ರಾಜ್ಯ

ರಾಜ್ಯ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ : ಎಂ.ಪಿ ರೇಣುಕಾಚಾರ್ಯ

ಬೆಂಗಳೂರು : ಕರ್ನಾಟಕದ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ. ಈ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ಪಕ್ಷದವರ ವಿರುದ್ಧವೇ ಹರಿಹಾಯ್ದರು. ಪಕ್ಷ ಸೋತ ನಂತರ ಎಲ್ಲರನ್ನೂ ಕರೆದು ಮಾತಾಡಿಸಬೇಕು. ಯಡಿಯೂರಪ್ಪ ಹಿಂದೆಲ್ಲ ಆ ಕೆಲಸ ಮಾಡಿದ್ರು. ಆದರೆ ಬಿಜೆಪಿಯಲ್ಲಿ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು.

ಬೇಸತ್ತು ಹೋಗಿರುವವರು ಮುಂದೆ ಪಕ್ಷ ಬಿಡಬಹುದು. ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಅಂತ ಜನ ಮಾತನಾಡುತ್ತಿದ್ದಾರೆ. ನಾನು ಹೇಳುತ್ತಿಲ್ಲ, ಜನ ಹಾಗೆ ಹೇಳುತ್ತಿದ್ದಾರೆ. ಹಲವರು ಪಕ್ಷದಲ್ಲಿ ಮಾತಾಡಲು ಭಯಪಡುತ್ತಿದ್ದಾರೆ. ಬಿಜೆಪಿಗೆ ಮಧ್ಯದಲ್ಲಿ ಯಾರು ಬಂದಿದ್ದಾರೋ ಅವರ ಆಟವೇ ಜಾಸ್ತಿ ಆಗುತ್ತಿದೆ ಎಂದರು.

ರಾಜಕೀಯದಲ್ಲಿ ಗಾಡ್ ಫಾದರ್ ಬೇಕು. ಯಡಿಯೂರಪ್ಪ ಅವರಿಗೆ ಆ ಸಾಮರ್ಥ್ಯ ಇತ್ತು. ಯಡಿಯೂರಪ್ಪ ಅವರ ನಾಯಕತ್ವ ಪಕ್ಷ ಗಟ್ಟಿಗೊಳಿಸಿದೆ. ಈಗಿನ ಪರಿಸ್ಥಿತಿಗೆ ಈಗಾಗಲೇ ಕೆಲವರು ಪಕ್ಷದಿಂದ ಹೊರಗೆ ಹೋಗಿದ್ದಾರೆ. ಅಭದ್ರತೆಯಿಂದ ಯಾರು ಬೇಕಾದರೂ ಪಕ್ಷ ಬಿಟ್ ಹೋಗಬಹುದು. ಮೋದಿಯವ್ರು ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ. ಮಧ್ಯದಲ್ಲಿ ಇರೋರು ಕೆಲವರು ಯಡಿಯೂರಪ್ಪ ಅವರನ್ನು ಕಡೆಗಣಿಸ್ತಿದ್ದಾರೆ ಎಂದರು.

ನಾನು ಯಡಿಯೂರಪ್ಪ ಗರಡಿಯಲ್ಲಿ ಬೆಳೆದವನು. ಬಿಜೆಪಿ ಬಿಡ್ತೇನೆ ಅಂತ ಎಲ್ಲೂ ಹೇಳಿಲ್ಲ. ಕಾಂಗ್ರೆಸ್ ಸೇರುತ್ತೇನೆ ಅಂತ ಹೇಳಿಲ್ಲ. ಪಕ್ಷ ಕಟ್ಟೋಣ ಅಂತ ಯಡಿಯೂರಪ್ಪ ಹೇಳಿದ್ದಾರೆ. ನಾವು ಕಾದು ನೋಡುತ್ತೇವೆ. ಆದರೆ ಪಕ್ಷ ಬಿಡುವ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಗರಂ ಆದರು.

lokesh

Recent Posts

ಕಿಲ್ಲಿಂಗ್‌ ಡಾಕ್ಟರ್‌ ವಿನಯ್‌ ಅಸಲಿ ಬಣ್ಣ ಬಯಲು ; ವೈದ್ಯನ ಬಲೆಗೆ ಸಿಲುಕಿ ನಲುಗಿದ ಮೂವರು ಸುಂದರಿಯರು!

ಮೈಸೂರು : ಪ್ರೀತಿ-ಪ್ರೇಮದ ಗುಂಗಲ್ಲಿ ಜೀವ ಕಳೆದುಕೊಂಡ ಜೀವಗಳು ಅದೆಷ್ಟೋ, ಜೀವನದಲ್ಲಿ ತೆಗೆದುಕೊಳ್ಳೋ ಒಂದೇ ಒಂದು ನಿರ್ಧಾರ ಬದುಕಿನ ಆಟವನ್ನೇ…

1 hour ago

ಮೈಸೂರಿನ ಸಮಗ್ರ ಅಭಿವೃದ್ಧಿಗೆ ಆದ್ಯತೆ

ನಗರಪಾಲಿಕೆಯಲ್ಲಿ 2026-27ನೇ ಸಾಲಿನ ಆಯವ್ಯಯ ಮಂಡನೆ ಮೈಸೂರು : ರಾಜಧಾನಿ ಬೆಂಗಳೂರು ನಂತರ ವೇಗವಾಗಿ ಬೆಳೆಯುತ್ತಿರುವ ಸಾಂಸ್ಕೃತಿಕ ನಗರಿಯ ಸಮಗ್ರ…

2 hours ago

ಹೈಕಮಾಂಡ್ ಹೇಳುವವರೆಗೂ ನಾನೇ ಸಿಎಂ‌ : ಸಿದ್ದರಾಮಯ್ಯ

ಬೆಂಗಳೂರು : ರಾಜ್ಯದ ಎಲ್ಲ 224 ಮಂದಿ ಶಾಸಕರೂ ಮುಖ್ಯ ಮಂತ್ರಿಯಾಗಲು ಅರ್ಹರಿದ್ದಾರೆ ಎಂದು ಹೇಳುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ…

2 hours ago

ಸರ್ಕಾರದ ಆದೇಶ ಕಡೆಗಣಿಸಿ ಏಕಾತ್ಮ ಮಾನವ ದರ್ಶನ ಸಮ್ಮೇಳನ

ಮೈಸೂರು : ಕರ್ನಾಟಕ ರಾಜ್ಯ ಮುಕ್ತ ವಿವಿಯಲ್ಲಿ ಆಯೋಜಿಸಿದ್ದ ಮೂರು ದಿನಗಳ 'ಏಕಾತ್ಮ ಮಾನವ ದರ್ಶನ: ಭಾರತದ ವಿಶ್ವದೃಷ್ಟಿ' ಎಂಬ…

2 hours ago

ಮಳವಳ್ಳಿ ದರೋಡೆ ಪ್ರಕರಣ : ನಾಲ್ವರು ಆರೋಪಿಗಳ ಬಂಧನ

ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…

16 hours ago

ಪ್ರಚೋದನಕಾರಿ ಭಾಷಣ ; ಯತ್ನಾಳ್, ಅನಂತ್ ಕುಮಾರ್ ಹೆಗ್ಡೆ ವಿರುದ್ಧ ದೂರು ದಾಖಲು

ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್‌ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…

16 hours ago