ಚಿಕ್ಕೋಡಿ: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಬಿಜೆಪಿ ಸೋಲಲು ಪುತ್ರ ವ್ಯಾಮೋಹವೇ ಕಾರಣವಾಗಿದೆ. ಈ ಬಗ್ಗೆ ಹೈಕಮಾಂಡ್ ಗಂಭೀರವಾಗಿ ಚರ್ಚೆ ಮಾಡಬೇಕು ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಬೇಸರ ವ್ಯಕ್ತಪಡಿಸಿದ್ದಾರೆ.
ಕಬ್ಬೂರು ಗ್ರಾಮದಲ್ಲಿ ಇಂದು(ನ.23) ಉಪಚುನಾವಣೆಯ ಫಲಿತಾಂಶದ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿಗ್ಗಾಂವಿ ಕ್ಷೇತ್ರದಲ್ಲಿ ಭರತ ಬೊಮ್ಮಾಯಿಯ ಸೋಲು ಆಘಾತ ತಂದಿದೆ. ಮತದಾರರು ಒಬ್ಬ ರೌಡಿಯನ್ನು ಆಯ್ಕೆ ಮಾಡಿದ್ದಾರೆಂದರೆ ಏನು ಅರ್ಥ? ವಿಜಯೇಂದ್ರ ನಾಯಕತ್ವವನ್ನು ಮತದಾರರು ತಿರಸ್ಕಾರ ಮಾಡಿದ್ದಾರೆ. ಅವರಿಗೆ ನಿಜವಾಗಲು ಸ್ವಾಭಿಮಾನವಿದ್ದರೆ ಅವರೇ ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಿಡಿಕಾರಿದ್ದಾರೆ.
ರಾಜ್ಯದ ಬಿಜೆಪಿಯಲ್ಲಿ ಹೊಸ ನಾಯಕತ್ವ ಬೇಕಿದ್ದು, ಈ ಬಗ್ಗೆ ಹೈಕಮಾಂಡ್ ಸೂಕ್ತ ನಿರ್ಧಾರ ಕೈಗೊಳ್ಳಬೇಕು. ಚನ್ನಪಟ್ಟಣ ಕ್ಷೇತ್ರದಲ್ಲಿ ಎನ್ಡಿಎ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಸೋತಿರುವುದು ದುರ್ದೈವವಾಗಿದೆ. ಬಿಜೆಪಿಯಿಂದ ಯೋಗೇಶ್ವರ್ಗೆ ಟಿಕೆಟ್ ನೀಡುವಂತೆ ಹೇಳಿದ್ದೆ. ಆದರೆ ಪುತ್ರ ವ್ಯಾಮೋಹದಿಂದ ಅವರಿಗೆ ಟಿಕೆಟ್ ನೀಡದೆ ಕಾಂಗ್ರೆಸ್ಗೆ ಪಕ್ಷಾಂತರವಾಗುವಂತೆ ಮಾಡಿದರು. ಹೀಗಾಗಿ ಕುಮಾರಸ್ವಾಮಿ ಪಕ್ಷ ಸಂಘಟನೆ ಮಾಡುವಾಗ ಯೋಚನೆ ಮಾಡಿ ಸಂಘಟನೆ ಮಾಡಬೇಕು ಎಂದು ಹೇಳಿದ್ದಾರೆ.
ಬಿಜೆಪಿಯಿಂದ ರಾಜ್ಯಾದ್ಯಂತ ವಕ್ಫ್ ಹೋರಾಟ ಪ್ರಾರಂಭವಾಗಿದ್ದು, ಪ್ರತಿ ಜಿಲ್ಲೆಯಲ್ಲೂ ಜಾಗೃತಿ ಮೂಡಿಸುತ್ತೇವೆ. ಕಾಂಗ್ರೆಸ್ ಮುಂದಿನ ಚುನಾವಣೆಯಲ್ಲಿಯೂ ಗೆಲುವು ಸಾಧಿಸಿದರೆ ರೈತರ ಜಮೀನು ಸಿಗುವುದಿಲ್ಲ. ಹೀಗಾಗಿ ಹೈಕಮಾಂಡ್ ಬಳಿ ವಿಜಯೇಂದ್ರ ವಿರುದ್ಧ ನಿಯೋಗ ತೆರಳಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರ ಕಣ್ಣು ತೆರೆಸುವ ಕಾರ್ಯ ಮಾಡುತ್ತೇವೆ ಎಂದು ತಿಳಿಸಿದ್ದಾರೆ.
ಯಶಸ್ವಿ ಪ್ರದರ್ಶನದೊಂದಿಗೆ ಮುನ್ನುಗ್ಗುತ್ತಿರುವ ರಣವೀರ್ ಸಿಂಗ್ ಅಭಿನಯದ ಧುರಂಧರ್-2 ದಾಖಲೆಗಳನ್ನು ಮುರಿಯುತ್ತಿದೆ. ನಾಲ್ಕು ದಿನಗಳ ಹಿಂದೆ ಬಿಡುಗಡೆಯಾದ ಚಿತ್ರವು ಬಾಕ್ಸಾಫೀಸ್ನಲ್ಲಿ…
ವಾಷಿಂಗ್ಟನ್: ಅಮೇರಿಕಾದ ಜೊತೆ ಮಾತುಕತೆ ನಡೆಸಲು ಇರಾನಿನ ಹೊಸ ಸರ್ವೋಚ್ಛ ನಾಯಕ ಮೊಜ್ತಬಾ ಖಮೇನಿ ಒಪ್ಪಿಕೊಂಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.…
ಬೆಂಗಳೂರು: ಶಿವಮೊಗ್ಗದ ತ್ಯಾವರೆಕೊಪ್ಪ ಮೃಗಾಲಯದಲ್ಲಿ ನೀರಾನೆ ದಾಳಿಯಿಂದ ಮೃತಪಟ್ಟ ಯುವ ಪಶುವೈದ್ಯೆ ಸಮೀಕ್ಷಾ ರೆಡ್ಡಿ ಸಾವಿಗೆ ನ್ಯಾಯ ದೊರಕಿಸಲಾಗುವುದು ಎಂದು…
ಬೆಂಗಳೂರು: ರಾಜ್ಯದ ಹಣಕಾಸು ಪರಿಸ್ಥಿತಿ ಇಷ್ಟು ಚಿಂತಾಜನಕವಾಗಿರುವಾಗ ಹೈಕಮಾಂಡ್ ನಾಯಕರನ್ನು ಮೆಚ್ಚಿಸಿ ಕುರ್ಚಿ ಉಳಿಸಿಕೊಳ್ಳಲು ನೆರೆ ರಾಜ್ಯಕ್ಕೆ 10 ಕೋಟಿ…
ನವದೆಹಲಿ: ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮಗಳಿಗೆ ಸೇರಿದ ವ್ಯಕ್ತಿಗಳು ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನವನ್ನು ಪಡೆಯಬಹುದು. ಕ್ರಿಶ್ಚಿಯನ್ ಧರ್ಮದಂತಹ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಏಪ್ರಿಲ್.1ರಿಂದ ವನ್ಯಜೀವಿ ವಿಭಾಗದ ಹಂಗಾಮಿ ನೌಕರರು ಮುಷ್ಕರಕ್ಕೆ ಮುಂದಾಗಿದ್ದಾರೆ. ಈ ಕುರಿತು ದಿನಗೂಲಿ…