮಂಡನೆ

ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹೊಸ ಉದ್ಯೋಗ ಯೋಜನೆಯನ್ನು ವಿರೋಧಿಸಿ ಹಾಗೂ ಹಳೆಯ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ…

8 hours ago

ಹನೂರು| ಆಂದೋಲನ ವರದಿಯಿಂದ ಎಚ್ಚೆತ್ತ ಅಧಿಕಾರಿಗಳು: ಗ್ರಾಮಗಳಿಗೆ ಭೇಟಿ

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮಾರ್ಟಳ್ಳಿ ಹಾಗೂ ಸುಳ್ವಾಡಿ…

8 hours ago