ರಾಜ್ಯ

ಬೆಂಗಳೂರು-ಮೈಸೂರು ರೈಲು ಮಾರ್ಗದಲ್ಲಿ ಹಲವು ರೈಲುಗಳ ಓಡಾಟ ರದ್ದು: ಯಾಕೆ ಗೊತ್ತಾ?

ಬೆಂಗಳೂರು : ಬೆಂಗಳೂರು-ಮೈಸೂರು ನಡುವಿನ ರೈಲು ಸಂಚಾರದಲ್ಲಿ ಹಲವಾರು ಮಹತ್ವದ ಬದಲಾವಣೆಗಳಾಗಿದ್ದು, ಪ್ರಯಾಣಿಕರು ಇತ್ತ ಗಮನ ಹರಿಸಬೇಕಿದೆ. ಈ ಮಾರ್ಗದ ಹಲವು ರೈಲುಗಳ ಸೇವೆಯನ್ನು ತಾತ್ಕಾಲಿಕವಾಗಿ ಮತ್ತು ಭಾಗಶಃವಾಗಿ ರುದ್ದುಗೊಳಿಸಲಾಗಿದೆ.

ನೈಋತ್ಯ ರೈಲ್ವೆ ಈ ಕುರಿತು ಪತ್ರಿಕಾ ಪ್ರಕಟಣೆ ಮೂಲಕ ಮಾಹಿತಿ ನೀಡಿದ್ದು, ಕೆಂಗೇರಿ-ಹೆಜ್ಜಾಲ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ ನಂ 15ರ ಬಳಿಯ ಕಾಮಗಾರಿ ಹಿನ್ನಲೆಯಲ್ಲಿ ಕೆಲವು ರೈಲುಗಳ ಸಂಚಾರ ರದ್ದಾಗಿದೆ, ಇನ್ನು ಕೆಲವು ಭಾಗಶಃ ರದ್ದುಗೊಂಡಿವೆ. ಇದಕ್ಕೆ ಪ್ರಯಾಣಿಕರ ಸಹಕಾರ ನೀಡಬೇಕು ಎಂದು ನೈರುತ್ಯ ರೈಲ್ವೆ ಮನವಿ ಮಾಡಿದೆ.

ರದ್ದುಗೊಂಡಿರುವ ರೈಲುಗಳ ಪಟ್ಟಿ
ಮಾ. ೬, ೦೭: ೧೬೦೨೧ ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್- ಮೈಸೂರು ಎಕ್ಸ್‌ಪ್ರೆಸ್
ಮಾ. ೭, ೦೮: ೨೦೬೨೩ ಮೈಸೂರು-ಕೆಎಸ್‌ಆರ್ ಬೆಂಗಳೂರು ಎಕ್ಸ್‌ಪ್ರೆಸ್
ಮಾ. ೭, ೦೮: ೨೦೬೨೪ ಕೆಎಸ್‌ಆರ್ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್
ಮಾ. ೭, ೦೮: ೧೬೦೨೨ ಮೈಸೂರು- ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಎಕ್ಸ್‌ಪ್ರೆಸ್
ಮಾ. ೭, ೦೮: ೦೬೨೬೭ ಅರಸೀಕೆರೆ-ಮೈಸೂರು ಪ್ರತಿದಿನದ ಎಕ್ಸ್‌ಪ್ರೆಸ್ ರೈಲು
ಮಾ. ೭, ೧೨: ೦೬೨೬೯ ಮೈಸೂರು- ಎಸ್‌ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್
ಮಾ. ೭, ೧೨: ೦೬೫೬೦ ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು
ಮಾ. ೭, ೧೨: ೦೬೨೭೦ ಎಸ್‌ಎಂವಿಟಿ ಬೆಂಗಳೂರು- ಮೈಸೂರು ವಿಶೇಷ ಎಕ್ಸ್‌ಪ್ರೆಸ್
ಮಾ. ೭, ೧೨: ೦೬೨೬೮ ಮೈಸೂರು-ಅರಸೀಕೆರೆ ಪ್ರತಿ ದಿನದ ವಿಶೇಷ ಎಕ್ಸ್‌ಪ್ರೆಸ್
ಮಾ. ೭, ೧೨ರಂದು ಚನ್ನಪಟ್ಟಣ ಮತ್ತು ಕೆಎಸ್‌ಆರ್ ಬೆಂಗಳೂರು
ಮಾ. ೮, ೧೩ ೦೬೫೫೯ ಕೆಎಸ್‌ಆರ್ ಬೆಂಗಳೂರು-ಮೈಸೂರು ಮೆಮು ವಿಶೇಷ ರೈಲು
ಮಾ. ೮, ೧೩ ೦೧೭೬೩ ಕೆಎಸ್‌ಆರ್ ಬೆಂಗಳೂರು-ಚನ್ನಪಟ್ಟಣ ಮೆಮು ಸ್ಪೆಷಲ್
ಮಾ. ೮, ೧೩ ೦೬೫೨೬ ಮೈಸೂರು-ಕೆಎಸ್‌ಆರ್ ಬೆಂಗಳೂರು ಮೆಮು ವಿಶೇಷ ರೈಲು

andolana

Recent Posts

ಅಲರ್ಟ್‌ ಆದ ಲಾಟ್ಕರ್‌ : ಡ್ರಗ್ಸ್‌ ಜಾಲಮುಕ್ತಕ್ಕೆ ಪಣ : ದಿಢೀರ್‌ ದಾಳಿ

ಮೈಸೂರು : ನಗರವನ್ನು ಡ್ರಗ್ಸ್ ಜಾಲಮುಕ್ತ ಮಾಡಬೇಕು ಎಂಬ ತೀರ್ಮಾನಕ್ಕೆ ಬಂದಿರುವ ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್ ಅವರು…

7 hours ago

ಫೆ.8ರಂದು ಸ್ವಚ್ಛತಾ ಓಟ : ʻಓಡೋಣ ಮೈಸೂರಿಗಾಗಿ-ಒಂದಾಗೋಣ ಸ್ವಚ್ಛತೆಗಾಗಿʼ

ಮೈಸೂರು : ಸ್ವಚ್ಛತೆಗೆ ಸಂಬಂಧಿಸಿದಂತೆ ಮತ್ತೆ ಒಂದನೇ ಸ್ಥಾನ ಪಡೆಯುವ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ಸಲುವಾಗಿ ನಗರಪಾಲಿಕೆ ವತಿಯಿಂದ…

8 hours ago

ಗ್ರಾಮ ಪಂಚಾಯ್ತಿ ಅಧಿಕಾರ ಅವಧಿ ಮುಕ್ತಾಯ : ಈಗಿರುವ ಸದಸ್ಯರನ್ನೇ ಮುಂದುವರೆಸುತ್ತಾ ಸರ್ಕಾರ?

ಬೆಂಗಳೂರು : ಮಾರ್ಚ್ ಅಂತ್ಯದೊಳಗೆ ಎಲ್ಲಾ ಗ್ರಾಮ ಪಂಚಾಯಿತಿ ಸದಸ್ಯರ ಅಧಿಕಾರ ಅವಧಿ ಮುಕ್ತಾಯವಾಗಲಿರುವುದರಿಂದ ಗ್ರಾಮ ಪಂಚಾಯಿತಿ ಚುನಾವಣೆಗೆ ಸಿದ್ಧತೆ…

9 hours ago

ಪ್ರತ್ಯೇಕ ಕಳವು ಪ್ರಕರಣ : 11 ಮಂದಿ ಬಂಧನ

19 ಬೈಕ್, ಚಿನ್ನಾಭರಣ ಸೇರಿದಂತೆ 34 ಲಕ್ಷ ರೂ.ಮೌಲ್ಯದ ವಸ್ತುಗಳು ವಶ : ಎಸ್‌ಪಿ ಶೋಭಾರಾಣಿ ಮಂಡ್ಯ : ಮಳವಳ್ಳಿಯಲ್ಲಿ…

10 hours ago

ಪರೀಕ್ಷೆ ಮುಗಿದ ದಿನವೇ ಫಲಿತಾಂಶ ಪ್ರಕಟಿಸಿದ ಮಹಿಳಾ ಸರ್ಕಾರಿ ಕಾಲೇಜು!

ಮಂಡ್ಯ : ನಗರದ ಮಹಿಳಾ ಸರ್ಕಾರಿ ಕಾಲೇಜು (ಸ್ವಾಯುತ್ತ) ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ನಿರ್ಮಿಸಿದ್ದು 2025-26ನೇ ಸಾಲಿನ ವಿವಿಧ…

10 hours ago

ಮಂಡ್ಯ ಜಿಲ್ಲೆಯ ರಾಷ್ಟೀಯ ಹೆದ್ದಾರಿಗಳ ಕಾಮಗಾರಿ ಶೀಘ್ರ ಮುಕ್ತಾಯಗೊಳಿಸಿ : ಸಚಿವ ಎನ್.ಚಲುವರಾಯಸ್ವಾಮಿ

ಬೆಂಗಳೂರು : ಮಂಡ್ಯ ಜಿಲ್ಲೆ ಮೂಲಕ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಆದಷ್ಟು ಶೀಘ್ರವಾಗಿ ಮುಕ್ತಾಯಗೊಳಿಸುವಂತೆ ಕೃಷಿ ಸಚಿವರು…

10 hours ago