dk shivkumar
ಬೆಂಗಳೂರು: ನಾನು ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ. ಹೀಗಾಗಿ ಪಕ್ಷದ ವಕ್ತಾರರಿಂದ ಹೇಳಿಕೆ ಕೊಡಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮೈಸೂರು ದಸರಾ ಕುರಿತು ತಾವು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ನಾನು ಕೆಲವು ಸತ್ಯಗಳನ್ನು ಹೇಳಿದರೆ ಕೆಲವರು ಸಹಿಸುವುದಿಲ್ಲ. ಪ್ರಮೋದ ದೇವಿಯವರಾಗಲೀ, ಯದುವೀರ್ ಆಗಲೀ, ವಿಧಾನಸಭೆಯಲ್ಲಾಗಲೀ ನಾನು ಆಡುವ ಮಾತುಗಳಲ್ಲಿ ತಪ್ಪು ಕಂಡುಹಿಡಿಯುವುದೇ ದೊಡ್ಡ ಕೆಲಸವಾಗಿದೆ.
ನನ್ನ ವಿಚಾರವಾಗಿ ಏನೋ ನಡೆಯುತ್ತಿದೆ. ಅದಕ್ಕಾಗಿ ನಾನು ಮಾತನಾಡದೇ ಇರುವುದೇ ಉತ್ತಮ. ಪಕ್ಷದ ಬೇರೆ ನಾಯಕರು ಹಾಗೂ ವಕ್ತಾರರಿದ್ದಾರೆ. ಅವರಿಂದ ಮಾತನಾಡಿಸುವುದೇ ಸೂಕ್ತ ಎಂದರು.
ಡಿ.ಕೆ.ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಗಳು ತೀವ್ರ ಸಂಚಲನ ಸೃಷ್ಟಿಸಿದ್ದು, ಭಾರೀ ವಿವಾದ ಮೂಡಿಸಿವೆ. ಧರ್ಮಸ್ಥಳದ ಕುರಿತಂತೆ ಎಸ್ಐಟಿ ತನಿಖೆ ಪ್ರಗತಿಯಲ್ಲಿರುವಾಗಲೇ ಡಿ.ಕೆ.ಶಿವಕುಮಾರ್ ಷಡ್ಯಂತ್ರ ನಡೆದಿದೆ ಎಂದು ಹೇಳಿ ತನಿಖೆಯ ದಿಕ್ಕನ್ನು ಬದಲಾಯಿಸಿದರು. ಚಾಮುಂಡೇಶ್ವರಿ ದೇವಸ್ಥಾನ ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ಹೇಳುವ ಮೂಲಕ ಮತ್ತಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇದು ಬಿಜೆಪಿಯವರ ಕೆಂಗಣ್ಣಿಗೂ ಗುರಿಯಾಗಿದ್ದು ತೀಕ್ಷ್ಣ ಪ್ರತಿಕ್ರಿಯೆಗಳು ಕಂಡು ಬರುತ್ತಿವೆ.
ಈ ಸಂಬಂಧಪಟ್ಟಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಈ ವಿಚಾರವಾಗಿ ಮಾತನಾಡದೆ ಇರುವುದೇ ಕ್ಷೇಮ ಎಂದು ಪ್ರತಿಕ್ರಿಯಿಸಿದ್ದಾರೆ. ದಸರಾ ಸಮೀಪಿಸುತ್ತಿರುವ ಸಂದರ್ಭದಲ್ಲಿ ಅನಗತ್ಯ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬಂದಂತಿದೆ.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…