dk shivkumar
ಬೆಂಗಳೂರು: ನಾನು ಸತ್ಯ ಹೇಳಿದರೆ ಕೆಲವರು ಸಹಿಸುವುದಿಲ್ಲ. ಹೀಗಾಗಿ ಪಕ್ಷದ ವಕ್ತಾರರಿಂದ ಹೇಳಿಕೆ ಕೊಡಿಸುವುದಾಗಿ ಕೆಪಿಸಿಸಿ ಅಧ್ಯಕ್ಷ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಮೈಸೂರು ದಸರಾ ಕುರಿತು ತಾವು ನೀಡಿದ ಹೇಳಿಕೆ ವಿವಾದಕ್ಕೆ ಕಾರಣವಾದ ಬೆನ್ನಲ್ಲೇ ಪ್ರತಿಕ್ರಿಯಿಸಿದ ಅವರು, ನಾನು ಕೆಲವು ಸತ್ಯಗಳನ್ನು ಹೇಳಿದರೆ ಕೆಲವರು ಸಹಿಸುವುದಿಲ್ಲ. ಪ್ರಮೋದ ದೇವಿಯವರಾಗಲೀ, ಯದುವೀರ್ ಆಗಲೀ, ವಿಧಾನಸಭೆಯಲ್ಲಾಗಲೀ ನಾನು ಆಡುವ ಮಾತುಗಳಲ್ಲಿ ತಪ್ಪು ಕಂಡುಹಿಡಿಯುವುದೇ ದೊಡ್ಡ ಕೆಲಸವಾಗಿದೆ.
ನನ್ನ ವಿಚಾರವಾಗಿ ಏನೋ ನಡೆಯುತ್ತಿದೆ. ಅದಕ್ಕಾಗಿ ನಾನು ಮಾತನಾಡದೇ ಇರುವುದೇ ಉತ್ತಮ. ಪಕ್ಷದ ಬೇರೆ ನಾಯಕರು ಹಾಗೂ ವಕ್ತಾರರಿದ್ದಾರೆ. ಅವರಿಂದ ಮಾತನಾಡಿಸುವುದೇ ಸೂಕ್ತ ಎಂದರು.
ಡಿ.ಕೆ.ಶಿವಕುಮಾರ್ ಅವರ ಇತ್ತೀಚಿನ ಹೇಳಿಕೆಗಳು ತೀವ್ರ ಸಂಚಲನ ಸೃಷ್ಟಿಸಿದ್ದು, ಭಾರೀ ವಿವಾದ ಮೂಡಿಸಿವೆ. ಧರ್ಮಸ್ಥಳದ ಕುರಿತಂತೆ ಎಸ್ಐಟಿ ತನಿಖೆ ಪ್ರಗತಿಯಲ್ಲಿರುವಾಗಲೇ ಡಿ.ಕೆ.ಶಿವಕುಮಾರ್ ಷಡ್ಯಂತ್ರ ನಡೆದಿದೆ ಎಂದು ಹೇಳಿ ತನಿಖೆಯ ದಿಕ್ಕನ್ನು ಬದಲಾಯಿಸಿದರು. ಚಾಮುಂಡೇಶ್ವರಿ ದೇವಸ್ಥಾನ ಕೇವಲ ಹಿಂದೂಗಳ ಆಸ್ತಿಯಲ್ಲ ಎಂದು ಹೇಳುವ ಮೂಲಕ ಮತ್ತಷ್ಟು ವಿವಾದಗಳನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಇದು ಬಿಜೆಪಿಯವರ ಕೆಂಗಣ್ಣಿಗೂ ಗುರಿಯಾಗಿದ್ದು ತೀಕ್ಷ್ಣ ಪ್ರತಿಕ್ರಿಯೆಗಳು ಕಂಡು ಬರುತ್ತಿವೆ.
ಈ ಸಂಬಂಧಪಟ್ಟಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಈ ವಿಚಾರವಾಗಿ ಮಾತನಾಡದೆ ಇರುವುದೇ ಕ್ಷೇಮ ಎಂದು ಪ್ರತಿಕ್ರಿಯಿಸಿದ್ದಾರೆ. ದಸರಾ ಸಮೀಪಿಸುತ್ತಿರುವ ಸಂದರ್ಭದಲ್ಲಿ ಅನಗತ್ಯ ವಿವಾದಗಳನ್ನು ಮೈಮೇಲೆ ಎಳೆದುಕೊಳ್ಳುವುದು ಬೇಡ ಎಂಬ ನಿರ್ಧಾರಕ್ಕೆ ಡಿ.ಕೆ.ಶಿವಕುಮಾರ್ ಬಂದಂತಿದೆ.
೨೦೨೫-೨೬ನೇ ಸಾಲಿಗೆ ಕನ್ನಡ ಪುಸ್ತಕ ಪ್ರಾಧಿಕಾರವು ಅರ್ಹ ಸಾಹಿತಿಗಳಿಗೆ ಪ್ರಶಸ್ತಿಯನ್ನು ಪ್ರಕಟಿಸಿದ್ದು ಅದರಲ್ಲಿ ಇದೇ ಮೊದಲ ಬಾರಿಗೆ ಚುಟುಕು ಸಾಹಿತ್ಯಕ್ಕೂ…
ಎಚ್.ಹಾಲಪ್ಪ ಅಸಮಾನತೆ, ಶೋಷಣೆ, ಅಂಧಶ್ರದ್ಧೆ ವಿರುದ್ಧ ವಚನ ರಚಿಸಿದ ಹಡಪದ ಅಪ್ಪಣ್ಣ ಜಯಂತಿ ಇಂದು ೧೨ನೇ ಶತಮಾನದ ವಚನ ಚಳವಳಿ…
ಶ್ರೇಯಸ್ ದೇವನೂರು, ವನ್ಯಜೀವಿ ಛಾಯಾಗ್ರಾಹಕ ಜುಲೈ ೨೯ರಂದು ವಿಶ್ವ ಹುಲಿ ದಿನವನ್ನು ಆಚರಿಸುವಾಗ, ಭಾರತದ ಹುಲಿ ಸಂರಕ್ಷಣೆಯ ಯಶಸ್ಸನ್ನು ನಾವು…
‘ಸಪೋರ್ಟ್ ಅವರ್ ಹೀರೋಸ್’ ಸರ್ಕಾರೇತರ ಸಂಸ್ಥೆ ಸ್ಥಾಪನೆ ೩೬ವರ್ಷ ಪ್ರಾಯದ ಗೌರವ್ ಶುಕ್ಲಾ(ಕುಳಿತವರಲ್ಲಿ ಎಡ ಬದಿ)ರ ತಂದೆ ೨೮ ವರ್ಷಗಳ…
ಲಕ್ಷ್ಮೀಕಾಂತ್ ಕೊಮಾರಪ್ಪ ಸೋಮವಾರಪೇಟೆ: ತಾಲ್ಲೂಕಿನ ಪ್ರಮುಖ ಪ್ರವಾಸಿ ತಾಣಗಳಲ್ಲಿ ಒಂದಾದ ಮಲ್ಲಳ್ಳಿ ಜಲಪಾತದಲ್ಲಿ ಬಹುನಿರೀಕ್ಷಿತ ರೋಪ್ವೇ ಯೋಜನೆಗೆ ವೇಗ ದೊರೆತಿದೆ.…
ಕೆ.ಬಿ.ರಮೇಶನಾಯಕ ಮೈಸೂರು: ಹಲವು ರೋಗಗಳಿಗೆ ರಾಮಬಾಣವಾದ ಹಾಗೂ ಆರೋಗ್ಯಕ್ಕೆ ಹಿತಕರ ಎನ್ನಲಾಗಿರುವ ಮೀನು ಆಹಾರವನ್ನು ಜನಸಾಮಾನ್ಯರಿಗೆ ಸುಲಭವಾಗಿ ದೊರೆಯುವಂತೆ ಮಾಡಲು…