ಬೆಂಗಳೂರಿನ ಹಲವು ಮಾಲ್ ಹಾಗೂ ಅಂಗಡಿಗಳಲ್ಲಿ ಕನ್ನಡ ಫಲಕಗಳಿಲ್ಲ, ಕನ್ನಡ ಫಲಕಗಳು ಕಡ್ಡಾಯವಾಗಬೇಕು ಎಂದು ಇತ್ತೀಚೆಗಷ್ಟೇ ಕನ್ನಡ ಪರ ಸಂಘಟನೆಗಳು ಕನ್ನಡ ಜಾಗೃತಿ ಅಭಿಯಾನದಡಿಯಲ್ಲಿ ವಿವಿಧ ಮಾಲ್ ಹಾಗೂ ಅಂಗಡಿಗಳಿಗೆ ನುಗ್ಗಿ ಕನ್ನಡವಿಲ್ಲದ ಬೋರ್ಡ್ಗಳನ್ನು ಒಡೆದು ಹಾಕಿದ್ದರು.
ಅದರಲ್ಲಿಯೂ ಮಾಲ್ ಆಫ್ ಏಷ್ಯಾದಲ್ಲಿ ಕನ್ನಡವೇ ಇಲ್ಲದ ಕಾರಣ ಈ ಮಾಲ್ ಕನ್ನಡ ಪರ ಹೋರಾಟಗಾರರ ಟಾರ್ಗೆಟ್ ಅಗಿತ್ತು. ಹೀಗಾಗಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ಇಂದಿನಿಂದ ( ಡಿಸೆಂಬರ್ 31 ) ಜನವರಿ 15ರವರೆಗೆ ಈ ಮಾಲ್ ಬಂದ್ ಮಾಡಲು ಮಾಡಿ ನಗರ ಪೊಲೀಸ್ ಆಯುಕ್ತ ದಯಾನಂದ್ ಆದೇಶ ಹೊರಡಿಸಿದ್ದರು. ಮಾಲ್ ಸುತ್ತಮುತ್ತ 144 ಜಾರಿ ಮಾಡಿ ನಿಷೇದಾಜ್ಞೆಯನ್ನು ಹೇರಲಾಗಿತ್ತು. ಇನ್ನು ಮಾಲ್ ಮುಂದೆ ʼಮಾಲ್ ಕ್ಲೋಸ್ಡ್ʼ ಎಂಬ ಫಲಕ ಇಟ್ಟು ಬಾಗಿಲು ಬಂದ್ ಮಾಡಲಾಗಿತ್ತು.
ಈ ಕುರಿತು ಇದೀಗ ಸ್ಪಾರ್ಕಲ್ ಒನ್ ಮಾಲ್ ಡೆವಲಪರ್ಸ್ ಪ್ರೈವೇಟ್ ಲಿಮಿಟೆಡ್ ರಿಟ್ ಅರ್ಜಿ ಸಲ್ಲಿಸಿ ನಿರ್ಬಂಧವನ್ನು ಪ್ರಶ್ನಿಸಿ ಕೋರ್ಟ್ ಮೆಟ್ಟಿಲೇರಿದೆ.
ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿ ಮೇಲೆ ಶುಕ್ರವಾರ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ದು, ಈ ಬಗ್ಗೆ…
ಮೈಸೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಫೈಲ್ಗಳು ಮುಡಾ ಕಚೇರಿಯಲ್ಲಿರುವುದಕ್ಕಿಂತ ಸಚಿವ ಭೈರತಿ ಸುರೇಶ್ ಮನೆಯಲ್ಲೇ ಅಧಿಕವಾಗಿವೆ ಎಂದು ಶಾಸಕ ಟಿ.ಎಸ್.ಶ್ರೀವತ್ಸ…
ಮಂಡ್ಯ: ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಸರ್ಕಾರಿ ಭೂಮಿಯನ್ನು ಲಪಾಟಾಯಿಸಿದ್ದಾರೆ, ಅದಕ್ಕೆ ಆ ನಿವೇಶನಗಳನ್ನು ವಾಪಾಸ್ಸು ಮಾಡಿದ್ದಾರೆ ಎಂದು ಕೇಂದ್ರ…
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಇಂದು (ಅಕ್ಟೋಬರ್.18) ಮೂರು ಕಡೆಗಳಲ್ಲಿ ದಾಳಿ ನಡೆಸಿದ್ದು, ಈ ದಾಳಿಯು ಸಂಪೂರ್ಣವಾಗಿ…
ಬೆಂಗಳೂರು: ಮುಡಾ ಕೇಸ್ ಮುಚ್ಚಿ ಹಾಕುವಲ್ಲಿ ಸರ್ಕಾರಕ್ಕೆ ಲೋಕಾಯುಕ್ತ ಸಹಾಯ ಮಾಡುತ್ತದೆ ಎಂಬ ಶಂಕೆ ಇದೆ. ಹೀಗಾಗಿ ಮುಡಾ ಪ್ರಕರಣವನ್ನು…
ಹೊಸದಿಲ್ಲಿ: ಆತ್ಯಾಚಾರ ಸಂತ್ರಸ್ತೆಯ ಅಪಹರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಭವಾನಿ ರೇವಣ್ಣಗೆ ಹೈಕೋರ್ಟ್ನಿಂದ ಜಾಮೀನು ಮಂಜೂರು ಮಾಡಲಾಗಿತ್ತು. ಇದನ್ನು ಪ್ರಶ್ನಿಸಿ ಎಸ್ಐಟಿ…