dk shivkumar
ಬೆಂಗಳೂರು: ನಾನು ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ. ಹೀಗಾಗಿ ಪಕ್ಷದ ವಕ್ತಾರರಿಂದ ಹೇಳಿಕೆ ಕೊಡಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮೈಸೂರು ದಸರಾ ಕುರಿತು ತಾವು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ನಾನು ಕೆಲವು ಸತ್ಯಗಳನ್ನು ಹೇಳಿದರೆ ಕೆಲವರು ಸಹಿಸುವುದಿಲ್ಲ. ಪ್ರಮೋದ ದೇವಿಯವರಾಗಲೀ, ಯದುವೀರ್ ಆಗಲೀ, ವಿಧಾನಸಭೆಯಲ್ಲಾಗಲೀ ನಾನು ಆಡುವ ಮಾತುಗಳಲ್ಲಿ ತಪ್ಪು ಕಂಡುಹಿಡಿಯುವುದೇ ದೊಡ್ಡ ಕೆಲಸವಾಗಿದೆ.
ನನ್ನ ವಿಚಾರವಾಗಿ ಏನೋ ನಡೆಯುತ್ತಿದೆ. ಅದಕ್ಕಾಗಿ ನಾನು ಮಾತನಾಡದೇ ಇರುವುದೇ ಉತ್ತಮ. ಪಕ್ಷದ ಬೇರೆ ನಾಯಕರು ಹಾಗೂ ವಕ್ತಾರರಿದ್ದಾರೆ. ಅವರಿಂದ ಮಾತನಾಡಿಸುವುದೇ ಸೂಕ್ತ ಎಂದರು.
ಡಿ.ಕೆ.ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಗಳು ತೀವ್ರ ಸಂಚಲನ ಸೃಷ್ಟಿಸಿದ್ದು, ಭಾರೀ ವಿವಾದ ಮೂಡಿಸಿವೆ. ಧರ್ಮಸ್ಥಳದ ಕುರಿತಂತೆ ಎಸ್ಐಟಿ ತನಿಖೆ ಪ್ರಗತಿಯಲ್ಲಿರುವಾಗಲೇ ಡಿ.ಕೆ.ಶಿವಕುಮಾರ್ ಷಡ್ಯಂತ್ರ ನಡೆದಿದೆ ಎಂದು ಹೇಳಿ ತನಿಖೆಯ ದಿಕ್ಕನ್ನು ಬದಲಾಯಿಸಿದರು. ಚಾಮುಂಡೇಶ್ವರಿ ದೇವಸ್ಥಾನ ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ಹೇಳುವ ಮೂಲಕ ಮತ್ತಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇದು ಬಿಜೆಪಿಯವರ ಕೆಂಗಣ್ಣಿಗೂ ಗುರಿಯಾಗಿದ್ದು ತೀಕ್ಷ್ಣ ಪ್ರತಿಕ್ರಿಯೆಗಳು ಕಂಡು ಬರುತ್ತಿವೆ.
ಈ ಸಂಬಂಧಪಟ್ಟಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಈ ವಿಚಾರವಾಗಿ ಮಾತನಾಡದೆ ಇರುವುದೇ ಕ್ಷೇಮ ಎಂದು ಪ್ರತಿಕ್ರಿಯಿಸಿದ್ದಾರೆ. ದಸರಾ ಸಮೀಪಿಸುತ್ತಿರುವ ಸಂದರ್ಭದಲ್ಲಿ ಅನಗತ್ಯ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬಂದಂತಿದೆ.
ಮಂಡ್ಯ: ಮನೆಯ ಮುಂದಿನ ನೀರಿನ ಸಂಪ್ಗೆ ಬಿದ್ದು ಮಗು ಸಾವನ್ನಪ್ಪಿರುವ ಘಟನೆ ಪಾಂಡವಪುರ ತಾಲ್ಲೂಕಿನ ಲಕ್ಷ್ಮೀಸಾಗರ ಗ್ರಾಮದಲ್ಲಿ ನಡೆದಿದೆ. ಗ್ರಾಮದ…
ಗುಂಡ್ಲುಪೇಟೆ: ರಾಷ್ಟ್ರೀಯ ಹೆದ್ದಾರಿ ಮೈಸೂರು-ಊಟಿ ರಸ್ತೆಯ ಗುಂಡ್ಲುಪೇಟೆ ತಾಲ್ಲೂಕಿನ ಮಳವಳ್ಳಿ ಗೇಟ್ ಬಳಿ ಗೂಡ್ಸ್ ಲಾರಿ ಹಾಗೂ ಕೆಎಸ್ಆರ್ಟಿಸಿ ಬಸ್…
ಬೆಟ್ಟದಪುರ: ಸಿಡಿಲು ಬಡಿದು ರೈತನೊಬ್ಬ ಮೃತಪಟ್ಟಿರುವ ಘಟನೆ ಪಿರಿಯಾಪಟ್ಟಣ ತಾಲ್ಲೂಕಿನ ಸಂಗರಶೆಟ್ಟಹಳ್ಳಿ ಗ್ರಾಮದಲ್ಲಿ ಶುಕ್ರವಾರ ನಡೆದಿದೆ. ಗ್ರಾಮದ ಎಸ್.ಟಿ.ಆನಂದ್ (೬೦)…
ಗುಂಡ್ಲುಪೇಟೆ: ಟಾಟಾ ಏಸ್ ಹಾಗೂ ಬೈಕ್ ನಡುವೆ ಅಪಘಾತವಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲ್ಲೂಕಿನ ಚಾಮರಾಜನಗರ-ಗುಂಡ್ಲುಪೇಟೆ ರಸ್ತೆಯ…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಫ್ರಾನ್ಸ್ ಮತ್ತು ಸ್ಲೊವಾಕಿಯಾಕ್ಕೆ ಒಂದು ವಾರದ ಭೇಟಿಗಾಗಿ ತೆರಳಿದ್ದಾರೆ. ಈ ಸಂದರ್ಭದಲ್ಲಿ…
ಉಡುಪಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಇಂದು ಉಡುಪಿಯ ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ಶ್ರೀಕೃಷ್ಣನ ದರ್ಶನ…