ರಾಜ್ಯ

ರಾಜ್ಯ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ : ಎಂ.ಪಿ ರೇಣುಕಾಚಾರ್ಯ

ಬೆಂಗಳೂರು : ಕರ್ನಾಟಕದ ಬಿಜೆಪಿಯಲ್ಲಿ ಕೆಲವರಿಗೆ ದುರಹಂಕಾರ ಬಂದಿದೆ. ಈ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ತಮ್ಮ ಪಕ್ಷದವರ ವಿರುದ್ಧವೇ ಹರಿಹಾಯ್ದರು. ಪಕ್ಷ ಸೋತ ನಂತರ ಎಲ್ಲರನ್ನೂ ಕರೆದು ಮಾತಾಡಿಸಬೇಕು. ಯಡಿಯೂರಪ್ಪ ಹಿಂದೆಲ್ಲ ಆ ಕೆಲಸ ಮಾಡಿದ್ರು. ಆದರೆ ಬಿಜೆಪಿಯಲ್ಲಿ ಕೆಲವರ ದುರಹಂಕಾರದಿಂದ ಬಹಳ ಜನ ಬೇಸತ್ತು ಹೋಗಿದ್ದಾರೆ ಎಂದು ಕಿಡಿಕಾರಿದರು.

ಬೇಸತ್ತು ಹೋಗಿರುವವರು ಮುಂದೆ ಪಕ್ಷ ಬಿಡಬಹುದು. ಯಡಿಯೂರಪ್ಪ ಅವರನ್ನು ಕಡೆಗಣಿಸಲಾಗಿದೆ ಅಂತ ಜನ ಮಾತನಾಡುತ್ತಿದ್ದಾರೆ. ನಾನು ಹೇಳುತ್ತಿಲ್ಲ, ಜನ ಹಾಗೆ ಹೇಳುತ್ತಿದ್ದಾರೆ. ಹಲವರು ಪಕ್ಷದಲ್ಲಿ ಮಾತಾಡಲು ಭಯಪಡುತ್ತಿದ್ದಾರೆ. ಬಿಜೆಪಿಗೆ ಮಧ್ಯದಲ್ಲಿ ಯಾರು ಬಂದಿದ್ದಾರೋ ಅವರ ಆಟವೇ ಜಾಸ್ತಿ ಆಗುತ್ತಿದೆ ಎಂದರು.

ರಾಜಕೀಯದಲ್ಲಿ ಗಾಡ್ ಫಾದರ್ ಬೇಕು. ಯಡಿಯೂರಪ್ಪ ಅವರಿಗೆ ಆ ಸಾಮರ್ಥ್ಯ ಇತ್ತು. ಯಡಿಯೂರಪ್ಪ ಅವರ ನಾಯಕತ್ವ ಪಕ್ಷ ಗಟ್ಟಿಗೊಳಿಸಿದೆ. ಈಗಿನ ಪರಿಸ್ಥಿತಿಗೆ ಈಗಾಗಲೇ ಕೆಲವರು ಪಕ್ಷದಿಂದ ಹೊರಗೆ ಹೋಗಿದ್ದಾರೆ. ಅಭದ್ರತೆಯಿಂದ ಯಾರು ಬೇಕಾದರೂ ಪಕ್ಷ ಬಿಟ್ ಹೋಗಬಹುದು. ಮೋದಿಯವ್ರು ಯಡಿಯೂರಪ್ಪ ಅವರನ್ನು ಕಡೆಗಣಿಸಿಲ್ಲ. ಮಧ್ಯದಲ್ಲಿ ಇರೋರು ಕೆಲವರು ಯಡಿಯೂರಪ್ಪ ಅವರನ್ನು ಕಡೆಗಣಿಸ್ತಿದ್ದಾರೆ ಎಂದರು.

ನಾನು ಯಡಿಯೂರಪ್ಪ ಗರಡಿಯಲ್ಲಿ ಬೆಳೆದವನು. ಬಿಜೆಪಿ ಬಿಡ್ತೇನೆ ಅಂತ ಎಲ್ಲೂ ಹೇಳಿಲ್ಲ. ಕಾಂಗ್ರೆಸ್ ಸೇರುತ್ತೇನೆ ಅಂತ ಹೇಳಿಲ್ಲ. ಪಕ್ಷ ಕಟ್ಟೋಣ ಅಂತ ಯಡಿಯೂರಪ್ಪ ಹೇಳಿದ್ದಾರೆ. ನಾವು ಕಾದು ನೋಡುತ್ತೇವೆ. ಆದರೆ ಪಕ್ಷ ಬಿಡುವ ಬಗ್ಗೆ ಕೆಲವರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಗರಂ ಆದರು.

lokesh

Recent Posts

ಹೋಟೆಲ್,ರೆಸ್ಟೋರೆಂಟ್‌ಗಳ ಮೇಲೆ ಮುಂದುವರೆದ ದಾಳಿ

ಬೆಂಗಳೂರು ನಂತರ ಮೈಸೂರು, ಮಂಗಳೂರಿನಲ್ಲೂ ಕಾರ್ಯಾಚರಣೆ ಬೆಂಗಳೂರು : ರಾಜ್ಯದಲ್ಲಿ ಆಹಾರದ ಗುಣಮಟ್ಟ ಮತ್ತು ನೈರ್ಮಲ್ಯದ ಕುರಿತು ಸಾರ್ವಜನಿಕರಿಂದ ಹೆಚ್ಚುತ್ತಿರುವ…

1 hour ago

ನಂ.ಗೂಡು | ಮತ್ತೆ ಕಳಚಿ ಬೀಳುತ್ತಿರುವ ಸೇತುವೆಯ ಸೀಲಿಂಗ್ ಕಾಂಕ್ರೀಟ್

ಮೂರೂ ದಿನಗಳಿಂದಲೂ ಸೇತುವೆಯತ್ತ ಮುಖ ಮಾಡದ ರೈಲ್ವೆ ಇಲಾಖೆ ನಂಜನಗೂಡು : ಮಹಾತ್ಮಾಗಾಂಧಿ ಶತಾಬ್ಧಿ ರಸ್ತೆಗೆ ನಿರ್ಮಿಸಿರುವ ರೈಲ್ವೆ ಕೆಳ…

4 hours ago

ರಾವಣನ ಪಾತ್ರವನ್ನ ನನಗಿಂತ ಉತ್ತಮವಾಗಿ ಯಾರೂ ಮಾಡಲು ಸಾಧ್ಯವಿಲ್ಲ : ಯಶ್

ಮುಂಬೈ : ‘ಟಾಕ್ಸಿಕ್’ ಮತ್ತು ‘ರಾಮಾಯಣ’ ಸಿನಿಮಾಗಳ ಕೆಲಸಗಳಲ್ಲಿ ನಿರತರಾಗಿರುವ ಯಶ್, ‘ರಾಮಾಯಣ’ ಸಿನಿಮಾದಲ್ಲಿ ಕೇವಲ ಸಹ-ನಿರ್ಮಾಪಕರಾಗಿ ಮಾತ್ರವಲ್ಲದೆ ʻರಾವಣʼನ…

4 hours ago

ರಾಜ್ಯಗಳಿಗೆ ನೀಡುವ ವಿಪತ್ತು ಪರಿಹಾರದಲ್ಲೂ ಕೇಂದ್ರದಿಂದ ವಂಚನೆ : ಸಿಎಜಿ ವರದಿ

ಬೆಂಗಳೂರು : ಭೂಕುಸಿತ, ಬರದಂತಹ ಭೀಕರ ಪ್ರಕೃತಿ ವಿಕೋಪಗಳಿಂದ ಕಂಗಾಲಾಗಿರುವ ರಾಜ್ಯಗಳಿಗೆ ಕೇಂದ್ರ ಸರ್ಕಾರದಿಂದ ಸಿಗಬೇಕಾದ ವಿಪತ್ತು ಪರಿಹಾರ ಅನುದಾನದಲ್ಲಿ…

5 hours ago

ಶಾಸಕರ ಭರವಸೆ ಬಳಿಕ ಪ್ರತಿಭಟನೆ ಹಿಂಪಡೆತ : ಮೃತರ ಕುಟುಂಬಕ್ಕೆ ತಲಾ ₹15 ಲಕ್ಷ ಪರಿಹಾರ

ಹನೂರು: ಕಾವೇರಿ ವನ್ಯಜೀವಿಧಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ದಾಳಿಗೆ ಮೃತಪಟ್ಟ ಕುಟುಂಬಗಳಿಗೆ ಸರ್ಕಾರಿ ಉದ್ಯೋಗ, ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸ ಹಾಗೂ ಸೂಕ್ತ…

7 hours ago

ವಾರಣಾಸಿ ಏರ್‌ಫೋರ್ಟ್‌ | ಶಸ್ತ್ರಾಸ್ತ್ರ ತಪಾಸಣೆ ವೇಳೆ ಆಕಸ್ಮಿಕ ಗುಂಡಿನ ದಾಳಿ ; ಇಬ್ಬರಿಗೆ ಗಾಯ

ವಾರಣಾಸಿ : ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ಬೆಳಿಗ್ಗೆ ನಡೆದ ಆಘಾತಕಾರಿ ಘಟನೆಯೊಂದರಲ್ಲಿ, ಶಸ್ತ್ರಾಸ್ತ್ರ ತಪಾಸಣೆಯ…

8 hours ago