ಟಿಕೆಟ್ ಇಲ್ಲದೇ ರೈಲಿನಲ್ಲಿ ಪ್ರಯಾಣಿಸುವ ಕಿಡಿಗೇಡಿಗಳಿಗೆ ರೈಲ್ವೆ ಇಲಾಖೆ ದಂಡದ ಬಿಸಿ ಮುಟ್ಟಿಸಿದೆ. ಏಪ್ರಿಲ್ 1ರಿಂದ ಡಿಸೆಂಬರ್ 31ರವರೆಗೆ ಟಿಕೆಟ್ ರಹಿತ ಪ್ರಯಾಣ ಮಾಡುತ್ತಿದ್ದ ಒಟ್ಟು 6,27,014 ಜನರಿಂದ ನೈಋತ್ಯ ರೈಲ್ವೆ ಬರೋಬ್ಬರಿ 46.31 ಕೋಟಿ ದಂಡವನ್ನು ವಸೂಲಿ ಮಾಡಿದೆ.
ಇನ್ನು ಕಳೆದ ವರ್ಷಕ್ಕೆ ಹೋಲಿಕೆ ಮಾಡಿದರೆ ದಂಡ ಸಂಗ್ರಹಣೆಯಲ್ಲಿ ಶೇ. 9.95ರಷ್ಟು ಏರಿಕೆ ಕಂಡುಬಂದಿದೆ. ಡಿಸೆಂಬರ್ ತಿಂಗಳೊಂದರಲ್ಲಿಯೇ 72,041 ಪ್ರಕರಣಗಳಿದ್ದು, 5.13 ಕೋಟಿ ರೂಪಾಯಿ ದಂಡ ವಸೂಲಿಯಾಗಿದೆ. ಹುಬ್ಬಳ್ಳಿ, ಬೆಂಗಳೂರು ಹಾಗೂ ಮೈಸೂರು ವಿಭಾಗಗಳಲ್ಲಿ ಎಷ್ಟು ಪ್ರಕರಣಗಳು ಪತ್ತೆಯಾಗಿವೆ ಹಾಗೂ ಇವುಗಳಿಂದ ವಸೂಲಿಯಾದ ದಂಡದ ಮೊತ್ತವೆಷ್ಟು ಎಂಬ ಮಾಹಿತಿ ಈ ಕೆಳಕಂಡಂತಿದೆ.
ಬೆಂಗಳೂರು ವಿಭಾಗ: ಪ್ರಕರಣಗಳು – 3,68,205 ಹಾಗೂ ವಸೂಲಿಯಾದ ದಂಡ – 28.26 ಕೋಟಿ
ಹುಬ್ಬಳ್ಳಿ ವಿಭಾಗ: ಪ್ರಕರಣಗಳು – 96790 ಹಾಗೂ ವಸೂಲಿಯಾದ ದಂಡ – 6.36 ಕೋಟಿ
ಮೈಸೂರು ವಿಭಾಗ: ಪ್ರಕರಣಗಳು – 1,00,538 ಹಾಗೂ ವಸೂಲಿಯಾದ ದಂಡ – 5.91 ಕೋಟಿ
ಫ್ಲೈಯಿಂಗ್ ಸ್ಕ್ವಾಡ್: ಪ್ರಕರಣಗಳು – 61,481 ಹಾಗೂ ವಸೂಲಿಯಾದ ದಂಡ – 5.77 ಕೋಟಿ
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…