ಟಿಕೆಟ್ ಇಲ್ಲದೇ ರೈಲಿನಲ್ಲಿ ಪ್ರಯಾಣಿಸುವ ಕಿಡಿಗೇಡಿಗಳಿಗೆ ರೈಲ್ವೆ ಇಲಾಖೆ ದಂಡದ ಬಿಸಿ ಮುಟ್ಟಿಸಿದೆ. ಏಪ್ರಿಲ್ 1ರಿಂದ ಡಿಸೆಂಬರ್ 31ರವರೆಗೆ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ ಒಟ್ಟು 6,27,014 ಜನರಿಂದ ನೈಋತ್ಯ ರೈಲ್ವೆ ಬರೋಬ್ಬರಿ 46.31 ಕೋಟಿ ದಂಡವನ್ನು ವಸೂಲಿ ಮಾಡಿದೆ.
ಇನ್ನು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ದಂಡ ಸಂಗ್ರಹಣೆಯಲ್ಲಿ ಶೇ. 9.95ರಷ್ಟು ಏರಿಕೆ ಕಂಡುಬಂದಿದೆ. ಡಿಸೆಂಬರ್ ತಿಂಗಳೊಂದರಲ್ಲಿಯೇ 72,041 ಪ್ರಕರಣಗಳಿದ್ದು, 5.13 ಕೋಟಿ ರೂಪಾಯಿ ದಂಡ ವಸೂಲಿಯಾಗಿದೆ. ಹುಬ್ಬಳ್ಳಿ, ಬೆಂಗಳೂರು ಹಾಗೂ ಮೈಸೂರು ವಿಭಾಗಗಳಲ್ಲಿ ಎಷ್ಟು ಪ್ರಕರಣಗಳು ಪತ್ತೆಯಾಗಿವೆ ಹಾಗೂ ಇವುಗಳಿಂದ ವಸೂಲಿಯಾದ ದಂಡದ ಮೊತ್ತವೆಷ್ಟು ಎಂಬ ಮಾಹಿತಿ ಈ ಕೆಳಕಂಡಂತಿದೆ.
ಬೆಂಗಳೂರು ವಿಭಾಗ: ಪ್ರಕರಣಗಳು – 3,68,205 ಹಾಗೂ ವಸೂಲಿಯಾದ ದಂಡ – 28.26 ಕೋಟಿ
ಹುಬ್ಬಳ್ಳಿ ವಿಭಾಗ: ಪ್ರಕರಣಗಳು – 96790 ಹಾಗೂ ವಸೂಲಿಯಾದ ದಂಡ – 6.36 ಕೋಟಿ
ಮೈಸೂರು ವಿಭಾಗ: ಪ್ರಕರಣಗಳು – 1,00,538 ಹಾಗೂ ವಸೂಲಿಯಾದ ದಂಡ – 5.91 ಕೋಟಿ
ಫ್ಲೈಯಿಂಗ್ ಸ್ಕ್ವಾಡ್: ಪ್ರಕರಣಗಳು – 61,481 ಹಾಗೂ ವಸೂಲಿಯಾದ ದಂಡ – 5.77 ಕೋಟಿ
ರಾಜ್ಯದಲ್ಲಿ ಭ್ರಷ್ಟಾಚಾರ ನಿಯಂತ್ರಣಕ್ಕಾಗಿ ಲೋಕಾಯುಕ್ತರು ಆಗಾಗ್ಗೆ ದಾಳಿ ನಡೆಸುವುದು ಮಾಧ್ಯಮಗಳಲ್ಲಿ ವರದಿಯಾಗುತ್ತವೆ. ಈಗಿನ ಪತ್ರಿಕಾ ವರದಿಗಳ ಪ್ರಕಾರ, ಮೂರೂವರೆ ವರ್ಷಗಳಲ್ಲಿ…
ನಂದಿನಿ ಉತ್ಪನ್ನಗಳಾದ, ತುಪ್ಪ ಕೆ.ಜಿಗೆ ರೂ.೧೫ ಮತ್ತು ಬೆಣ್ಣೆ ಕೆ.ಜಿಗೆ ರೂ.೫೦ ಅನ್ನು ಇದೇ ತಿಂಗಳ ೨೪ ರಿಂದಲೇ ಗ್ರಾಹಕರಿಗೆ…
ಬರ...ಅಬ್ಬರ ! ಬರ ಬರ ಬರ್ಬರ ಮಳೆ ಇಲ್ಲ; ಬೆಳೆ ಇಲ್ಲ ಬರಡಾಯಿತಲ್ಲ ಬದುಕೆಲ್ಲ ಜನ-ಜನುವಾರುಗಳ ಬದುಕೀಗ ಅಕ್ಷರಶಃ ಬರ್ಬರ…
ನಂದನ್ ನಿಲೇಕಣಿ ಅವರ ನೇತೃತ್ವದಲ್ಲಿ ಪರೀಕ್ಷಾ ವ್ಯವಸ್ಥೆಯ ಸುಧಾರಣೆಗೆ ಉನ್ನತ ಅಧಿಕಾರ ಕಾರ್ಯಪಡೆ ರಚಿಸಿರುವುದು ಅತ್ಯಂತ ಸಮಯೋಚಿತ ಕ್ರಮವಾಗಿದೆ. ಪ್ರತಿವರ್ಷ…
ಶಾಂತರಾಜು ಬಸ್ತೀಪುರ ಬಜೆಟ್ ಘೋಷಣೆಯಂತೆ ಪ್ರೌಢಶಾಲೆಗೂ ವಿಸ್ತರಣೆಯಾಗಲಿ ಬಡತನ ಕುಟುಂಬದ ಮಕ್ಕಳ ವಿದ್ಯಾಭ್ಯಾಸಕ್ಕೆ ಆರ್ಥಿಕ ಸಂಕಷ್ಟ ಅಡ್ಡಿಯಾಗಬಾರದು ಎಂಬ ಉದ್ದೇಶದಿಂದ…
ನವೀನ್ ಡಿಸೋಜ ಮಡಿಕೇರಿ: ಕೋವಿಡ್-೧೯ ಸೋಂಕಿನ ಪ್ರಕರಣಗಳು ಮತ್ತೆ ವರದಿಯಾಗುತ್ತಿರುವ ಹಿನ್ನೆಲೆಯಲ್ಲಿ ಕೊಡಗು ಜಿಲ್ಲಾ ಆರೋಗ್ಯ ಇಲಾಖೆ ವತಿಯಿಂದ ಅಗತ್ಯ…